ಐಪಿಎಲ್ 2024 | ಅಭಿಮಾನಿಗಳಿಗೆ ಆಘಾತ ನೀಡಿದ ಚೆನ್ನೈ: ನಾಯಕತ್ವ ಬದಲಾವಣೆ!

Date:

Advertisements

ಟಾಟಾ ಐಪಿಎಲ್ 2024ರ ಆರಂಭಕ್ಕೂ ಮುನ್ನ ಮಹೇಂದ್ರ ಸಿಂಗ್ ಧೋನಿ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಹೊಸ ಮುಖಕ್ಕೆ ಹಸ್ತಾಂತರಿಸಿರುವುದಾಗಿ ಚೆನ್ನೈ ತಂಡ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆ ಮೂಲಕ ಅಭಿಮಾನಿಗಳಿಗೆ ಐಪಿಎಲ್ ಆರಂಭಕ್ಕೆ ಕೆಲವೇ ಕ್ಷಣಗಳಿರುವಾಗ ಆಘಾತ ನೀಡಿದೆ.

ನಾಳೆ(ಮಾ.22)ಯಿಂದ ಐಪಿಎಲ್ ಆರಂಭವಾಗಲಿದೆ. ಚೆನ್ನೈ ಹಾಗೂ ಆರ್‌ಸಿಬಿ ನಡುವೆ ಚೆನ್ನೈನ ಚಪಾಕ್ ಸ್ಟೇಡಿಯಂನಲ್ಲಿ ಉದ್ಘಾಟನಾ ಪಂದ್ಯ ಕೂಡ ನಡೆಯಲಿದೆ.

ರುತುರಾಜ್ ಗಾಯಕ್‌ವಾಡ್‌ ಅವರು ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಿಳಿಸಿದೆ. ರುತುರಾಜ್ 2019ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿದ್ದು, ಈ ಅವಧಿಯಲ್ಲಿ ಐಪಿಎಲ್‌ನಲ್ಲಿ 52 ಪಂದ್ಯಗಳನ್ನು ಆಡಿದ್ದಾರೆ. ಮುಂಬರುವ ಋತುವಿನಲ್ಲಿ ತಂಡವು ಅವರ ನೇತೃತ್ವದಲ್ಲಿ ಮುನ್ನಡೆಯಲಿದೆ ಎಂದು ತಿಳಿಸಿದೆ.

Advertisements

ಈ ಪ್ರಕಟಣೆ ಚೆನ್ನೈ ಅಭಿಮಾನಿಗಳಿಗೆ ಭಾರೀ ನಿರಾಸೆ ಮೂಡಿಸಿದ್ದು, ಏನೆಲ್ಲ ಬೆಳವಣಿಗೆಗಳು ನಡೆಯಲಿದೆ ಎಂದು ಕಾದು ನೋಡಬೇಕಿದೆ.

ಮುಂಬೈ ಇಂಡಿಯನ್ಸ್ ತಂಡವು ಈಗಾಗಲೇ ತಂಡದ ನಾಯಕತ್ವವನ್ನು ಬದಲಾಯಿಸಿ, ಹಾರ್ದಿಕ್ ಪಾಂಡ್ಯಾಗೆ ನೀಡಿತ್ತು. ಆ ಮೂಲಕ 2024ರ ಐಪಿಎಲ್‌ನಲ್ಲಿ ಎರಡು ತಂಡಗಳು ತಂಡದ ನಾಯಕತ್ವವನ್ನು ಬದಲಾಯಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X