ಐಪಿಎಲ್ | ಅಲ್‌ಝಾರಿ ಜೋಸೆಫ್ ದುಬಾರಿ ಬೌಲಿಂಗ್; ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಗುರಿ ನೀಡಿದ ಪಂಜಾಬ್

Date:

Advertisements

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ನ 6ನೇ ಪಂದ್ಯವು ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್‌ ನಡುವೆ ನಡೆಯುತ್ತಿದ್ದು, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡವು ಆರ್‌ಸಿಬಿಗೆ ಗೆಲ್ಲಲು 177 ರನ್‌ಗಳ ಸವಾಲಿನ ಗುರಿ ನೀಡಿದೆ.

ಟಾಸ್ ಗೆದ್ದಿದ್ದ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿ, ಪಂಜಾಬ್‌ ಅನ್ನು ಬ್ಯಾಟಿಂಗ್‌ಗೆ ಇಳಿಸಿದರು. ನಿರೀಕ್ಷೆಯಂತೆಯೇ ಉತ್ತಮ ಬೌಲಿಂಗ್ ನಡೆಸಿದ್ದ ಆರ್‌ಸಿಬಿ ಬಳಗವು ಕೊನೆಯ ಓವರ್‌ನಲ್ಲಿ ಎಡವಿತು.

ಆರ್‌ಸಿಬಿ ಪರವಾಗಿ ಕೊನೆಯ ಓವರ್ ಎಸೆದ ಅಲ್‌ಝಾರಿ ಜೋಸೆಫ್ 20 ರನ್ ಬಿಟ್ಟುಕೊಟ್ಟು ದುಬಾರಿಯಾದ್ದರಿಂದ, ಪಂಜಾಬ್ ತಂಡವು ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ದಾಖಲಿಸಿತು. 20ನೇ ಓವರ್‌ನಲ್ಲಿ ಜೋಸೆಫ್ ಎರಡು ಸಿಕ್ಸರ್, ಒಂದು ಬೌಂಡರಿ ಹಾಗೂ ವೈಡ್ ಸಹಿತ 20 ರನ್ ನೀಡುವ ಮೂಲಕ ದುಬಾರಿ ಎನಿಸಿದರು. 19ನೇ ಓವರ್ ಮುಗಿದಾಗ ಪಂಜಾಬ್‌ನ ಮೊತ್ತವು 156 ಆಗಿತ್ತು.

Advertisements

ಪಂಜಾಬ್ ಪರವಾಗಿ ಧವನ್ ಜೊತೆಗೆ ಇನ್ನಿಂಗ್ಸ್ ಆರಂಭಿಸಿದ್ದ ಬೈರ್​ಸ್ಟೋವ್, ತಂಡವು 17 ರನ್ ಗಳಿಸಿದ್ದಾಗ ಔಟಾದರು. ಕೇವಲ ಎಂಟು ರನ್ ಗಳಿಸಿ ಸಿರಾಜ್​ಗೆ ವಿಕೆಟ್ ಒಪ್ಪಿಸಿದರು. ಭಾಸಿಮ್ರಾನ್ ಸಿಂಗ್ 17 ಎಸೆತಗಳಲ್ಲಿ 25 ರನ್ ಗಳಿಸಿ ಔಟಾದರು. ಪ್ರಭಾಸಿಮ್ರಾನ್ ಸಿಂಗ್ ಅವರ ವಿಕೆಟ್ ಪಡೆಯುವಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಯಶಸ್ವಿಯಾದರು. ಬಳಿಕ ಬಂದ ಲಿಯಾಮ್ ಲಿವಿಂಗ್‌ಸ್ಟನ್ 13 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು. ಆ ಬಳಿಕ ನಾಯಕ ಶಿಖರ್ ಧವನ್ 45 ರನ್ ಗಳಿಸಿ ಔಟಾದರು. ಆ ಮೂಲಕ ಒಂದೇ ಓವರ್​ನಲ್ಲಿ ಮ್ಯಾಕ್ಸ್​ವೆಲ್​ಗೆ 2 ವಿಕೆಟ್​ ಕಬಳಿಸುವ ಮೂಲಕ ರನ್‌ಗೆ ಕಡಿವಾಣ ಹಾಕಿದರು.

ಬಳಿಕ ಸ್ಯಾಮ್ ಕರನ್ 23 ರನ್ ಗಳಿಸಿದ್ದಾಗ, ಯಶ್ ದಯಾಳ್ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ವಿಫಲರಾದರು. ವಿಕೆಟ್ ಹಿಂಬದಿ ಕೀಪಿಂಗ್ ಮಾಡುತ್ತಿದ್ದ ಅನುಜ್ ರಾವತ್ ಹಿಡಿದ ಅದ್ಭುತ ಕ್ಯಾಚ್‌ಗೆ ಬಲಿಯಾದರು.

ಪಂಜಾಬ್ ಪರ ಜಿತೇಶ್ ಶರ್ಮಾ 27 ರಮ್ ಗಳಿಸುವ ಮೂಲಕ ತಮ್ಮದೇ ಕೊಡುಗೆ ನೀಡಿದರು. ಕೊನೆಯಲ್ಲಿ ಪಂಜಾಬ್ ಪರವಾಗಿ ಅಬ್ಬರಿಸಿದ ಶಶಾಂಕ್ ಸಿಂಗ್ ಕೇವಲ 8 ಎಸೆತಗಳನ್ನು ಎದುರಿಸಿ 2 ಭರ್ಜರಿ ಸಿಕ್ಸ್ ಹಾಗೂ ಒಂದು ಬೌಂಡರಿಯ ನೆರವಿನಿಂದ 21 ರನ್ ಗಳಿಸುವ ಮೂಲಕ, ತಂಡದ ಮೊತ್ತವನ್ನು 176ಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾದರು.

ಆರ್‌ಸಿಬಿ ಪರವಾಗಿ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ 2 ವಿಕೆಟ್ ಪಡೆದರೆ, ಯಶ್ ದಯಾಳ್ ಹಾಗೂ ಅಲ್‌ಝಾರಿ ಜೋಸೆಫ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಸಫಲರಾದರು. 4 ಓವರ್ ಎಸೆದಿದ್ದ ಜೋಸೆಫ್ 43 ರನ್ ನೀಡಿ, ಬಹಳ ದುಬಾರಿ ಎನಿಸಿಕೊಂಡರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X