ಐಪಿಎಲ್ 2023 | ಶಾರ್ದೂಲ್, ರಹ್ಮಾಮಾನುಲ್ಲಾ ಅರ್ಧ ಶತಕ; ಆರ್‌ಸಿಬಿಗೆ ಕಠಿಣ ಸವಾಲು

Date:

Advertisements

ಸ್ಫೋಟಕ ಬ್ಯಾಟರ್‌ಗಳು ವಿಫಲರಾದರೂ ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್ ಹಾಗೂ ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಗುರ್ಬಾಜ್ ಅರ್ಧ ಶತಕದ ನೆರವಿನಿಂದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ 205 ರನ್‌ಗಳ ಕಠಿಣ ಸವಾಲು ನೀಡಿದೆ.

ಕೋಲ್ಕತ್ತಾದ ಈಡನ್‌ ಗಾರ್ಡನ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ ಟೂರ್ನಿಯ 16ನೇ ಆವೃತ್ತಿಯ 9ನೇ ಪಂದ್ಯದಲ್ಲಿ ಟಾಸ್‌ ಸೋತ ಕೆಕೆಆರ್‌ ನಾಲ್ಕು ಓವರ್‌ಗಳಾಗುವಷ್ಟರಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡಿತು.ಆರಂಭಿಕ ಆಟಗಾರ ರಹ್ಮಾಮಾನುಲ್ಲಾ ಮಾತ್ರ ಬ್ಯಾಟ್‌ ಬೀಸುತ್ತಿದ್ದರೆ, ನಾಯಕ ನಿತೀಶ್ ರಾಣಾ,ಆಂಡ್ರೆ ರಸೆಲ್ ಸೇರಿ ಪ್ರಮುಖ ಬ್ಯಾಟರ್‌ಗಳು ಪೆವಿಲಿಯನ್‌ ಸೇರುತ್ತಿದ್ದರು.

ಹನ್ನೆರಡನೇ ಓವರ್‌ನಲ್ಲಿ 44 ಎಸೆತಗಳಲ್ಲಿ 57 ರನ್‌ ಗಳಿಸಿ ರಹ್ಮಾಮಾನುಲ್ಲಾ ಔಟಾದ ನಂತರ ಸ್ಫೋಟಕ ಆಟವನ್ನು ಆರಂಭಿಸಿದವರು ಆಲ್‌ರೌಂಡರ್‌ ಶಾರ್ದೂಲ್ ಠಾಕೂರ್. ಶಾರ್ದೂಲ್‌ಗೆ ತಾಳ್ಮೆಯ ಆಟವಾಡಿ ರಿಂಕು ಸಿಂಗ್‌ ಜೊತೆಯಾದರು. ಕೇವಲ 29 ಚಂಡುಗಳಲ್ಲಿ 3 ಭರ್ಜರಿ ಸಿಕ್ಸರ್ ಹಾಗೂ 9 ಆಕರ್ಷಕ ಬೌಂಡರಿಗಳ ಮೂಲಕ 69 ರನ್‌ ಸ್ಫೋಟಿಸಿದರು. ಇವರಿಬ್ಬರು 45 ಚಂಡುಗಳಲ್ಲಿ 103 ರನ್‌ ಜೊತೆಯಾಟವಾಡಿ ತಂಡದ ಮೊತ್ತವನ್ನು 20 ಓವರ್‌ಗಳಲ್ಲಿ 204 ರನ್‌ಗೆ ಕೊಂಡೊಯ್ದರು.

Advertisements

ರಿಂಕು ಸಿಂಗ್‌ ಕೂಡ 33 ಎಸೆತಗಳಲ್ಲಿ 2 ಬಾಂಡರಿ ಹಾಗೂ 3 ಸಿಕ್ಸರ್‌ನೊಂದಿಗೆ 46 ರನ್‌ ಗಳಿಸಿದರು. ಆರ್‌ಸಿಬಿ ಪರ ಕರಣ್‌ ಶರ್ಮಾ , ಡೇವಿಡ್‌ ವಿಲ್ಲಿ ತಲಾ 2 ವಿಕೆಟ್‌ ಪಡೆದರೆ, ಮೈಕಲ್ ಬ್ರೇಸ್‌ವೆಲ್, ಹರ್ಷಲ್‌ ಪಟೇಲ್‌ ತಲಾ ಒಂದೊಂದು ವಿಕೆಟ್ ಕಬಳಿಸಿದರು.

ಆಟವಾಡುತ್ತಿರುವ ಹನ್ನೊಂದರ ಬಳಗ

ರಾಯಲ್​ ಚಾಲೆಂಜರ್ಸ್​ ಬೆಂಗಳೂರು : ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರಣ್​ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.

ಕೋಲ್ಕತ್ತಾ ನೈಟ್​ ರೈಡರ್ಸ್​ : ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಸುಯಶ್ ಶರ್ಮಾ, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X