ಐಪಿಎಲ್ 2025 | ಮಳೆಯಿಂದ ಆರ್‌ಸಿಬಿ – ಕೆಕೆಆರ್‌ ಪಂದ್ಯ ರದ್ದು

Date:

Advertisements

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ 18ನೇ ಆವೃತ್ತಿಯ 58ನೇ ಐಪಿಎಲ್‌ ಪಂದ್ಯ ಮಳೆಯಿಂದ ಸ್ಥಗಿತವಾಗಿದೆ.

ಈ ಪಂದ್ಯದಲ್ಲಿ ಕೆಕೆಆರ್‌ ಹಾಗೂ ಆರ್‌ಸಿಬಿ ತಂಡಗಳು ತಲಾ 1 ಅಂಕಗಳನ್ನು ಹಂಚಿಕೊಂಡಿವೆ. ಈ ಒಂದು ಅಂಕಗಳೊಂದಿಗೆ ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 17 ಅಂಕಗಳನ್ನು ಕಲೆ ಹಾಕಿದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಮೂಲಕ ಹಾಲಿ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕೊಂಚ ದೂರ ಸರಿದಿದೆ. ಒಂದು ವಾರಗಳ ಬಳಿಕ ಐಪಿಎಲ್‌ ಮತ್ತೆ ಆರಂಭವಾಗಿದೆ.

ಆರ್‌ಸಿಬಿ ಆಡಿದ 12 ಪಂದ್ಯಗಳಲ್ಲಿ 8 ಜಯ, 3 ಸೋಲು ಕಂಡಿದ್ದು, 17 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಈ ಅಂಕವನ್ನು ಹಂಚಿಕೊಳ್ಳುವ ಮೂಲಕ ಆರ್‌ಸಿಬಿ ಪ್ಲೇ ಆಫ್‌ ಪ್ರವೇಶಿಸುವ ಕನಸು ಇನ್ನು ಹತ್ತಿರವಾಗಿದೆ. ಆರ್‌ಸಿಬಿ ಇನ್ನು 2 ಪಂದ್ಯಗಳನ್ನು ಆಡಲಿದ್ದು, ಈ 2 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದರೂ ಪ್ಲೇ ಆಫ್‌ ಪ್ರವೇಶಿಸುವ ಆಸೆ ಫಲಿಸುತ್ತದೆ.

Advertisements

ಈ ಸುದ್ದಿ ಓದಿದ್ದೀರಾ? ಸ್ಲಿಪ್​ನಲ್ಲಿ ವಿಕೆಟ್ ಕೀಪರ್ ನಿಂತಿದ್ದಕ್ಕೆ 5 ರನ್‌ ನೀಡಿದ ಅಂಪೈರ್; ಏನಿದು ಹೊಸ ನಿಯಮ?

ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್‌ ವಿರಾಟ್‌ ಕೊಹ್ಲಿ ಇತ್ತೀಚಿಗೆ ಟೆಸ್ಟ್‌ ಪಂದ್ಯಗಳಿಗೆ ವಿದಾಯ ಹೇಳಿದ್ದರು. ವಿರಾಟ್‌ ವಿದಾಯದಿಂದ ಅಭಿಮಾನಿಗಳು ಬೇಸರವಾಗಿದ್ದಾರೆ. ಇನ್ನು ಇವರಿಗೆ ವಿಶೇಷ ಗೌರವ ಸೂಚಿಸಲು ಅಭಿಮಾನಿಗಳು ಆರ್‌ಸಿಬಿ ಹಾಗೂ ಕೆಕೆಆರ್‌ ನಡುವಣ ಪಂದ್ಯದ ವೇಳೆ ಬಿಳಿ ಬಣ್ಣದ ಜೆರ್ಸಿ ಹಾಕಿಕೊಂಡು ಮೈದಾನಕ್ಕೆ ಬಂದಿದ್ದರು. ಈ ಮೂಲಕ ಆರ್‌ಸಿಬಿ ಅಭಿಮಾನಿಗಳು ವಿಶೇಷ ಗೌರವ ನೀಡಿದರು.

ಹಾಲಿ ಚಾಂಪಿಯನ್‌ ಕೆಕೆಆರ್‌ ತಂಡದ ಪ್ಲೇ ಆಫ್‌ ಪ್ರವೇಶಿಸುವ ಆಸೆ ಕಷ್ಟವಾಗಿದೆ. ಕೆಕೆಆರ್‌ ಆಡಿದ 13 ಪಂದ್ಯಗಳಲ್ಲಿ 5 ಜಯ, 6 ಸೋಲು ಕಂಡಿದೆ. ಅಲ್ಲದೆ 2 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೀಗಾಗಿ ಕೆಕೆಆರ್‌ ಮುಂದಿನ ಒಂದು ಪಂದ್ಯವನ್ನು ಗೆದ್ದರೆ 14 ಅಂಕಗಳನ್ನು ಕಲೆ ಹಾಕಬಹುದು. ಈ ಮೂಲಕ ಕೆಕೆಆರ್‌ ಬೇರೆ ತಂಡಗಳ ಫಲಿತಾಂಶವನ್ನು ಕಾದು ನೋಡಬೇಕಿದೆ.

ಕೆಕೆಆರ್‌ ಪ್ಲೇ ಆಫ್‌ ಪ್ರವೇಶಿಸುವುದು ಕೊಂಚ ಕಷ್ಟವಾಗಿದೆ. ಮೇಲಿರುವ ಮುಂಬೈ, ಡೆಲ್ಲಿ ತಂಡಗಳು ಮುಂದಿನ ಪಂದ್ಯಗಳಲ್ಲಿ ಸೋತು, ರನ್‌ ರೇಟ್‌ನಲ್ಲಿ ಹಿಂದಿರಬೇಕಾಗುತ್ತದೆ. ಅಂದಾಗ ಮಾತ್ರ ಕೆಕೆಆರ್‌ ಮುಂದಿನ ಹಂತ ಪ್ರವೇಶಿಸುವ ಆಸೆ ಫಲಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X