ಭಾರತ – ನ್ಯೂಜಿಲೆಂಡ್ ಟೆಸ್ಟ್: ಬೃಹತ್‌ ಮುನ್ನಡೆಯತ್ತ ಕಿವೀಸ್

Date:

Advertisements

ಪುಣೆಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯದ ಎರಡನೇ ದಿನದಾಟದಲ್ಲಿ ಅತಿಥೇಯ ಕಿವೀಸ್‌ ತಂಡ ಎರಡನೇ ಇನಿಂಗ್ಸ್‌ನಲ್ಲಿ 53 ಓವರ್‌ಗಳಲ್ಲಿ 198/5 ರನ್‌ ದಾಖಲಿಸಿದ್ದು, 301 ರನ್‌ಗಳ ಬೃಹತ್ ಮುನ್ನಡೆ ಗಳಿಸಿದೆ. ಅರ್ಧ ಶತಕ ಬಾರಿಸಿದ ನಾಯಕ ಟಾಮ್‌ ಲೇಥಮ್‌ (81) ನ್ಯೂಜಿಲೆಂಡ್‌ಗೆ ರಕ್ಷಣೆ ಒದಗಿಸಿದರು.

ಎರಡನೇ ಇನಿಂಗ್ಸ್‌ನಲ್ಲೂ ಕೂಡ ಸ್ಪಿನ್ನರ್ ವಾಷಿಂಗ್ಟನ್‌ ಸುಂದರ್‌ ತಮ್ಮ ಕೈಚಳಕ ತೋರಿ 5 ವಿಕೆಟ್‌ಗಳಲ್ಲಿ 4 ಅನ್ನು ತಮ್ಮ ಖಾತೆಗೆ ಇಳಿಸಿಕೊಂಡಿದ್ದಾರೆ. ಮತ್ತೊಂದು ವಿಕೆಟ್‌ಅನ್ನು ಆರ್‌ ಅಶ್ವಿನ್‌ ಕಬಳಿಸಿದರು.

ಮಿಂಚಿದ ಮಿಚೆಲ್ ಸ್ಯಾಂಟನರ್

Advertisements

ಎರಡನೇ ದಿನದಾಟದಲ್ಲಿ ನ್ಯೂಜಿಲೆಂಡ್‌ನ ಸ್ಪಿನ್ನರ್‌ ಮಿಚೆಲ್ ಸ್ಯಾಂಟನರ್‌ ದಾಳಿಗೆ ಟೀಂ ಇಂಡಿಯಾ ಬ್ಯಾಟರ್‌ಗಳು ಸರದಿ ಸಾಲಿನಂತೆ ಪೆವಿಲಿಯನ್‌ನ ಹಾದಿ ಹಿಡಿದರು. 16/1 ರನ್‌ನೊಂದಿಗೆ ಮೊದಲ ಇನಿಂಗ್ಸ್‌ ಆರಂಭಿಸಿದ ರೋಹಿತ್‌ ಶರ್ಮಾ ನೇತೃತ್ವದ ಭಾರತ ತಂಡ ಮಿಚೆಲ್ ಸ್ಯಾಂಟನರ್‌ ಸ್ಪಿನ್‌ಗೆ ಸವಾಲು ಒಡ್ಡಲಾಗದೆ 45.3 ಓವರ್‌ಗಳಲ್ಲಿ 156 ರನ್‌ಗಳಿಗೆ ಆಲೌಟ್‌ ಆಯಿತು.

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ಇದರೊಂದಿಗೆ ಮೊದಲ ಇನಿಂಗ್ಸ್‌ನಲ್ಲಿ 103 ರನ್‌ಗಳ ಹಿನ್ನಡೆ ಅನುಭವಿಸಿದೆ. ಮೊದಲ ಇನಿಂಗ್ಸ್‌ನಲ್ಲಿ ನ್ಯೂಜಿಲೆಂಡ್‌ ನೀಡಿದ 259 ರನ್‌ಗಳ ಸವಾಲನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕಿವೀಸ್‌ನ ಮಿಚೆಲ್ ಸ್ಯಾಂಟನರ್‌ ದಾಳಿಯನ್ನು ಎದುರಿಸಲು ಸಾಧ್ಯವಾಗಲಿಲ್ಲ.

ಯಶಸ್ವಿ ಜೈಸ್ವಾಲ್‌(30), ಶುಭಮನ್‌ ಗಿಲ್‌ (30) ಹಾಗೂ ರವೀಂದ್ರ ಜಡೇಜಾ (38) ಹೊರತುಪಡಿಸಿದರೆ ಉಳಿದ ಆಟಗಾರರಿಂದ ಪ್ರತಿರೋಧ ವ್ಯಕ್ತವಾಗಲಿಲ್ಲ.

ಅದ್ಭುತ ಬೌಲಿಂಗ್‌ ಮಾಡಿದ ಮಿಚೆಲ್ ಸ್ಯಾಂಟನರ್‌ 53 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿದರು. ಇನ್ನುಳಿದಂತೆ ಗ್ಲೆನ್‌ ಫಿಲಿಪ್ಸ್ 26/2 ಹಾಗೂ ಟಿಮ್‌ ಸೌಥಿ 18/1 ವಿಕೆಟ್ ಪಡೆದು ಟೀಂ ಇಂಡಿಯಾವನ್ನು ಆಲೌಟ್‌ ಮಾಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)...

ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ವಿಪಕ್ಷಗಳು ಮಾಡಿರುವ ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ ಎಂದು ಮುಖ್ಯ...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X