ಐಪಿಎಲ್ | ಚೆನ್ನೈ ವಿರುದ್ಧ ಹೈದರಾಬಾದ್‌ಗೆ ಭರ್ಜರಿ ಜಯ: ಅಭಿ‍ಷೇಕ್ ಶರ್ಮಾ ಸ್ಫೋಟಕ ಬ್ಯಾಟಿಂಗ್

Date:

Advertisements

ಹೈದರಾಬಾದ್‌ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 18ನೇ ಪಂದ್ಯದಲ್ಲಿ ಅತಿಥೇಯ ಸನ್‌ರೈಸರ್ಸ್ ಹೈದರಾಬಾದ್ ತಂಡವು, ಪ್ರವಾಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಭರ್ಜರಿ ಆರು ವಿಕೆಟ್‌ಗಳಿಂದ ಸೋಲಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಶಿವಂ ದುಬೆ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 165 ರನ್‌ಗಳನ್ನು ಕಲೆಹಾಕಿ, ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 166 ರನ್‌ಗಳ ಗುರಿ ನೀಡಿತ್ತು.

ಈ ಗುರಿಯನ್ನು ಬೆನ್ನತ್ತಿದ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಹೈದರಾಬಾದ್ ತಂಡವು 18.1 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

Advertisements

ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಹೈದರಾಬಾದ್‌ನ ಯುವ ಬ್ಯಾಟರ್ ಅಭಿಷೇಕ್ ಶರ್ಮಾ, 12 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳ ನೆರವಿನಿಂದ 37 ರನ್ ಗಳಿಸಿ, ಚಾಹರ್‌ಗೆ ವಿಕೆಟ್ ಒಪ್ಪಿಸಿದರು. ಔಟಾಗುವುದಕ್ಕೂ ಮುನ್ನ ಮುಖೇಶ್ ಚೌಧರಿ ಎಸೆದ ಎರಡನೇ ಓವರ್‌ನಲ್ಲಿ ಮೂರು ಸಿಕ್ಸ್, ಎರಡು ಬೌಂಡರಿ ಇರುವ 27 ರನ್ ಬಾರಿಸಿದರು.

ಆ ಬಳಿಕ ಟ್ರಾವಿಸ್ ಹೆಡ್, ಚೆನ್ನೈ ಸ್ಪಿನ್ನರ್ ಮಹೇಶ್ ತೀಕ್ಷಣ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ, ವಿಕೆಟ್ ಒಪ್ಪಿಸಿದರು. ಉತ್ತಮವಾಗಿ ಆಡುತ್ತಿದ್ದ ಹೆಡ್, 24 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 31 ರನ್ ಗಳಿಸಿ ಔಟಾದರು. ನಂತರ ಮಾರ್ಕರಮ್ ಹಾಗೂ ಶಹಬಾಝ್ ಜೋಡಿಯು ಉತ್ತಮ ಜೊತೆಯಾಟ ನಡೆಸಿದರು.

ಮಾರ್ಕರಮ್ 36 ಎಸೆತಗಳಲ್ಲಿ 50 ರನ್ ಗಳಿಸಿ ಮೊಯಿನ್ ಅಲಿ ಎಸೆತದಲ್ಲಿ ಎಲ್ ಬಿಡಬ್ಲ್ಯುಔಟ್ ಬಲೆಗೆ ಬಿದ್ದರು. ಶಹಬಾಝ್ 19 ಎಸೆತಗಳಲ್ಲಿ 18 ರನ್ ಗಳಿಸಿ, ಮೊಯಿನ್ ಅಲಿಗೆ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಕ್ಲಾಸೆನ್ 10 ರನ್ ಹಾಗೂ ನಿತೀಶ್ ಕುಮಾರ್ ರೆಡ್ಡಿ 14 ರನ್ ಗಳಿಸಿ, ಔಟಾಗದೆ ಉಳಿದರು. ಹೈದರಾಬಾದ್ ತಂಡವು 18.1 ಓವರ್‌ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಬೌಲಿಂಗ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಮೊಯೀನ್ ಅಲಿ 2, ಮಹೇಶ್ ತೀಕ್ಷಣ ಹಾಗೂ ದೀಪಕ್ ಚಾಹರ್ ತಲಾ ಒಂದೊಂದು ವಿಕೆಟ್ ಪಡೆದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X