ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಕಳಪೆ ಪ್ರದರ್ಶನ: ಸರ್ಕಾರದಿಂದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಸಂಪೂರ್ಣ ವಜಾ

Date:

Advertisements

ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡದ ವಿರುದ್ಧ ಕಳಪೆ ಪ್ರದರ್ಶನ ನೀಡಿ ಹೀನಾಯವಾಗಿ ಸೋತ ಕಾರಣ ಶ್ರೀಲಂಕಾದ ಕ್ರೀಡಾ ಸಚಿವ ರೋಷನ್ ರಣಸಿಂಘೆ ಅವರು ಸೋಮವಾರ(ನ.6) ಶ್ರೀಲಂಕಾ ರಾಷ್ಟ್ರೀಯ ಕ್ರಿಕೆಟ್ ಮಂಡಳಿಯನ್ನು ಸಂಪೂರ್ಣವಾಗಿ ವಜಾಗೊಳಿಸಿದ್ದಾರೆ.

1996ರ ಶ್ರೀಲಂಕಾ ವಿಶ್ವಕಪ್‌ ವಿಜೇತ ತಂಡದ ನಾಯಕ ಅರ್ಜುನ ರಣತುಂಗ ಅವರನ್ನು ಮಂಡಳಿಯ ಹೊಸ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ರಣಸಿಂಗ್ ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇದಲ್ಲದೆ ಕ್ರೀಡಾ ಸಚಿವ ರೋಷನ್ ರಣಸಿಂಗ್ ಅವರು ಶ್ರೀಲಂಕಾ ಕ್ರಿಕೆಟ್‌ಗೆ ಮಧ್ಯಂತರ ಸಮಿತಿಯನ್ನು ರಚಿಸಿದ್ದಾರೆ ಎಂದು ಪ್ರಕಟಣೆ ಹೇಳಿದೆ.

ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿದ್ದ ದ್ವೀಪ ರಾಷ್ಟ್ರದ ಶ್ರೀಲಂಕಾ ಕ್ರಿಕೆಟ್ ಮಂಡಳಿ ಕೆಲವು ವರ್ಷಗಳಿಂದ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಜೊತೆಗೆ ವ್ಯಾಪಕ ಭ್ರಷ್ಟಾಚಾರ ಆರೋಪವು ಕೇಳಿ ಬರುತ್ತಿದೆ.

Advertisements

ಹೊಸ ಏಳು ಸದಸ್ಯರ ಸಮಿತಿಯಲ್ಲಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮತ್ತು ಮಂಡಳಿಯ ಮಾಜಿ ಅಧ್ಯಕ್ಷರೂ ಇದ್ದಾರೆ.

ಮಂಡಳಿಯ ಎರಡನೇ ಅತ್ಯುನ್ನತ ಅಧಿಕಾರಿ, ಕಾರ್ಯದರ್ಶಿ ಮೋಹನ್ ಡಿ ಸಿಲ್ವಾ ಅವರು ರಾಜೀನಾಮೆ ನೀಡಿದ ಒಂದು ದಿನದ ನಂತರ ಹಳೆಯ ಮಂಡಳಿ ವಜಾಗೊಂಡು ಹೊಸ ಮಂಡಳಿ ಅಸ್ತಿತ್ವಕ್ಕೆ ಬಂದಿದೆ.

ಕಳೆದ ವಾರ ಆತಿಥೇಯ ಭಾರತ ವಿರುದ್ಧ ಶ್ರೀಲಂಕಾವನ್ನು 302 ರನ್‌ಗಳ ವಿಶ್ವಕಪ್‌ನಲ್ಲಿ ಸೋಲಿಸಿದ ನಂತರ ರೋಷನ್ ರಣಸಿಂಘೆ ಅವರು ಇಡೀ ಮಂಡಳಿಯ ರಾಜೀನಾಮೆಗೆ ಸಾರ್ವಜನಿಕವಾಗಿ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಹಾಕಿ: ಭಾರತದ ವನಿತೆಯರಿಗೆ ಏಷ್ಯನ್ ಚಾಂಪಿಯನ್ಸ್ ಟ್ರೋಫಿ

ಗುರುವಾರ ಮುಂಬೈನಲ್ಲಿ ಭಾರತದ 358 ರನ್‌ಗಳನ್ನು ಬೆನ್ನಟ್ಟಿದ ಶ್ರೀಲಂಕಾ ಒಂದು ಹಂತದಲ್ಲಿ 14/6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ನಂತರ 55 ರನ್‌ಗಳಿಗೆ ಆಲೌಟ್ ಆಯಿತು. ಇದು ಏಕದಿನ ಮಾದರಿಯ ಕ್ರಿಕೆಟ್ ಇತಿಹಾಸದಲ್ಲಿ ನಾಲ್ಕನೇ ಅತಿ ಕಡಿಮೆ ಮೊತ್ತವಾಗಿದೆ.

ಈ ಸೋಲು ಶ್ರೀಲಂಕಾದಲ್ಲಿ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಯಿತು. ಶನಿವಾರದಂದು ಕೋಪಗೊಂಡ ಅಭಿಮಾನಿಗಳು ದೇಶೀಯ ಕ್ರಿಕೆಟ್ ಮಂಡಳಿ ಎದುರು ಪ್ರತಿಭಟನೆ ನಡೆಸಿದರು. ಈ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿನ ಕ್ರಿಕೆಟ್ ಮಂಡಳಿ ಕಚೇರಿಯ ಹೊರಗೆ ಭದ್ರತಾ ದೃಷ್ಟಿಯಿಂದ ಪೊಲೀಸರನ್ನು ನಿಯೋಜಿಸಲಾಗಿದೆ.

ಶ್ರೀಲಂಕಾ ಇಂದು (ಸೋಮವಾರ) ಬಾಂಗ್ಲಾದೇಶ ಎದುರು ಆಡಲಿದೆ. ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಲು ಉಳಿದ ಎರಡು ಪಂದ್ಯಗಳನ್ನು ಉತ್ತಮ ರನ್‌ ರೇಟ್‌ನೊಂದಿಗೆ ಗೆಲುವು ಸಾಧಿಸುವುದರ ಜೊತೆಗೆ ಟೂರ್ನಿಯ ಇತರ ಉಳಿದ ಪಂದ್ಯಗಳಲ್ಲಿ ಪವಾಡ ಕೂಡ ನಡೆಯಬೇಕಿದೆ. ಶ್ರೀಲಂಕಾ ತನ್ನ ಕೊನೆಯ ಪಂದ್ಯವನ್ನು ನ.9 ರಂದು ಬೆಂಗಳೂರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ.

1996ರ ನಂತರ ಶ್ರೀಲಂಕಾದ ಕ್ರಿಕೆಟ್ ಮಂಡಳಿ ಆರ್ಥಿಕ ನೆರವಿಲ್ಲದೆ ತೆವಳುತ್ತ ಸಾಗುತ್ತಿತ್ತು. 1996ರಲ್ಲಿ ಅರ್ಜುನ್‌ ರಣತುಂಗ ನೇತೃತ್ವದ ತಂಡ ಮೊದಲ ಬಾರಿಗೆ ವಿಶ್ವಕಪ್‌ನಲ್ಲಿ ಗೆಲುವು ಸಾಧಿಸಿದ ನಂತರ ಮಂಡಳಿಗೆ ಹಣದ ಹೊಳೆ ಹರಿದು ಶ್ರೀಮಂತ ಸಂಸ್ಥೆಯಾಗಿ ಮಾರ್ಪಟ್ಟಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಮಂಡಳಿಯಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವವಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X