ಐಪಿಎಲ್ | 278 ರನ್‌ಗಳ ಬೃಹತ್ ಗುರಿಯನ್ನು ತಲುಪಲು ಎಡವಿದ ಮುಂಬೈ ಇಂಡಿಯನ್ಸ್‌; SRHಗೆ ಭರ್ಜರಿ ಜಯ

Date:

Advertisements

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ನೀಡಿದ್ದ 278 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಹಾರ್ದಿಕ್ ಪಾಂಡ್ಯಾ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ, ಕೊನೆಯವರೆಗೂ ಹೋರಾಟ ನಡೆಸಿದರೂ 31 ರನ್‌ಗಳಿಂದ ಸೋಲನುಭವಿಸಿತು.

ಮುಂಬೈ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 246 ರನ್ ಗಳಿಸಲಷ್ಟೇ ಶಕ್ತವಾಯಿತು.

278 ರನ್‌ಗಳ ಗುರಿಯನ್ನು ಮುಟ್ಟುವ ನಿಟ್ಟಿನಲ್ಲಿ ಮುಂಬೈ ಇಂಡಿಯನ್ಸ್‌ನ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಇಶಾನ್ ಕಿಶನ್ ಭರ್ಜರಿ ಆರಂಭವನ್ನು ಒದಗಿಸಿದ್ದರು. ಕೇವಲ 3 ಓವರ್‌ಗಳಲ್ಲಿ 50 ರನ್ ದಾಖಲಿಸುವ ಮೂಲಕ ಗುರಿ ಮುಟ್ಟುವ ಯೋಜನೆ ಹಾಕಿಕೊಂಡಿದ್ದರು. ಆದರೆ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದ ಇಶಾನ್ ಕಿಶನ್ 13 ಎಸೆತಗಳಲ್ಲಿ 34 ರನ್ ಗಳಿಸಿದ್ದಾಗ ಔಟಾದರು.

Advertisements

ರೋಹಿತ್ ಶರ್ಮಾ ಕೂಡ ವೇಗವಾಗಿ ಸ್ಕೋರ್ ಮಾಡುತ್ತಿದ್ದರು, ಅವರನ್ನು ಪ್ಯಾಟ್ ಕಮಿನ್ಸ್ ಓವರ್‌ನಲ್ಲಿ ಔಟಾದರು. ರೋಹಿತ್ ಶರ್ಮಾ 12 ಎಸೆತಗಳಲ್ಲಿ 26 ರನ್ ಗಳಿಸಿದರು. ನಮನ್ ಧೀರ್ 14 ಎಸೆತಗಳಲ್ಲಿ 30 ರನ್ ಗಳಿಸಿ, ಔಟಾದರು. ಆ ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್ ವರ್ಮಾ ಹೋರಾಟ ನಡೆಸಿದರೂ ಸಾಧ್ಯವಾಗಲಿಲ್ಲ.34 ಎಸೆತಗಳಲ್ಲಿ 64 ರನ್ ಗಳಿಸಿ ಔಟಾದರು. ನಾಯಕ ಹಾರ್ದಿಕ್ ಪಾಂಡ್ಯ 20 ಎಸೆತಗಳಲ್ಲಿ 24 ರನ್ ಗಳಿಸಲಷ್ಟೇ ಶಕ್ತರಾದರು. ಕೊನೆಯಲ್ಲಿ 22 ಎಸೆತಗಳಲ್ಲಿ 42 ರನ್ ದಾಖಲಿಸಿ, ಔಟಾಗದೆ ಉಳಿದರು.

ಹೈದರಾಬಾದ್‌ನ 277 ಹಾಗೂ ಮುಂಬೈ ಇಂಡಿಯನ್ಸ್‌ನ 246 ರನ್ ಸೇರಿ ಇಂದಿನ ಒಂದೇ ಪಂದ್ಯದಲ್ಲಿ  523 ರನ್‌ ದಾಖಲಾಗಿದೆ.

ಒಂದೇ ಪಂದ್ಯದಲ್ಲಿ 38 ಸಿಕ್ಸ್, 31 ಬೌಂಡರಿ

ಮೊದಲು ಬ್ಯಾಟಿಂಗ್ ನಡೆಸಿದ್ದ ಸನ್‌ರೈಸರ್ಸ್‌ ಹೈದರಾಬಾದ್ 18 ಸಿಕ್ಸ್ ಬಾರಿಸಿದ್ದರೆ, 19 ಬೌಂಡರಿ ಬಾರಿಸಿತ್ತು. ಮುಂಬೈ ಇಂಡಿಯನ್ಸ್ ಪರವಾಗಿ 20 ಸಿಕ್ಸ್ ಮತ್ತು 12 ಬೌಂಡರಿ ದಾಖಲಾಯಿತು. ಆ ಮೂಲಕ ಒಂದೇ ಪಂದ್ಯದಲ್ಲಿ 38 ಸಿಕ್ಸ್ ಹಾಗೂ 31 ಬೌಂಡರಿ ದಾಖಲಾಯಿತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X