ಐಪಿಎಲ್ | 20 ಓವರ್‌ ಪಂದ್ಯವನ್ನು 9.4 ಓವರ್‌ಗಳಲ್ಲಿ ಮುಗಿಸಿದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ!

Date:

Advertisements

ಪಂದ್ಯ 20 ಓವರ್‌ಗಳ ಟಿ20. ಗುರಿ ಇದ್ದದ್ದು 166 ರನ್. ಆದರೆ ಹೈದರಾಬಾದ್ ತಂಡ, ಈ ಗುರಿಯನ್ನು ಮುಗಿಸಿದ್ದು ಮಾತ್ರ 9.4 ಓವರ್‌ಗಳಲ್ಲಿ. ಹೌದು. ಇದನ್ನು ನೀವು ನಂಬಲೇಬೇಕು.

ಲಕ್ನೋ ವಿರುದ್ಧ ಇಂದು ನಡೆದ ಐಪಿಎಲ್‌ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡದ ಆರಂಭಿಕ ಆಟಗಾರರಾದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಜೋಡಿಯ ಸ್ಫೋಟಕ ಬ್ಯಾಟಿಂಗ್‌ನಿಂದಾಗಿ 20 ಓವರ್‌ಗಳ ಎರಡನೇ ಇನ್ನಿಂಗ್ಸ್‌ ಕೇವಲ 9.4 ಓವರ್‌ಗಳಲ್ಲಿ ಮುಗಿದಿದೆ.

ಹೈದರಾಬಾದ್‌ನ ರಾಜೀವ್‌ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದು ನಡೆದ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 57ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವು 10 ವಿಕೆಟ್‌ಗಳ ಭರ್ಜರಿ ಜಯ ಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ್ದ ಕನ್ನಡಿಗೆ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೈದರಾಬಾದ್‌ಗೆ 166 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು.

Advertisements

ಹೈದರಾಬಾದ್‌ ಪರವಾಗಿ ಆರಂಭಿಕರಾಗಿ ಬಂದಿದ್ದ ಟ್ರಾವಿಸ್ ಹೆಡ್-ಅಭಿಷೇಕ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್‌ನ ನೆರವಿನಿಂದ ಯಾವುದೇ ವಿಕೆಟ್ ಕಳೆದುಕೊಳ್ಳದೆ ಕೇವಲ 9.4 ಓವರ್‌ಗಳಲ್ಲಿ ಈ ಗುರಿಯನ್ನು ಮುಟ್ಟಿದೆ. ಈ ಭರ್ಜರಿ ಗೆಲುವಿನೊಂದಿಗೆ ಸನ್‌ರೈಸರ್ಸ್‌ ಹೈದರಾಬಾದ್ ತಂಡವು 2024ರ ಐಪಿಎಲ್‌ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಬಂದಿದ್ದು, ಪ್ಲೇ-ಆಫ್ ಕನಸನ್ನು ಇನ್ನೂ ಜೀವಂತವಾಗಿರಿಸಿದೆ.

ಇಂದಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ 8 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ನೊಂದಿಗೆ 89 ರನ್ ಹಾಗೂ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್‌ನೊಂದಿಗೆ 75 ರನ್ ಗಳಿಸಿ, ಅಜೇಯರಾಗುಳಿದರು.

ಕೇವಲ 9.4 ಓವರ್‌ಗಳಲ್ಲಿ 166 ರನ್‌ಗಳ ಗುರಿಯನ್ನು ಬೆನ್ನಟ್ಟುವ ಮೂಲಕ ಸನ್‌ರೈಸರ್ಸ್‌ ಹೈದರಾಬಾದ್ ತಂಡವು ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X