T20 ವಿಶ್ವಕಪ್ | ಕೊನೆಗೂ ‘ಚೋಕರ್ಸ್’ ಹಣೆಪಟ್ಟಿಯಿಂದ ಮುಕ್ತಗೊಂಡ ದಕ್ಷಿಣ ಆಫ್ರಿಕಾ: ಅಫ್ಘಾನ್ ಸೋಲಿಸಿ ಫೈನಲ್‌ಗೆ

Date:

Advertisements

ಐಸಿಸಿಯ ಪ್ರಮುಖ ಟೂರ್ನಿಯ ಮಹತ್ವದ ಪಂದ್ಯಗಳಲ್ಲಿ ಸೋಲುವ ಮೂಲಕ ‘ಚೋಕರ್ಸ್’ ಹಣೆಪಟ್ಟಿ ತಲೆಗೆ ಕಟ್ಟಿಕೊಂಡಿದ್ದ ದಕ್ಷಿಣ ಆಫ್ರಿಕಾ ಕೊನೆಗೂ ಅದರಿಂದ ಮುಕ್ತಗೊಂಡಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಮೊದಲ ಬಾರಿಗೆ ಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಬರೆದಿದೆ.

ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಆಯೋಜನೆ ಆಗಿರುವ 2024ರ ಸಾಲಿನ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಅಫ್ಘಾನಿಸ್ತಾನದ ಎದುರು 9 ವಿಕೆಟ್‌ಗಳ ಗೆಲುವು ಕಾಣುವ ಮೂಲಕ ಫೈನಲ್‌ಗೆ ಚೊಚ್ಚಲ ಪ್ರವೇಶ ಮಾಡಿದೆ.

ಇದನ್ನು ಓದಿದ್ದೀರಾ?  T20 ವಿಶ್ವಕಪ್ | ಅಫ್ಘಾನಿಸ್ತಾನ ಕೈ ಹಿಡಿದ ಅದೃಷ್ಟ: ಬಾಂಗ್ಲಾ‌ ಮಣಿಸಿ ಸೆಮಿಫೈನಲ್‌ಗೆ ರಶೀದ್ ಖಾನ್ ಪಡೆ

Advertisements

ಅಫ್ಘಾನಿಸ್ತಾನ ತಂಡ ಮೊದಲು ಬ್ಯಾಟ್ ಮಾಡಿದ್ದು ದಕ್ಷಿಣ ಆಫ್ರಿಕಾ ಬೌಲರ್‌ಗಳ ದಾಳಿ ಎದುರಿಸುವಲ್ಲಿ ವಿಫಲವಾಗಿದ್ದು 11.5 ಓವರ್‌ಗಳಲ್ಲಿ 56 ರನ್‌ಗಳಿಗೆ ಆಲೌಟ್ ಆಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾರ್ಕೊ ಜಾನ್ಸೆನ್ ಮತ್ತು ತಬ್ರೇಜ್ ಶಮ್ಸಿ ತಲಾ 3 ವಿಕೆಟ್ ಪಡೆದರು.


ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 8.5 ಓವರ್‌ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು ಜಯ ಪಡೆದಿದೆ. ದಕ್ಷಿಣ ಆಫ್ರಿಕಾ ಪರ ರೆಜಾ ಹೆಂಡ್ರಿಕ್ಸ್‌ (ಅಜೇಯ 29) ಹಾಗೂ ಐಡೆನ್ ಮಾರ್ಕ್ರಾಮ್ (ಅಜೇಯ 23) ತಂಡವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ನೆರವಾಗಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ ಯಾವುದೇ ಮಾದರಿಯ ಐಸಿಸಿ ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿರುವುದು ಇದೇ ಮೊದಲು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X