ರಚಿನ್‌ ರವೀಂದ್ರ ಶತಕ; ಮೊದಲ ಇನಿಂಗ್ಸ್‌ನಲ್ಲಿ ಕಿವೀಸ್‌ 356 ರನ್‌ ಮುನ್ನಡೆ

Date:

Advertisements

ಮಧ್ಯಮ ಕ್ರಮಾಂಕದ ಆಟಗಾರ ಬೆಂಗಳೂರು ಮೂಲದ ರಚಿನ್‌ ರವೀಂದ್ರ ಅವರ ಅಮೋಘ ಶತಕ ಹಾಗೂ ಬೌಲರ್‌ ಟಿಮ್‌ ಸೌಥಿ ಅವರ ಭರ್ಜರಿ ಅರ್ಧ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ ಮೊದಲ ಇನಿಂಗ್ಸ್‌ನಲ್ಲಿ 91.3 ಓವರ್‌ಗಳಲ್ಲಿ 402 ಗಳನ್ನು ದಾಖಲಿಸಿ, 356 ರನ್‌ಗಳ ಮುನ್ನಡೆ ಪಡೆದಿದೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಮೂರನೇ ದಿನವಾದ ಇಂದು 180/3 ವಿಕೆಟ್‌ ನಷ್ಟದೊಂದಿಗೆ ಆಟ ಆರಂಭಿಸಿದ ಕಿವೀಸ್ ಪಡೆಗೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಆಸರೆಯಾದರು. ಉಳಿದ ಬ್ಯಾಟರ್‌ಗಳು ಭಾರತದ ಬೌಲಿಂಗ್‌ ದಾಳಿಗೆ ಸಿಲುಕಿ ಪೆವಿಲಿಯನ್‌ಗೆ ತೆರಳುತ್ತಿದ್ದರೆ ರಚಿನ್‌ ರವೀಂದ್ರ ಹಾಗೂ ಟಿಮ್‌ ಸೌಥಿ ಉತ್ತಮ ಜೊತೆಯಾಟದೊಂದಿಗೆ ತಂಡವನ್ನು 400 ಗಡಿ ದಾಟಲು ಕಾರಣರಾದರು.

ಈ ಸುದ್ದಿ ಓದಿದ್ದೀರಾ? ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್‌

Advertisements

137 ರನ್‌ಗಳ 8ನೇ ವಿಕೆಟ್‌ ಜೊತೆಯಾಟದೊಂದಿಗೆ ಇಬ್ಬರು ಆಟಗಾರರು ಭರ್ಜರಿ ಆಟವಾಡಿದರು. ರಚಿನ್‌ ರವೀಂದ್ರ 157 ಎಸೆತಗಳಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 137 ರನ್‌ ಬಾರಿಸಿದರು. ರಚಿನ್‌ಗೆ ಉತ್ತಮ ಜೊತೆ ನೀಡಿದ ಟಿಮ್‌ ಸೌಥಿ 73 ಚೆಂಡುಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳೊಂದಿಗೆ 65 ರನ್‌ ಸಿಡಿಸಿದರು.

ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕುಲ್‌ದೀಪ್‌ ಯಾದವ್‌ ತಲಾ 3 ವಿಕೆಟ್, ಸಿರಾಜ್‌ 2 ಹಾಗೂ ಅಶ್ವಿನ್‌, ಬುಮ್ರಾ ತಲಾ ಒಂದೊಂದು ವಿಕೆಟ್‌ ಕಬಳಿಸಿ ನ್ಯೂಜಿಲೆಂಡ್‌ ಆಲೌಟ್‌ ಆಗಲು ಪ್ರಮುಖ ಪಾತ್ರ ವಹಿಸಿದರು.

2ನೇ ಇನಿಂಗ್ಸ್‌ ಆರಂಭಿಸಿರುವ ಭಾರತ ಟೀ ವಿರಾಮದ ವೇಳೆಗೆ ವಿಕೆಟ್‌ ನಷ್ಟವಿಲ್ಲದೆ 6 ಓವರ್‌ಗಳಲ್ಲಿ 22 ರನ್‌ ಗಳಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X