ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ‘ರೆಡ್ ಕಾರ್ಡ್‌’ ಪಡೆದ ಸುನಿಲ್ ನರೇನ್!

Date:

Advertisements
  • ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಘಟನೆ
  • ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ‘ರೆಡ್ ಕಾರ್ಡ್‌’ ಬಳಕೆ

ವೆಸ್ಟ್ ಇಂಡೀಸ್​​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ‘ರೆಡ್ ಕಾರ್ಡ್’​ ನಿಯಮವನ್ನು ಜಾರಿಗೆ ತರಲಾಗಿದ್ದು, ಇದರ ಮೊದಲ ಬಲಿಪಶುವಾಗಿ ಸುನಿಲ್ ನರೇನ್ ಮೈದಾನ ತೊರೆಯುವಂತಾಯಿತು.

ಆ ಮೂಲಕ ಕ್ರಿಕೆಟ್‌ ಇತಿಹಾಸದಲ್ಲೇ ಮೊದಲ ‘ರೆಡ್ ಕಾರ್ಡ್‌’ ಪಡೆದ ಆಟಗಾರನೆಂಬ ಕುಖ್ಯಾತಿಗೆ ಸುನಿಲ್ ನರೇನ್ ಒಳಗಾದರು.

ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ಹಾಗೂ ಟ್ರಿನ್‌ಬಾಗೊ ನೈಟ್ ರೈಡರ್ಸ್ ನಡುವಣ ಪಂದ್ಯದ ವೇಳೆ ಅಂಪೈರ್ ಮೊದಲ ಬಾರಿಗೆ ರೆಡ್ ಕಾರ್ಡ್ ತೋರಿಸಿದರು.

Advertisements

ಈ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 19 ಓವರ್​ಗಳನ್ನು ಪೂರ್ಣಗೊಳಿಸದ ಕಾರಣ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಅಂಪೈರ್​ ರೆಡ್ ಕಾರ್ಡ್ ತೋರಿಸಿದ್ದರು. ಅಲ್ಲದೆ ಈ ನಿಯಮದಂತೆ ಒಬ್ಬ ಆಟಗಾರನು ಮೈದಾನದಿಂದ ಹೊರಗುಳಿಯಬೇಕಿತ್ತು.

ಈ ವೇಳೆ ನಾಯಕ ಕೀರನ್ ಪೊಲಾರ್ಡ್, ಸುನಿಲ್ ನರೇನ್ ಅವರಿಗೆ ರೆಡ್ ಕಾರ್ಡ್​ ತೋರಿಸುವಂತೆ ಅಂಪೈರ್​ಗೆ ತಿಳಿಸಿದರು. ಅದರಂತೆ 19ನೇ ಓವರ್​ ಮುಕ್ತಾಯದ ಬೆನ್ನಲ್ಲೇ ನರೇನ್ ಮೈದಾನ ತೊರೆದರು. ಇದರೊಂದಿಗೆ ಕೆರಿಬಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹಾಗೂ ಕ್ರಿಕೆಟ್ ಇತಿಹಾಸದಲ್ಲಿ ‘ರೆಡ್ ಕಾರ್ಡ್’​ ಪಡೆದ ಮೊದಲ ಆಟಗಾರ ಎನಿಸಿಕೊಂಡರು.

ನಿಧಾನಗತಿಯ ಬೌಲಿಂಗ್‌ಗೆ ತಕ್ಷಣವೇ ಜಾರಿಗೆ ಬರುವಂತಹ ಶಿಕ್ಷೆಯಾಗಿ ‘ರೆಡ್ ಕಾರ್ಡ್‌’ ಅನ್ನು ಕ್ರಿಕೆಟ್‌ನಲ್ಲಿ ಅಳವಡಿಸಲಾಗಿದೆ. ಫೀಲ್ಡ್​ ಅಂಪೈರ್​ ರೆಡ್ ಕಾರ್ಡ್ ತೋರಿಸಿ ಈ ನಿಯಮವನ್ನು ತಕ್ಷಣವೇ ಜಾರಿಗೊಳಿಸುತ್ತಾರೆ.

ಅದರಂತೆ ಟ್ರಿನ್​ಬಾಗೊ ನೈಟ್​ ರೈಡರ್ಸ್​ 20ನೇ ಓವರ್‌ನ ಆರಂಭದ ವೇಳೆ ನಿಗದಿತ ಸಮಯದಲ್ಲಿ ಬೌಲಿಂಗ್ ಮಾಡಲು ಹಿಂದೆ ಉಳಿದಿದ್ದ ಕಾರಣ ಸುನಿಲ್ ನರೇನ್ ಅವರನ್ನು ಹೊರಗೆ ಕಳುಹಿಸಿ, ಕೊನೆಯ ಓವರ್​ನಲ್ಲಿ 10 ಮಂದಿಯೊಂದಿಗೆ ಫೀಲ್ಡಿಂಗ್ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X