ಐಪಿಎಲ್ | ಸ್ಟೋಯ್ನಿಸ್ ಭರ್ಜರಿ ಶತಕ: ಚೆನ್ನೈಗೆ ತವರಲ್ಲೇ ರೋಚಕವಾಗಿ ಸೋಲುಣಿಸಿದ ಲಕ್ನೋ

Date:

Advertisements

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 39ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ್ದ ಬೃಹತ್ ಮೊತ್ತವನ್ನು ತಲುಪುವಲ್ಲಿ ಯಶಸ್ವಿಯಾದ ಕನ್ನಡಿಗ ಕೆ ಎಲ್ ರಾಹುಲ್ ನೇತೃತ್ವದ ಲಕ್ನೋ ತಂಡ, ಕೊನೆಯ ಓವರ್‌ನಲ್ಲಿ ರೋಚಕವಾಗಿ ಗೆದ್ದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಾಯಕ ರುತುರಾಜ್ ಗಾಯಕ್ವಾಡ್ ಅವರ ಭರ್ಜರಿ ಶತಕ ಮತ್ತು ಶಿವಂ ದುಬೆ ಅವರ ಸ್ಫೋಟಕ ಅರ್ಧಶತಕ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 210 ರನ್ ಗಳಿಸಿ, ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 211 ರನ್‌ಗಳ ಸವಾಲಿನ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಫೋಟಕ ಬ್ಯಾಟರ್ ಮಾರ್ಕಸ್ ಸ್ಟೋಯ್ನಿಸ್ ಅವರ ಚೊಚ್ಚಲ ಐಪಿಎಲ್ ಶತಕದ ನೆರವಿನಿಂದ 19.3 ಓವರ್‌ಗಳಲ್ಲಿ ಕೇವಲ 4 ವಿಕೆಟ್‌ಗಳನ್ನು ಕಳೆದುಕೊಂಡು, 213 ರನ್ ದಾಖಲಿಸಿತು.

Advertisements

ಟಿ20 ಇನ್ನಿಂಗ್ಸ್‌ನ ಎರಡನೇ ಹಾಗೂ ಐಪಿಎಲ್‌ನಲ್ಲಿ ಮೊದಲ ಶತಕ ಬಾರಿಸಿದ ಆಸೀಸ್‌ನ ಸ್ಫೋಟಕ ಬ್ಯಾಟರ್ ಸ್ಟೋಯ್ನಿಸ್‌, ಕೊನೆಯ ಓವರ್‌ನಲ್ಲಿ ಲಕ್ನೋಗೆ ಗೆಲ್ಲಲು 17 ರನ್‌ಗಳ ಅವಶ್ಯಕತೆ ಇತ್ತು. ಮುಸ್ತಫಿಝ್‌ ರಹ್ಮಾನ್ ಎಸೆದ ಮೊದಲ ಬಾಲ್‌ ಅನ್ನು ಸಿಕ್ಸರ್‌ಗೆ ಹಾಗೂ ಆ ಬಳಿಕ ಮೂರು ಎಸೆತಗಳಲ್ಲಿ ಭರ್ಜರಿ ಮೂರು ಬೌಂಡರಿಗಳನ್ನು ಬಾರಿಸುವ ಮೂಲಕ ಲಕ್ನೋಗೆ ರೋಚಕ ಜಯ ತಂದುಕೊಟ್ಟರು. ಇದು ಚೆನ್ನೈನ ಚೆಪಾಕ್‌ ಸ್ಟೇಡಿಯಂನಲ್ಲಿ ಅತ್ಯಂತ ಯಶಸ್ವಿ ಚೇಸ್ ಆಗಿದೆ.

63 ಎಸೆತಗಳನ್ನು ಎದುರಿಸಿದ್ದ ಮಾರ್ಕಸ್ ಸ್ಟೋಯ್ನಿಸ್‌, 13 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸ್‌ನ ನೆರವಿನಿಂದ 124 ರನ್‌ ಗಳಿಸುವ ಮೂಲಕ, ಔಟಾಗದೆ ಉಳಿದರು. ಇವರಿಗೆ ಸಾಥ್​ ನೀಡಿದ ನಿಕೋಲಸ್​ ಪೂರನ್​ ಕೇವಲ 15 ಬಾಲ್​ನಲ್ಲಿ 2 ಸಿಕ್ಸರ್​, 3 ಫೋರ್​ ಸಮೇತ 34 ರನ್​ ಬಾರಿಸಿದರು. ಆ ಬಳಿಕ ಪತಿರಾನ್ನಗೆ ವಿಕೆಟ್ ಒಪ್ಪಿಸಿದರು.

ಕೊನೆಯಲ್ಲಿ ದೀಪಕ್ ಹೂಡ 6 ಎಸೆತಗಳಲ್ಲಿ 17 ರನ್ ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ತಮ್ಮದೇ ಆದ ಕೊಡುಗೆ ನೀಡಿದರು. ಲಕ್ನೋ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಶೂನ್ಯಕ್ಕೆ ಔಟಾದರೆ, ನಾಯಕ ಕೆ ಎಲ್ ರಾಹುಲ್ 16 ಹಾಗೂ ತಂಡದ ಇನ್ನೋರ್ವ ಕನ್ನಡಿಗ ದೇವದತ್ತ್ ಪಡಿಕ್ಕಲ್ ಕೇವಲ 13 ರನ್ ಗಳಿಸಲಷ್ಟೇ ಶಕ್ತವಾದರು.

ಚೆನ್ನೈ ತಂಡದ ಪರ ಬೌಲಿಂಗ್‌ನಲ್ಲಿ ಮಹೇಶ್ ಪತಿರಾನ್ನ 2 ವಿಕೆಟ್ ಪಡೆದರೆ, ಮುಸ್ತಫಿಝ್‌ ರಹ್ಮಾನ್ ಹಾಗೂ ದೀಪಕ್ ಚಾಹರ್ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಯಶಸ್ವಿಯಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X