10 ವರ್ಷದ ಹಿಂದಿನ ವಿವಾದಾತ್ಮಕ ಟ್ವೀಟ್: ಭಾರತ ತೊರೆದ ಪಾಕ್‌ ಮೂಲದ ಕ್ರೀಡಾ ನಿರೂಪಕಿ

Date:

Advertisements

10 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿ, ಕ್ರಿಕೆಟ್‌ ವಿಶ್ವಕಪ್‌ಗಾಗಿ ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಬಂದಿದ್ದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರು ಭಾರತ ತೊರೆದಿರುವ ಘಟನೆ ವರದಿಯಾಗಿದೆ.

‘ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್ ಅಬ್ಬಾಸ್ ಅವರನ್ನು ವಿವಾದಿತ ಪ್ರಕರಣದಲ್ಲಿ ಭಾರತದಿಂದ ಗಡಿಪಾರು ಮಾಡಲಾಗಿದೆ’ ಎಂದು ಸೋಮವಾರ ಮಧ್ಯಾಹ್ನ ಪಾಕಿಸ್ತಾನಿ ಟಿವಿ ನ್ಯೂಸ್ ಚಾನೆಲ್ ‘ಸಮಾ’ ಹೇಳಿಕೊಂಡಿತ್ತು. ಆ ಬಳಿಕ ವಿವಾದಾತ್ಮಕ ಟ್ವೀಟ್‌ಗಳ ಕಾರಣಕ್ಕೆ ಭದ್ರತೆಯ ದೃಷ್ಟಿಯಿಂದ ಭಾರತ ತೊರೆದಿದ್ದಾರೆ ಎಂದು ತಿಳಿಸಿದೆ.

ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌, 2023ರ ಕ್ರಿಕೆಟ್‌ ಏಕದಿನ ವಿಶ್ವಕಪ್‌ ಟೂರ್ನಿಯ ನಿರೂಪಣೆಗಾಗಿ ಇತ್ತೀಚೆಗೆ ಭಾರತಕ್ಕೆ ಬಂದಿದ್ದರು.

Advertisements

10 ವರ್ಷಗಳ ಹಿಂದೆ ಅವರು ತಮ್ಮ ಟ್ವಿಟರ್‌ ಹ್ಯಾಂಡಲ್‌ನಿಂದ ಭಾರತ ಮತ್ತು ಹಿಂದೂ ಧರ್ಮವನ್ನು ಟೀಕಿಸಿ ಮಾಡಿದ್ದ ಟ್ವೀಟ್‌ಗಳೇ ಇದಕ್ಕೆ ಕಾರಣ ಎಂದು ವರದಿಯಾಗಿದೆ.

‘ನಾವು ಅತಿಥಿ ದೇವೋಭವ ಎಂದು ಎಲ್ಲ ಅತಿಥಿಗಳನ್ನು ಸ್ವಾಗತಿಸುತ್ತೇವೆ. ಆದರೆ ಕೆಲವೊಂದು ಅತಿಥಿಗಳು ಅದಕ್ಕೆ ಅರ್ಹರಲ್ಲ. ನಮ್ಮ ದೇಶ ಮತ್ತು ಹಿಂದೂ ಧರ್ಮವನ್ನು ಗೌರವಿಸುವವರಿಗೆ ನಾವೂ ಗೌರವ ನೀಡುತ್ತೇವೆ. ಆದರೆ ನಮ್ಮ ಭೂಮಿಯಲ್ಲಿ ಭಾರತೀಯ ವಿರೋಧಿಗಳಿಗೆ ಸ್ವಾಗತವಿಲ್ಲ. ಪಾಕಿಸ್ತಾನದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರು ಈ ಹಿಂದೆ ಭಾರತ ವಿರೋಧಿ ಹಾಗೂ ಹಿಂದೂ ಧರ್ಮದ ವಿರುದ್ಧವಾಗಿ ಟ್ವೀಟ್ ಮಾಡಿ ಅವಮಾನಿಸಿದ್ದಾರೆ. ಹಾಗಾಗಿ, ಅವರಿಗೂ ಸ್ವಾಗತವಿಲ್ಲ. 2023ರ ವಿಶ್ವಕಪ್‌ ನಿರೂಪಣೆಯಿಂದ ಅವರನ್ನು ತೆಗೆದು ಹಾಕಬೇಕು’ ಎಂದು ಹಳೆಯ ವಿವಾದಾತ್ಮಕ ಟ್ವೀಟ್‌ಗಳನ್ನು ಉಲ್ಲೇಖಿಸಿ ವಿನೀತ್ ಜಿಂದಾಲ್ ಎಂಬ ವಕೀಲ ಬಿಸಿಸಿಐಗೆ ದೂರು ಸಲ್ಲಿಸಿದ್ದರು.

ಆ ಬಳಿಕ ಈ ಕುರಿತಾಗಿ ದೆಹಲಿಯ ಸೈಬರ್‌ ಕ್ರೈಮ್‌ ಪೊಲೀಸರಿಗೂ ವಿನೀತ್ ಜಿಂದಾಲ್ ದೂರು ನೀಡಿದ ಹಿನ್ನೆಲೆಯಲ್ಲಿ ಅವರು ಭಾರತ ತೊರೆದಿದ್ದಾರೆ ಎಂದು ತಿಳಿದುಬಂದಿದೆ.

35 ವರ್ಷದ ಕ್ರೀಡಾ ನಿರೂಪಕಿ ಜೈನಾಬ್‌ ಅಬ್ಬಾಸ್‌ ಅವರ ವಿರುದ್ಧ ಈ ದೂರು ಬಂದ ಬೆನ್ನಲ್ಲೇ, ಸುರಕ್ಷತೆಯ ದೃಷ್ಟಿಯಿಂದ ಭಾರತ ಬಿಟ್ಟು ತೆರಳುವಂತೆ ಬಿಸಿಸಿಐ ಸೂಚಿಸಿರುವುದಾಗಿ ತಿಳಿದುಬಂದಿದೆ.

ಮೊದಲು ಗಡಿಪಾರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದ ಪಾಕಿಸ್ತಾನದ ಸಮಾ ಟಿವಿ ಆ ಬಳಿಕ ಮತ್ತೊಂದು ಟ್ವೀಟ್ ಮಾಡಿದ್ದು, ಭದ್ರತೆಯ ದೃಷ್ಟಿಯಿಂದ ಜೈನಬ್ ಭಾರತವನ್ನು ತೊರೆದಿದ್ದಾರೆ. ಪ್ರಸ್ತುತ ಅವರು ದುಬೈನಲ್ಲಿದ್ದಾರೆ’ ಎಂದು ವರದಿ ಮಾಡಿದೆ.

ವಿಶ್ವಕಪ್‌ಗಾಗಿ ಭಾರತಕ್ಕೆ ಆಗಮಿಸುವ ಮೊದಲು ಟ್ವೀಟ್‌ ಮಾಡಿದ್ದ ಜೈನಾಬ್ ಅಬ್ಬಾಸ್, ‘ಎರಡೂ ದೇಶಗಳ ವ್ಯತಿರಿಕ್ತ ನಂಬಿಕೆಗಳ ಹೊರತಾಗಿಯೂ ಭಾರತದ ಸಂಸ್ಕೃತಿಯನ್ನು ಅನ್ವೇಷಿಸಲು ಉತ್ಸುಕನಾಗಿದ್ದೇನೆ. ಮುಂದಿನ ಆರು ವಾರಗಳ ಕಾಲ ಅದಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು. ಈ ನಡುವೆಯೇ ಈ ರೀತಿಯ ಬೆಳವಣಿಗೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X