ಐಪಿಎಲ್ 2023 | ಬೌಲ್ಟ್, ಅಶ್ವಿನ್‌ ದಾಳಿಗೆ ಡೆಲ್ಲಿ ಪತನ; ವಾರ್ನರ್‌ ಪಡೆಗೆ ಸತತ ಮೂರನೇ ಸೋಲು

Date:

ವೇಗದ ಬೌಲರ್‌ ಟ್ರೆಂಟ್ ಬೌಲ್ಟ್ ಹಾಗೂ ಸ್ಪಿನ್ನರ್‌ಗಳಾದ ಆರ್‌ ಅಶ್ವಿನ್‌, ಆರ್‌ ಚಾಹಲ್ ಅವರ ದಾಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ 57 ರನ್‌ಗಳ ಅಂತರದಲ್ಲಿ ಸೋಲಿಗೆ ಶರಣಾಯಿತು.

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 16ನೇ ಆವೃತ್ತಿಯ 11ನೇ ಪಂದ್ಯದಲ್ಲಿ ರಾಜಸ್ಥಾನ್‌ ನೀಡಿದ 200 ನ್‌ಗಳ ಸವಾಲನ್ನು ಬೆನ್ನಟ್ಟಿದ ಡೆಲ್ಲಿ ತಂಡ 9 ವಿಕೆಟ್ ನಷ್ಟಕ್ಕೆ 142 ರನ್‌ಗಳಷ್ಟೆ ಗಳಿಸಲು ಶಕ್ತವಾಯಿತು. ಇದರೊಂದಿಗೆ ಡೆಲ್ಲಿ ಟೂರ್ನಿಯಲ್ಲಿ ಸತತ ಮೂರು ಸೋಲು ಕಂಡಿತು.

ನಾಯಕ ಡೇವಿಡ್ ವಾರ್ನರ್‌ ಅರ್ಧ ಶತಕ 65 (55 ಎಸೆತ, 7 ಬೌಂಡರಿ) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಲಲಿತ್‌ ಯಾದವ್ 38 (24 ಎಸೆತ, 5 ಬೌಂಡರಿ) ರನ್‌ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟ್ಸಮನ್‌ಗಳ್ಯಾರೂ ಪ್ರತಿರೋಧ ತೋರದೆ ಪೆವಿಲಿಯನ್‌ ಕಡೆ ಹೆಜ್ಜೆ ಹಾಕಿದರು.

ಟ್ರೆಂಟ್ ಬೌಲ್ಟ್ 29/3, ಆರ್‌ ಚಾಹಲ್ 27/3 ಹಾಗೂ ಆರ್‌ ಅಶ್ವಿನ್ 25/2 ವಿಕೆಟ್ ಕಬಳಿಸಿ ರಾಜಸ್ಥಾನ ಗೆಲುವಿನ ರೂವಾರಿಯಾದರು.

ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ ರಾಯಲ್ಸ್‌, ಯಶಸ್ವಿ ಜೈಸ್ವಾಲ್‌ ಮತ್ತು ಜಾಸ್‌ ಬಟ್ಲರ್‌ ಅವರ ಅರ್ಧ ಶತಕದ ಬಲದಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 199 ರನ್‌ ಕಲೆ ಹಾಕಿತು. ಇವರಿಬ್ಬರು ಯಶಸ್ವಿ ಜೈಸ್ವಾಲ್‌ 60 ರನ್‌ (31 ಚೆಂಡು,11 ಬೌಂಡರಿ, 1 ಸಿಕ್ಸರ್) ಮತ್ತು ಜಾಸ್‌ ಬಟ್ಲರ್‌ 79 ರನ್‌ (51 ಎಸೆತ, 11 ಬೌಂಡರಿ, 1 ಸಿಕ್ಸರ್) ಪೇರಿಸುವ ಮೂಲಕ ಮೊದಲ ವಿಕೆಟ್‌ಗೆ 8.3 ಓವರ್‌ಗಳಲ್ಲೇ 98 ರನ್‌ ಗಳಿಸಿದ್ದರು.

ಕೊನೆಯಲ್ಲಿ ಶಿಮ್ರಾನ್ ಹೆಟ್ಮೆಯರ್ 21 ಎಸೆತಗಳಲ್ಲಿ 4 ಸಿಕ್ಸರ್‌ ಮತ್ತು ಒಂದು ಬೌಂಡರಿ ಮೂಲಕ 39 ರನ್‌ ಗಳಿಸಿ ರಾಯಲ್ಸ್‌ ಮೊತ್ತವನ್ನು 199ಕ್ಕೆ ಕೊಂಡೊಯ್ದರು. ಡೆಲ್ಲಿ ಪರ ಮುಕೇಶ್‌ ಕುಮಾರ್‌ 2 ಮತ್ತು ಕುಲ್‌ದೀಪ್‌ ಯಾದವ್‌ ಮತ್ತು ರೋವ್‌ಮನ್‌ ಪೊವೆಲ್‌ ತಲಾ ಒಂದು ವಿಕೆಟ್‌ ಪಡೆದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇವರು ಆತನಿಗೆ ಮರುಜನ್ಮ ನೀಡಿದ್ದಾನೆ’: ಪ್ರಾಣ ಉಳಿಸಿದ ನಂತರ ವಿಡಿಯೋ ಪೋಸ್ಟ್ ಮಾಡಿದ ಶಮಿ

ಇತ್ತೀಚಿಗೆ ನಡೆದ ಏಕದಿನ ವಿಶ್ವಕಪ್‌ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಭಾರತ...

ಟಿ20 | ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾಗೆ ರೋಚಕ ಗೆಲುವು: ಜೋಶ್ ಇಂಗ್ಲಿಸ್ ಶತಕ ವ್ಯರ್ಥ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 2 ವಿಕೆಟ್...

ಕ್ರಿಕೆಟಿಗ ಶ್ರೀಶಾಂತ್ ವಿರುದ್ಧ 18.7 ಲಕ್ಷ ರೂ. ವಂಚನೆ, ದೂರು ದಾಖಲು

ಉತ್ತರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ...

ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂತರ ಇದೀಗ ಪಶ್ಚಿಮ ಬಂಗಾಳ ಮುಖ್ಯಮಂತ್ರಿ...