ವಿಶ್ವಕಪ್ ಕ್ರಿಕೆಟ್ | ಹೋರಾಡಿ ಹೀನಾಯ ಸೋಲು ತಪ್ಪಿಸಿಕೊಂಡ ಲಂಕನ್ನರು: ದೆಹಲಿಯಲ್ಲಿ ರನ್‌ಗಳ ಸುರಿಮಳೆ

Date:

Advertisements

ದಕ್ಷಿಣ ಆಫ್ರಿಕಾ ನೀಡಿದ್ದ 429 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡ, ಸಮರ್ಥವಾದ ಹೋರಾಟ ನೀಡಿದ ಹೊರತಾಗಿಯೂ 102 ರನ್‌ಗಳಿಂದ ಸೋಲನುಭವಿಸಿದೆ.

ಬೃಹತ್ ಗುರಿಯನ್ನು ಬೆನ್ನಟ್ಟಿದ ಲಂಕನ್ನರು 44.5 ಓವರ್‌ಗಳಲ್ಲಿ 326 ರನ್‌ ಗಳಿಸಿ ಆಲೌಟಾಗುವುದರೊಂದಿಗೆ 102 ರನ್‌ಗಳಿಂದ ಸೋಲನುಭವಿಸಿದರು. ವಿಶ್ವಕಪ್‌ನ ಇಂದಿನ ಪಂದ್ಯದಲ್ಲಿ ರನ್‌ಗಳ ಸುರಿಮಳೆಯಾಗಿದ್ದು, ಇದಕ್ಕೆ ದೆಹಲಿಯ ಅರುಣ್ ಜೈಟ್ಲಿ ಕ್ರೀಡಾಂಗಣವು ಸಾಕ್ಷಿಯಾಯಿತು.

ಶ್ರೀಲಂಕಾ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದ ನಿಸ್ಸಾಂಕ ಹಾಗೂ ಕುಸಾಲ್ ಪೆರೇರಾ ಜೋಡಿ ಉತ್ತಮ ಆರಂಭ ಒದಗಿಸುವಲ್ಲಿ ವಿಫಲರಾದರು. ಎರಡನೇ ಇನ್ನಿಂಗ್ಸ್‌ನ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ನಿಸ್ಸಾಂಕ ಕ್ಲೀನ್ ಬೌಲ್ದ್ ಆಗುವ ಮೂಲಕ ಜಾನ್‌ಸೆನ್‌ಗೆ ವಿಕೆಟ್ ಒಪ್ಪಿಸಿದರು.

Advertisements

ಆ ಬಳಿಕ ಕ್ರೀಸ್‌ಗೆ ಬಂದ ಕುಸಾಲ್ ಮೆಂಡಿಸ್ ಭರ್ಜರಿ ಸಿಕ್ಸ್, ಬೌಂಡರಿಗಳ ಮೂಲಕ ದಕ್ಷಿಣ ಆಫ್ರಿಕಾ ಬೌಲರ್‌ಗಳ ಬೆವರಿಳಿಸಿದರು. ಕೊನೆಗೆ 42 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 8 ಸಿಕ್ಸ್‌ನ ನೆರವಿನಿಂದ 76 ರನ್ ಗಳಿಸಿ ಔಟಾದರು. ಆ ಬಳಿಕ ಚರಿತ್ ಅಸಲಂಕ 79, ನಾಯಕ ದಾಸುನ್ ಶಾನಕ 68 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. ಆ ಮೂಲಕ ವಿಶ್ವಕಪ್‌ನ ಮೊದಲ ಪಂದ್ಯದಲ್ಲಿ ಹೀನಾಯ ಸೋಲಿನಿಂದ ತಪ್ಪಿಸಿಕೊಂಡರು.

ಕೊನೆಯಲ್ಲಿ ಶ್ರೀಲಂಕಾ 44.5 ಓವರ್‌ಗಳಲ್ಲಿ 326 ರನ್‌ಗಳಿಗೆ ಆಲೌಟಾಯಿತು.


ದಕ್ಷಿಣ ಆಫ್ರಿಕಾ 428 ರನ್ ಹಾಗೂ ಶ್ರೀಲಂಕಾದ 326 ರನ್‌ ಒಟ್ಟು 754 ರನ್‌ ದಾಖಲಾಗಿದ್ದು, ಇದು ವಿಶ್ವಕಪ್‌ನ ಒಂದೇ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X