ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕ: ನೆದರ್‌ಲ್ಯಾಂಡ್ಸ್‌ಗೆ ಗೆಲುವಿಗೆ ಬೃಹತ್ ಗುರಿ

Date:

Advertisements

ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ವಿಶ್ವಕಪ್ 2023ರ ಲೀಗ್‌ ಹಂತದಲ್ಲಿ ನೆದರ್‌ಲ್ಯಾಂಡ್ಸ್‌ ವಿರುದ್ಧ ಕೊನೆಯ ಪಂದ್ಯವನ್ನಾಡುತ್ತಿರುವ ಟೀಮ್ ಇಂಡಿಯಾ, ಕೆ ಎಲ್ ರಾಹುಲ್-ಶ್ರೇಯಸ್ ಅಯ್ಯರ್ ಭರ್ಜರಿ ಶತಕದ ನೆರವಿನಿಂದ ಗೆಲುವಿಗೆ 411 ರನ್‌ಗಳ ಬೃಹತ್ ಗುರಿ ನೀಡಿದೆ.

ಭಾರತದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಶ್ರೇಯಸ್ ಅಯ್ಯರ್ ಔಟಾಗದೆ 128 ರನ್ ಹಾಗೂ ಕೆ.ಎಲ್ ರಾಹುಲ್ 102 ರನ್ ಗಳಿಸಿದರು. ಈ ಜೋಡಿ 4ನೇ ವಿಕೆಟ್‌ಗೆ 208 ರನ್‌ಗಳ ಜೊತೆಯಾಟ ನಡೆಸಿದ ಪರಿಣಾಮ ನಿಗದಿತ 50 ಓವರ್‌ಗಳಲ್ಲಿ ಟೀಮ್ ಇಂಡಿಯಾ, 4 ವಿಕೆಟ್ ಕಳೆದುಕೊಂಡು 410 ರನ್ ಗಳಿಸಿತು. ಆ ಮೂಲಕ ಟೀಮ್ ಇಂಡಿಯಾ ಈ ವರ್ಷದ ವಿಶ್ವಕಪ್‌ನಲ್ಲಿ ಅತ್ಯಧಿಕ ಸ್ಕೋರ್ ದಾಖಲಿಸಿದೆ.

ಏಕದಿನ ವಿಶ್ವಕಪ್‌ನ ಇತಿಹಾಸದಲ್ಲಿ ಟಾಪ್-5 ಆಟಗಾರರು ಒಂದು ತಂಡಕ್ಕೆ 50ಕ್ಕಿಂತ ಹೆಚ್ಚು ರನ್ ಗಳಿಸಿದ್ದು ಇದೇ ಮೊದಲು. ರೋಹಿತ್ ಶರ್ಮಾ 61(54 ಎಸೆತ, 2 ಸಿಕ್ಸ್, 8 ಬೌಂಡರಿ) ಶುಭಮನ್ ಗಿಲ್ 51 (32 ಎಸೆತ, 4 ಸಿಕ್ಸ್, 3 ಬೌಂಡರಿ), ವಿರಾಟ್ ಕೊಹ್ಲಿ 51(56 ಎಸೆತ, 1 ಸಿಕ್ಸ್, 5 ಬೌಂಡರಿ), ಶ್ರೇಯಸ್ ಅಯ್ಯರ್ ಔಟಾಗದೆ 128*(94 ಎಸೆತ, 5 ಸಿಕ್ಸ್, 10 ಬೌಂಡರಿ) & ಕೆ ಎಲ್ ರಾಹುಲ್ 102(64 ಎಸೆತ, 4 ಸಿಕ್ಸ್, 11 ಬೌಂಡರಿ) ರನ್ ಗಳಿಸಿದರು. ಈ ಮೂಲಕ ಒಟ್ಟಾರೆ ವಿಶ್ವಕಪ್ ಟೂರ್ನಿಯಲ್ಲಿ ಟಾಪ್ 5 ಆಟಗಾರರ ಪೈಕಿ ಮೂವರು ಅರ್ಧಶತಕ ಗಳಿಸಿದರೆ, ಇಬ್ಬರು ಶತಕ ಗಳಿಸಿ ಇತಿಹಾಸ ನಿರ್ಮಿಸಿದರು.

Advertisements

ವಿಶ್ವಕಪ್‌ನಲ್ಲಿ ಮೊದಲ ಶತಕ ಬಾರಿಸಿದ ಶ್ರೇಯಸ್ ಅಯ್ಯರ್

ಇಂದಿನ ಪಂದ್ಯದಲ್ಲಿ 94 ಎಸೆತಗಳಲ್ಲಿ 5 ಸಿಕ್ಸ್, 10 ಬೌಂಡರಿಯ ನೆರವಿನೊಂದಿಗೆ ಔಟಾಗದೆ 128* ರನ್ ಗಳಿಸಿದ ಟೀಮ್ ಇಂಡಿಯಾದ ಬಲಗೈ ಬ್ಯಾಟರ್ ಶ್ರೇಯಸ್ ಅಯ್ಯರ್, ವಿಶ್ವಕಪ್‌ನಲ್ಲಿ ಮೊದಲ ಶತಕ ಬಾರಿಸಿದ ಸಾಧನೆ ಮಾಡಿದ್ದಾರೆ. ಈ ಶತಕದ ಮೂಲಕ ಶ್ರೇಯಸ್ ಅಯ್ಯರ್ ಏಕದಿನ ಕ್ರಿಕೆಟ್‌ನಲ್ಲಿ ತಮ್ಮ ನಾಲ್ಕನೇ ಶತಕ ಬಾರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X