ಮೂರನೇ ಟೆಸ್ಟ್ | ಜೈಸ್ವಾಲ್ ದಾಖಲೆಯ ದ್ವಿಶತಕ ;556 ರನ್ ಮುನ್ನಡೆ ಪಡೆದ ಭಾರತ

Date:

Advertisements

ಇಂಗ್ಲೆಂಡ್ ವಿರುದ್ಧದ ರಾಜಕೋಟ್ ಟೆಸ್ಟ್ ಪಂದ್ಯದ ಮೂರನೇ ದಿನದಾಟದಲ್ಲಿ ಎರಡನೇ ಇನಿಂಗ್ಸ್‍ನಲ್ಲಿ ನಲ್ಲಿ ನಲ್ಲಿ ಭಾರತ 556 ಮುನ್ನಡೆ

ಪಡೆದು ಡಿಕ್ಲೇರ್ ಮಾಡಿಕೊಂಡಿದೆ.  ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‍  ದ್ವಿಶತಕ ಬಾರಿಸಿ ಮತ್ತೆ ದಾಖಲೆ ಬರೆದರು.

ಯಶಸ್ವಿ ಜೈಸ್ವಾಲ್‍   ಒಂದೇ ಸರಣಿಯಲ್ಲಿ  ಎರಡು ದ್ವಿಶತಕ ಬಾರಿಸಿದ ಭಾರತದ ಮೂರನೇ ಆಟಗಾರರಾದರು. ಈ ಮೊದಲು ವಿನು ಮಕಂಡ್ ಹಾಗೂ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.

Advertisements

ಸತತ ಎರಡನೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಭರ್ಜರಿ  214 ರನ್ ಬಾರಿಸಿದರು. 236 ಎಸೆತಗಳ ಅವರ ಆಟದಲ್ಲಿ 14 ಬೌಂಡರಿ ಹಾಗೂ 12 ಸ್ಫೋಟಕ  ಸಿಕ್ಸರ್‍ ಗಳಿದ್ದವು. ಭೋಜನ ವಿರಾಮದ ಅಂತ್ಯಕ್ಕೆ 98 ಓವರ್‍ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 430 ರನ್ ಗಳಿಸಿ 556 ರನ್‍ ಮುನ್ನಡೆ ಪಡೆದಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

91 ರನ್ ಗಳಿಸಿದ್ದ(9 ಬೌಂಡರಿ, 2 ಸಿಕ್ಸರ್) ಶುಬ್ಮನ್ ಗಿಲ್ ರನೌಟ್‍ ಆಗಿ ಶತಕ ತಪ್ಪಿಸಿಕೊಂಡರು. 27 ರನ್‍ ಗಳಿಸಿ ಕುಲ್‍ದೀಪ್ ಯಾದವ್‍ ಔಟಾದರೆ, ಸರ್ಫರಾಜ್‍ ಖಾನ್ ಅಜೇಯ 61 ರನ್‍ ಗಳಿಸಿ ಜೈಸ್ವಾಲ್‍ ಅವರೊಂದಿಗೆ 5ನೇ ವಿಕೆಟ್ ಜೊತೆಯಾಟದಲ್ಲಿ172 ರನ್ ಗಳಿಸಿದರು.

ವೈಯಕ್ತಿಕ ಕಾರಣಗಳಿಂದ ಬಿಡುವು ಪಡೆದಿದ್ದ ರವಿಚಂದ್ರನ್ ಅಶ್ವಿನ್ ಅವರು ನಾಲ್ಕನೇ ದಿನದಾಟದಲ್ಲಿ ಮತ್ತೆ ತಂಡ ಸೇರಿಕೊಂಡಿದ್ದಾರೆ. ಕೌಟುಂಬಿಕ ತುರ್ತು ಕಾರಣಗಳಿಂದ ಅಶ್ವಿನ್ ಅವರು ಮೂರನೇ ದಿನದಾಟ ಆಡಿರಲಿಲ್ಲ. ಅವರು ರಾಜಕೋಟ್ ನಿಂದ ಚೆನ್ನೈಗೆ ತೆರಳಿದ್ದರು. ಅಶ್ವಿನ್ ಅವರ ತಾಯಿಗೆ ಅನಾರೋಗ್ಯವಾದ ಕಾರಣ ತವರಿಗೆ ಮರಳಿದ್ದರು.

ಇದೀಗ ನಾಲ್ಕನೇ ದಿನದಾಟದಲ್ಲಿ ರವಿಚಂದ್ರನ್ ಅಶ್ವಿನ್ ಅವರು ನಾಲ್ಕನೇ ದಿನಕ್ಕೆ ತಂಡ ಸೇರಿಕೊಂಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X