ಐಪಿಎಲ್‌ 2023 | ಶಿಖರ್ ಧವನ್,ಪ್ರಭಾಸಿಮ್ರಾನ್ ಭರ್ಜರಿ ಬ್ಯಾಟಿಂಗ್‌; ರಾಜಸ್ಥಾನ್‌ ತಂಡಕ್ಕೆ ಸವಾಲಿನ ಗುರಿ

Date:

Advertisements

ಐಪಿಎಲ್‌ 16ನೇ ಆವೃತ್ತಿಯ ಎಂಟನೇ ಪಂದ್ಯದಲ್ಲಿ ಆರಂಭಿಕ ಆಟಗಾರ ಪ್ರಭಾಸಿಮ್ರಾನ್ ಸಿಂಗ್‌ ಹಾಗೂ ನಾಯಕ ಶಿಖರ್ ಧವನ್ ಅವರ ಭರ್ಜರಿ ಅರ್ಧ ಶತಕಗಳ ನೆರವಿನಿಂದ ಪಂಜಾಬ್‌ ಕಿಂಗ್ಸ್ ತಂಡ 198 ರನ್‌ಗಳ ಕಠಿಣ ಗುರಿ ನೀಡಿದೆ.

ಗುವಾಹಟಿಯ ಬರ್ಸಾಪರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಸೋತು ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ ಕಿಂಗ್ಸ್ ತಂಡದ ಪ್ರಭಾಸಿಮ್ರಾನ್, ಶಿಖರ್ ಧವನ್ ಮೊದಲ ಎಸೆತದಿಂದಲೇ ಬ್ಯಾಟ್‌ ಬೀಸಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್‌ ರಾಯಲ್ಸ್ ತಂಡದ ಬೌಲರ್‌ಗಳನ್ನು ಬೆವರಿಳಿಸತೊಡಗಿದರು.

ಸಿಕ್ಸ್ ಹಾಗೂ ಬೌಂಡರಿ ಬಾರಿಸುತ್ತಿದ್ದ ಪ್ರಭಾಸಿಮ್ರಾನ್ ಸಿಂಗ್‌ ಹತ್ತನೇ ಓವರ್‌ನಲ್ಲಿ ಜೇಸನ್‌ ಹೋಲ್ಡರ್‌ ಬೌಲಿಂಗ್‌ನಲ್ಲಿ ವಿಕೇಟ್‌ ಕೀಪರ್‌ ಜಾಸ್‌ ಬಟ್ಲರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. 34 ಚಂಡುಗಳಲ್ಲಿ 60 ರನ್‌ ಬಾರಿಸಿದ ಪ್ರಭಾಸಿಮ್ರಾನ್ ಬ್ಯಾಟಿಂಗ್‌ನಲ್ಲಿ 7 ಅಮೋಘ ಬೌಂಟರಿ ಹಾಗೂ 3 ಭರ್ಜರಿ ಸಿಕ್ಸರ್‌ ಒಳಗೊಂಡಿದ್ದವು.

Advertisements

ಮೂರನೇ ಕ್ರಮಾಂಕದಲ್ಲಿ ಆಗಮಿಸಿದ ಭಾನುಕಾ ರಾಜಪಕ್ಸೆ ಗಾಯಗೊಂಡು ನಿವೃತ್ತರಾದರೆ, ನಾಲ್ಕನೇ ಕ್ರಮಾಂಕದ ಜಿತೀಶ್ ಶರ್ಮಾ, ಧವನ್‌ಗೆ ಜೊತೆಯಾಗಿ 16 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್‌ನೊಂದಿಗೆ 27 ರನ್‌ ಬಾರಿಸಿದರು. ಸಿಕಂದರ್ ರಝಾ ಕೂಡ ಹೆಚ್ಚು ಹೊತ್ತು ನಿಲ್ಲದೆ ಒಂದು ರನ್‌ ಗಳಿಸಿ ಅಶ್ವಿನ್‌ಗೆ ಬೌಲ್ಡ್‌ ಆದರು.

ಕೊನೆಯವರೆಗೂ ಆಟವಾಡಿದ ನಾಯಕ ಶಿಖರ್ ಧವನ್‌ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್‌ನೊಂದಿಗೆ 86 ರನ್‌ ಪೇರಿಸಿ ಪಂಜಾಬ್‌ 20 ಓವರ್‌ಗಳಲ್ಲಿ 197/4 ಮೊತ್ತ ದಾಖಲಿಸಲು ಕಾರಣರಾದರು.

ರಾಜಸ್ಥಾನ್‌ ಪರ ಹೋಲ್ಡರ್‌ 2, ಚಹಾಲ್‌ ಹಾಗೂ ಅಶ್ವಿನ್ ತಲಾ ಒಂದು ವಿಕೆಟ್ ಕಬಳಿಸಿದರು.

ಆಟವಾಡುತ್ತಿರುವ ಹನ್ನೊಂದರ ಬಳಗ

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್ (ವಿಕೆಟ್‌ ಕೀಪರ್), ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆಎಂ ಆಸಿಫ್, ಯುಜ್ವೇಂದ್ರ ಚಾಹಲ್.

ಪಂಜಾಬ್ ಕಿಂಗ್ಸ್: ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್‌ ಕೀಪರ್), ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಸಿಕಂದರ್ ರಝಾ, ಸ್ಯಾಮ್ ಕರ್ರನ್, ಶಾರುಖ್ ಖಾನ್, ನಾಥನ್ ಎಲ್ಲಿಸ್, ಹರ್ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X