WPL ಫೈನಲ್ | ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ: 113 ರನ್‌ಗಳಿಗೆ ಆಲೌಟ್

Date:

Advertisements

ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ಡೆಲ್ಲಿ ತಂಡದ ನಡುವೆ ನಡೆಯುತ್ತಿರುವ ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ, 114 ರನ್‌ಗಳ ಸಾಧಾರಣ ಸವಾಲು ನೀಡಿದೆ. ಆರ್‌ಸಿಬಿ ಫೈನಲ್‌ ಪಂದ್ಯವನ್ನು ಗೆದ್ದರೆ, ಈ ಬಾರಿ ಕಪ್ ನಮ್ದೇ ಆಗಲಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿತ್ತು. ಆರ್​ಸಿಬಿ ಆರಂಭದಲ್ಲಿ ಬೌಲಿಂಗ್‌ನಲ್ಲಿ ವಿಫಲವಾಯಿತಾದರೂ, ಎಂಟನೇ ಓವರ್ ಎಸೆದ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಬಳಿಕ ಡೆಲ್ಲಿ 113 ರನ್‌ಗಳಿಗೆ ಆಲೌಟ್‌ ಆಗಿದೆ. 64 ರನ್‌ ವೇಳೆ ಶೂನ್ಯ ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿ ತಂಡ, 18.3 ಓವರ್‌ಗಳಲ್ಲಿ ಆಲೌಟ್ ಆಗಿದೆ.

ಆರ್‌ಸಿಬಿ ಸ್ಪಿನ್ ದಾಳಿಗೆ ಕುಸಿದ ಡೆಲ್ಲಿ ಪರವಾಗಿ ಶಫಾಲಿ ವರ್ಮಾ, 44 ರನ್‌ ಗಳಿಸಿ ಮಿಂಚಿದರು. ಬೌಲಿಂಗ್‌ನಲ್ಲಿ ಶ್ರೇಯಾಂಕ ಪಾಟೀಲ್ 4 ವಿಕೆಟ್, ಸೋಫಿ ಮೋಲಿನೆಕ್ಸ್‌ 3 ವಿಕೆಟ್ ಕಿತ್ತರೆ, ಆಶಾ ಶೋಭನ 2 ವಿಕೆಟ್ ಗಳಿಸುವಲ್ಲಿ ಸಫಲರಾದರು.

Advertisements

ಪಂದ್ಯ ತಿರುಗಿಸಿದ ಸೋಪಿ ಮೋಲಿನೆಕ್ಸ್ ಎಸೆದ 8ನೇ ಓವರ್

ಸೋಫಿ ಮೋಲಿನೆಕ್ಸ್‌ ಎಸೆದ ಎಂಟನೇ ಓವರ್‌ ಪಂದ್ಯವು ಆರ್‌ಸಿಬಿ ಪರವಾಗಿ ವಾಲಲು ನೆರವಾಯಿತು. ಮೊದಲ ಎಸೆತದ ಎದುರಿಸಿದ ದೆಹಲಿ ತಂಡದ ಶಫಾಲಿ ವರ್ಮಾ ಅವರು ದೊಡ್ಡ ಹೊಡೆತಕ್ಕೆ ಯತ್ನಿಸಿ, ಕ್ಯಾಚಿತ್ತು ನಿರ್ಗಮಿಸಿದರು. ಆ ಬಳಿಕ ಕ್ರೀಸ್‌ಗೆ ಬಂದ ಜೆಮೀಮಾ ರೋಡ್ರಿಗಸ್ ತಾನೆದುರಿಸಿದ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ನಂತರ ಕ್ರೀಸ್‌ಗೆ ಬಂದ ಕ್ಯಾಪ್ಸೆ ಕೂಡ ಕ್ಲೀನ್ ಬೌಲ್ಡ್ ಆದರು. ಆ ಮೂಲಕ ಆರ್‌ಸಿಬಿ ಬೌಲರ್ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತು ದೆಹಲಿ ತಂಡಕ್ಕೆ ಆಘಾತ ನೀಡಿದರು.

 

 

ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ಆರ್‌ಸಿಬಿ

ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್​ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು.

ಇದನ್ನು ಓದಿದ್ದೀರಾ? WPL ಫೈನಲ್ | 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಅಂದರೆ ಆರ್​ಸಿಬಿ ತಂಡ ಡೆಲ್ಲಿ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆರ್‌ಸಿಬಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X