ಬಿಸಿಸಿಐ ನಿಯಮ ಉಲ್ಲಂಘಿಸಿದ ರವೀಂದ್ರ ಜಡೇಜಾ; ನಿಷೇಧ ಶಿಕ್ಷೆ ಸಾಧ್ಯತೆ

Date:

Advertisements

ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ, ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ ದಿನದ ಆಟ ಆರಂಭವಾಗುವ ಮೊದಲೇ ದೊಡ್ಡ ತಪ್ಪನ್ನು ಎಸಗಿದ್ದಾರೆ.

ಈ ಟೆಸ್ಟ್ ಪಂದ್ಯದಲ್ಲಿ ಜಡೇಜಾ 89 ರನ್ ಗಳಿಸಿ ತಂಡಕ್ಕೆ ನರವಾದರೂ, ಅವರು ಬಿಸಿಸಿಐ ನಿಯಮವನ್ನು ಮುರಿದಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ನಂತರ, ಬಿಸಿಸಿಐ ಎಲ್ಲ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ಕೆಲವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಅದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಳಲಾಗಿತ್ತು. ಆದಾಗ್ಯೂ, ಎಡ್ಜ್‌ಬಾಸ್ಟನ್ ಟೆಸ್ಟ್ ಪಂದ್ಯದ ಎರಡನೇ ದಿನದ ಆಟ ಪ್ರಾರಂಭವಾಗುವ ಮೊದಲು, ಜಡೇಜಾ ಒಂದು ದೊಡ್ಡ ನಿಯಮವನ್ನು ಮುರಿದರು, ಇದಕ್ಕಾಗಿ ಮಂಡಳಿಯಿಂದ ಶಿಕ್ಷೆಯಾಗುತ್ತದೆಯೇ ಎಂಬುದರ ಮೇಲೆ ಎಲ್ಲರ ಕುತೂಹಲ ಮೂಡಿದೆ.

ಎರಡನೇ ದಿನದ ಆಟ ಶುರು ಆಗುವುದಕ್ಕೂ ಮುನ್ನ, ಟಮ ಇಂಡಿಯಾ ತಮ್ಮ ಹೋಟೆಲ್‌ನಿಂದ ಕ್ರೀಡಾಂಗಣಕ್ಕೆ ಬರುತ್ತಿದ್ದಾಗ, ಜಡೇಜಾ ಬಿಸಿಸಿಐ ಮಾಡಿದ ನಿಯಮವನ್ನು ನಿರ್ಲಕ್ಷಿಸಿದರು. ಭಾರತದ 2024-25 ಆಸ್ಟ್ರೇಲಿಯಾ ಪ್ರವಾಸದ ನಂತರ ಜಾರಿಗೆ ತರಲಾದ ಬಿಸಿಸಿಐ ಶಿಷ್ಟಾಚಾರವನ್ನು ರವೀಂದ್ರ ಜಡೇಜಾ ಉಲ್ಲಂಘಿಸಿದರು.

Advertisements

ಇದನ್ನು ಓದಿದ್ದೀರಾ? IND -ENG 2ND Test: ಮೊದಲ ದಿನ ಭಾರತ ಶುಭಾರಂಭ; ಗಿಲ್‌ ಶತಕ, ಜೈಸ್ವಾಲ್‌ ಅರ್ಧ ಶತಕ

ಈ ಶಿಷ್ಟಾಚಾರದ ಪ್ರಕಾರ, ಎಲ್ಲ ಆಟಗಾರರು ತಂಡದ ಬಸ್‌ನಲ್ಲಿ ಒಟ್ಟಿಗೆ ಮೈದಾನಕ್ಕೆ ಮತ್ತು ಹೊರಗೆ ಪ್ರಯಾಣಿಸಬೇಕಾಗುತ್ತದೆ, ಇದರಲ್ಲಿ ಯಾವುದೇ ವೈಯಕ್ತಿಕ ಚಲನೆಗೆ ಅವಕಾಶವಿಲ್ಲ, ಆದರೆ ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಜಡೇಜಾ ತಂಡದ ಬಸ್‌ನಲ್ಲಿ ಕ್ರೀಡಾಂಗಣವನ್ನು ತಲುಪಲಿಲ್ಲ. ಅವರು ಇಲ್ಲಿಗೆ ಒಬ್ಬಂಟಿಯಾಗಿ ಬಂದು ಎಸ್‌ಒಪಿಯನ್ನು ಉಲ್ಲಂಘಿಸಿದರು. ಉಳಿದ ಆಟಗಾರರು ಬರುವ ಮೊದಲು ಅವರು ಎಡ್ಜ್‌ಬಾಸ್ಟನ್ ತಲುಪಿದ್ದರು. ಆದರೆ, ತಂಡದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಜಡೇಜಾ ಈ ನಿಯಮವನ್ನು ಮುರಿದಿದ್ದಾರೆ ಎನ್ನಲಾಗಿದೆ.

ಎರಡನೇ ದಿನದಾಟದಲ್ಲಿ ಉತ್ತಮವಾಗಿ ಬ್ಯಾಟಿಂಗ್ ಮಾಡಿದ ರವಿಂದ್ರ ಜಡೇಜಾ 89 ರನ್‌ ಗಳಿಸುವ ಮೂಲಕ ಟೀಂ ಇಂಡಿಯಾ 500 ರನ್‌ ದಾಟಲು ಕೊಡುಗೆ ನೀಡಿದರು. 7 ವಿಕೆಟ್‌ ಜೊತೆಯಾಟದಲ್ಲಿ ನಾಯಕ ಶುಭಮನ್‌ ಗಿಲ್‌ ಅವರೊಂದಿಗೆ 203 ರನ್‌ ಪೇರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X