ಆರ್‌ಸಿಬಿ-ರಾಜಸ್ಥಾನ್ ಎಲಿಮಿನೇಟರ್ ಪಂದ್ಯ | ಸೋತವರು ಮನೆಗೆ; ಗೆದ್ದವರಿಗೆ ಮತ್ತೊಂದು ಅಗ್ನಿಪರೀಕ್ಷೆ

Date:

Advertisements

ಒಂದೆಡೆ ಯಾರೂ ನಿರೀಕ್ಷಿಸದ ರೀತಿಯಲ್ಲಿ ಅದ್ಭುತ ‘ಕಮ್‌ಬ್ಯಾಕ್‌’ ಮೂಲಕ ಸತತ 6 ಪಂದ್ಯಗಳಲ್ಲಿ ಗೆದ್ದಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್‌ಸಿಬಿ. ಮತ್ತೊಂದೆಡೆ ಸತತ 4 ಪಂದ್ಯಗಳ ಸೋಲಿನೊಂದಿಗೆ ಕುಗ್ಗಿ ಹೋಗಿರುವ ಸಂಜು ಸ್ಯಾಮ್ಸನ್ ನೇತೃತ್ವದ ಮಾಜಿ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌ ತಂಡ. ಈ ಎರಡೂ ತಂಡಗಳು ಇಂದು(ಮೇ 22) ಬುಧವಾರ 17ನೇ ಆವೃತ್ತಿ ಐಪಿಎಲ್‌ನ ಎಲಿಮಿನೇಟರ್‌ನಲ್ಲಿ ಸೆಣಸಾಡಲಿವೆ.

ಗೆಲ್ಲುವ ತಂಡ ಎರಡನೇ ಕ್ವಾಲಿಫೈಯರ್‌ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಳ್ಳಲಿದ್ದು, ಸೋಲುವ ತಂಡ ಟೂರ್ನಿಯಿಂದಲೇ ಹೊರಬೀಳಲಿದೆ. ಎರಡನೇ ಕ್ವಾಲಿಫೈಯರ್‌ ಪಂದ್ಯವಯ ಸನ್‌ರೈಸರ್ಸ್‌ ಹೈದರಾಬಾದ್ ವಿರುದ್ಧ ಚೆನ್ನೈಯಲ್ಲಿ ಮೇ 24ರಂದು ನಡೆಯಲಿದೆ.

ಟೂರ್ನಿಯ ಆರಂಭಿಕ ಎಂಟು ಪಂದ್ಯಗಳ ಪೈಕಿ ಏಳರಲ್ಲಿ ಸೋತಿದ್ದ ಆರ್‌ಸಿಬಿ ಪ್ಲೇ-ಆಫ್‌ ಪ್ರವೇಶಿಸಿದ್ದೇ ಎಲ್ಲರನ್ನೂ ಅಚ್ಚರಿಗೊಳಗಾಗುವಂತೆ  ಆಶ್ಚರ್ಯ. ಅತ್ತ ರಾಜಸ್ಥಾನ ಮೊದಲಾರ್ಧದಲ್ಲಿ ಅಬ್ಬರಿಸಿದ್ದರೂ, ಸದ್ಯ ಮಂಕಾಗಿದೆ. ಲೀಗ್‌ ಹಂತದ ಕೊನೆ ಪಂದ್ಯ ಮಳೆಗಾಹುತಿಯಾಗಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ.

Advertisements

ಆರ್‌ಸಿಬಿ ಪರ ಟೂರ್ನಿಯುದ್ದಕ್ಕೂ ಅಬ್ಬರಿಸಿರುವ ವಿರಾಟ್‌ ಕೊಹ್ಲಿ ಮೇಲೆ ಹೆಚ್ಚಿನ ಭಯ ಇದ್ದರೂ, ಕಳೆದ ಕೆಲವು ಪಂದ್ಯಗಳಲ್ಲಿ ತಂಡದ ಸಂಘಟಿತ ಹೋರಾಟ ಎದುರಾಳಿಗಳನ್ನು ಕಂಗೆಟ್ಟಿಸಿದೆ. ಭಾರೀ ಟೀಕೆಗಳನ್ನು ಎದುರಿಸಿದ್ದ ಆರ್‌ಸಿಬಿ ಬೌಲಿಂಗ್‌ ಪಡೆ, ಈಗ ಬಲಿಷ್ಠ ಬ್ಯಾಟಿಂಗ್‌ ಪಡೆಯನ್ನೇ ಕಟ್ಟಿಹಾಕಬಲ್ಲ ಸಾಮರ್ಥ್ಯ ಹೊಂದಿರುವುದನ್ನು ಕಳೆದ ಸಿಎಸ್‌ಕೆ ವಿರುದ್ಧದ ನಾಕೌಟ್ ಪಂದ್ಯದಲ್ಲಿ ಸಾಬೀತುಪಡಿಸಿದೆ.

ಬೌಲಿಂಗ್‌ ವಿಭಾಗವೂ ಬಲಿಷ್ಠವಾಗಿ ಕಳೆದ 4 ಪಂದ್ಯಗಳ ಪೈಕಿ 3ರಲ್ಲಿ ಎದುರಾಳಿ ತಂಡವನ್ನು ಆಲೌಟ್‌ ಮಾಡಿದೆ. ಅಹಮದಾಬಾದ್‌ನಲ್ಲಿ ಈ ಬಾರಿ ನಡೆದ 12 ಇನ್ನಿಂಗ್ಸ್‌ಗಳ ಪೈಕಿ ಕೇವಲ 2ರಲ್ಲಿ 200+ ಮೊತ್ತ ದಾಖಲಾಗಿದ್ದು, ಶಿಸ್ತುಬದ್ಧ ದಾಳಿ ನಡೆಸಿದರೆ ಆರ್‌ಸಿಬಿಗೆ ಗೆಲುವು ಸುಲಭವಾಗಲಿದೆ.

ಇದನ್ನು ಓದಿದ್ದೀರಾ? ಎಲಿಮಿನೇಟರ್ ಪಂದ್ಯ | ಆರ್‌ಸಿಬಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್‌

ನಿರ್ಣಾಯಕ ಘಟ್ಟದಲ್ಲಿ ಫಾರ್ಮ್‌ಗೆ ಮರಳಿರುವ ಆಸ್ಟ್ರೇಲಿಯಾ ತಾರೆಗಳಾದ ಕ್ಯಾಮರೂನ್‌ ಗ್ರೀನ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ಅವರ ಪ್ರದರ್ಶನ ತಂಡದ ಗೆಲುವು-ಸೋಲನ್ನು ನಿರ್ಧರಿಸಲಿದೆ. ದಿನೇಶ್‌ ಕಾರ್ತಿಕ್‌ ತಮ್ಮ ನೈಜ ಫಿನಿಶಿಂಗ್‌ ಹುದ್ದೆಯನ್ನು ಮಹತ್ವದ ಪಂದ್ಯದಲ್ಲಿ ಸಮರ್ಥವಾಗಿ ನಿಭಾಯಿಸಬಲ್ಲರೇ ಎಂಬ ಕುತೂಹಲವಿದೆ.

ಆರ್‌ಸಿಬಿಗೆ ಹೋಲಿಸಿದರೆ ರಾಜಸ್ಥಾನದ ಆತ್ಮವಿಶ್ವಾಸ ಸಂಪೂರ್ಣ ಕುಗ್ಗಿದೆ. ಲೀಗ್‌ ಹಂತದಲ್ಲಿ ಆರ್‌ಸಿಬಿ ವಿರುದ್ಧ ಶತಕ ಬಾರಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದ ಜೋಸ್‌ ಬಟ್ಲರ್‌ ಕೂಡಾ ಈ ಪಂದ್ಯಕ್ಕೆ ಲಭ್ಯರಿಲ್ಲ. ಇದು ರಾಜಸ್ಥಾನಕ್ಕೆ ಹಿನ್ನಡೆಯುಂಟು ಮಾಡಿದರೂ ಅಚ್ಚರಿ ಇಲ್ಲ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X