ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್: 2ನೇ ಇನಿಂಗ್ಸ್‌ನಲ್ಲಿ ಶುಭಮನ್ ಗಿಲ್ ಶತಕ, ಭಾರತಕ್ಕೆ 363 ರನ್ ಮುನ್ನಡೆ

Date:

Advertisements

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಅವರ ಆಕರ್ಷಕ ಶತಕದೊಂದಿಗೆ ಟೀಂ ಇಂಡಿಯಾ ಪಾನೀಯ ವಿರಾಮದ ವೇಳೆಗೆ 363 ರನ್‌ ಮುನ್ನಡೆ ಪಡೆದಿದೆ.

ವಿಶಾಖಪಟ್ಟಣಂನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 5 ಓವರ್‌ಗಳಲ್ಲಿ 28 ರನ್‌ಗಳೊಂದಿಗೆ ಮೂರನೇ ದಿನದಾಟ ಆರಂಭಿಸಿದ ಭಾರತ ತಂಡ ಏಳನೇ ಓವರ್‌ನಲ್ಲಿಯೇ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಂಡಿತು. 13 ರನ್‌ ಗಳಿಸಿದ್ದ ರೋಹಿತ್ ಆಂಡರ್‌ಸನ್‌ ಬೌಲಿಂಗ್‌ನಲ್ಲಿ ಬೌಲ್ಡ್‌ ಆದರು.

ಮೊದಲ ಇನಿಂಗ್ಸ್‌ನಲ್ಲಿ ಚೊಚ್ಚಲ ದ್ವಿಶತಕ ಬಾರಿಸಿದ್ದ ಯಶಸ್ವಿ ಜೈಸ್ವಾಲ್ 17 ರನ್‌ ಗಳಿಸಿದ್ದಾಗ ಆಂಡರ್‌ಸನ್‌ ಬೌಲಿಂಗ್‌ನಲ್ಲಿ ರೂಟ್‌ಗೆ ಕ್ಯಾಚಿತ್ತು ಔಟಾದರು. ನಂತರ ಶ್ರೇಯಸ್‌ ಅಯ್ಯರ್ ಹಾಗೂ ಶುಭಮನ್‌ ಗಿಲ್ ಜೋಡಿ ಮೂರನೇ ವಿಕೆಟ್ ಜೊತೆಯಾಟಕ್ಕೆ 81 ರನ್ ಪೇರಿಸಿದರು. ಶ್ರೇಯಸ್ 29 ರನ್ ಗಳಿಸಿ ಹಾರ್ಟ್ಲಿ ಬೌಲಿಂಗ್‌ನಲ್ಲಿ ಪೆವಿಲಿಯನ್‌ಗೆ ತೆರಳಿದ ನಂತರ ಮೊದಲ ಟೆಸ್ಟ್ ಆಡುತ್ತಿರುವ ರಜತ್ ಪಾಟೀದಾರ್ ಕೂಡ ಹೆಚ್ಚು ಹೊತ್ತು ನಿಲ್ಲದೆ 9 ರನ್‌ ಗಳಿಸಿ ಔಟಾದರು.

Advertisements

ಲಯ ಕಂಡುಕೊಂಡ ಶುಭಮನ್

ಇತ್ತೀಚಿನ ಕೆಲವು ಇನಿಂಗ್ಸ್‌ಗಳಲ್ಲಿ ಕಳಪೆಯಾಟದಿಂದ ರನ್‌ಗಳ ಬರ ಎದುರಿಸುತ್ತಿದ್ದ ಉದಯೋನ್ಮುಖ ಆಟಗಾರ ಶುಭಮನ್‌ ಗಿಲ್ ಇಂಗ್ಲೆಂಡ್ ವಿರುದ್ಧದ ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಶತಕ ಬಾರಿಸಿ ಭಾರತದ ಮುನ್ನಡೆಗೆ ಕಾರಣರಾದರು. 141 ಚೆಂಡುಗಳನ್ನು ಎದುರಿಸಿ 11 ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್‌ಗಳೊಂದಿಗೆ  104 ರನ್‌ ಬಾರಿಸಿದರು. ಇದು ಗಿಲ್‌ ಅವರ ಟೆಸ್ಟ್ ವೃತ್ತಿ ಜೀವನದ ಮೂರನೇ ಟೆಸ್ಟ್ ಶತಕವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

ಶುಭಮನ್‌ ಜೊತೆ ಜೊತೆಯಾಟವಾಡಿದ ಆಲ್‌ರೌಂಡರ್‌ ಅಕ್ಸರ್‌ ಪಟೇಲ್ ಅಜೇಯ 45 ರನ್, ಶ್ರೀಕರ್ ಭರತ್ (2) ಗಳಿಸಿ ಬ್ಯಾಟ್‌ ಮಾಡುತ್ತಿದ್ದಾರೆ. ಪಾನೀಯ ವಿರಾಮದ ವೇಳೆಗೆ ಟೀಂ ಇಂಡಿಯಾ 60 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಗಳಿಸಿ ಆಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X