ಸ್ಯಾಫ್ ಚಾಂಪಿಯನ್‌ಶಿಪ್‌ | ಛೆಟ್ರಿ ಹ್ಯಾಟ್ರಿಕ್‌; ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

Date:

Advertisements

ಸ್ಯಾಫ್ ಚಾಂಪಿಯನ್‌ಶಿಪ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಹಾಲಿ ಚಾಂಪಿಯನ್‌ ಭಾರತ ಗೆಲುವಿನ ಆರಂಭ ಪಡೆದಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಭಾರತ, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು  4-0 ಗೋಲುಗಳಿಂದ ಭರ್ಜರಿಯಾಗಿದೆ ಮಣಿಸಿದೆ.

ನಾಯಕ ಸುನಿಲ್‌ ಛೆಟ್ರಿ ಹ್ಯಾಟ್ರಿಕ್‌ ಗೋಲು ದಾಖಲಿಸಿ ಮಿಂಚಿದರೆ ,ಬದಲಿ ಆಟಗಾರನಾಗಿ ಕಣಕ್ಕಿಳಿದ ಉದಾಂತ ಸಿಂಗ್‌ ಭಾರತದ ತಂಡದ ನಾಲ್ಕನೇ ಗೋಲು ದಾಖಲಿಸಿದರು.

ಪಂದ್ಯದ ಮೊದಲಾರ್ಧದಲ್ಲಿ ಭಾರತ 2-0 ಗೋಲುಗಳಿಂದ ಮುನ್ನಡೆ ಕಾಯ್ದುಕೊಂಡಿತ್ತು. 10ನೇ ನಿಮಿಷದಲ್ಲಿ ಪಾಕಿಸ್ತಾನದ ಗೋಲ್‌ ಕೀಪರ್ ಸಾಕಿಬ್ ಹನೀಫ್, ಚೆಂಡನ್ನು ನಿಯಂತ್ರಿಸುವಲ್ಲಿ ವಿಫಲರಾದರು. ಈ  ಅವಕಾಶವನ್ನು ಬಳಸಿಕೊಂಡ ಭಾರತದ ನಾಯಕ ಛೆಟ್ರಿ ಸುಲಭವಾಗಿ ಗೋಲಿನ  ಖಾತೆ ತೆರೆದರು. ಆ  ನಂತರದಲ್ಲಿ ದೊರಕಿದ ಎರಡು ಪೆನಾಲ್ಟಿ ಕಾರ್ನರ್‌ ಅವಕಾಶಗಳನ್ನು ಛೆಟ್ರಿ ಗೋಲಾಗಿ ಪರಿವರ್ತಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಫುಟ್‌ಬಾಲ್‌ | ಛೆಟ್ರಿ ಗೋಲಿನ ಬಲದಲ್ಲಿ ಇಂಟರ್‌ಕಾಂಟಿನೆಂಟಲ್‌ ಕಪ್‌ ಗೆದ್ದ ಭಾರತ

ಸೆಪ್ಟೆಂಬರ್ 2018ರ ಬಳಿಕ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನದ ಫುಟ್‌ಬಾಲ್‌ ತಂಡಗಳು ಬುಧವಾರ ಮುಖಾಮುಖಿಯಾಗಿದ್ದವು. ಐದು ವರ್ಷಗಳ ಹಿಂದೆ ನಡೆದ ಸ್ಯಾಫ್ ಚಾಂಪಿಯನ್‌ಶಿಪ್‌ನ  ಸೆಮಿಫೈನಲ್‌ ಪಂದ್ಯದಲ್ಲೂ ಭಾರತ, 3-1 ಗೋಲುಗಳ ಅಂತರದಿಂದ ನೆರೆಯ ರಾಷ್ಟ್ರವನ್ನು ಮಣಿಸಿತ್ತು.

ಜೂನ್ 24ರಂದು ನಡೆಯಲಿರುವ ಪಂದ್ಯದಲ್ಲಿ ನೇಪಾಳವನ್ನು ಮತ್ತು ಜೂನ್ 27 ರಂದು ಕುವೈತ್ ತಂಡವನ್ನು ಭಾರತ ಎದುರಿಸಲಿದೆ. ಮತ್ತೊಂದೆಡೆ ಪಾಕಿಸ್ತಾನ, ಜೂನ್ 24 ರಂದು ಕುವೈತ್ ಮತ್ತು ಜೂನ್ 27 ರಂದು ನೇಪಾಳದ ವಿರುದ್ಧ ಪಂದ್ಯಗಳನ್ನಾಡಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X