ಐಪಿಎಲ್ | ಮಳೆಯಿಂದ ರದ್ದಾದ ಪಂದ್ಯ; 3ನೇ ತಂಡವಾಗಿ ಪ್ಲೇ-ಆಫ್ ಪ್ರವೇಶಿಸಿದ ಹೈದರಾಬಾದ್

Date:

Advertisements

ಮೇ 16ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ನಡುವಿನ ನಿರ್ಣಾಯಕ ಪಂದ್ಯವು ನಿರಂತರ ಮಳೆಯಿಂದಾಗಿ ರದ್ದುಗೊಂಡಿದೆ.

ಪಂದ್ಯ ರದ್ದಾದರೂ ಕೂಡ, ಸನ್ ರೈಸರ್ಸ್ ಹೈದರಾಬಾದ್ ತಂಡ ಪ್ಲೇ-ಆಫ್ ಪ್ರವೇಶಿಸಿದೆ. ಆ ಮೂಲಕ ಮೂರನೇ ತಂಡವಾಗಿ ಪ್ಲೇ-ಆಫ್ ಟಿಕೆಟ್ ಗಳಿಸುವಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡ ಪ್ಲೇ-ಆಫ್ ಪ್ರವೇಶಿಸಿದೆ.

ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಸನ್ ರೈಸರ್ಸ್ ಹೈದರಾಬಾದ್ 15 ಅಂಕಗಳೊಂದಿಗೆ ಐಪಿಎಲ್ 2024ರ ಪ್ಲೇಆಫ್‌ಗೆ ಪ್ರವೇಶಿಸಿದ ಮೂರನೇ ತಂಡವೆನಿಸಿತು. ಈಗಾಗಲೇ ಪ್ಲೇಆಫ್ ರೇಸ್‌ನಿಂದ ಹೊರಗುಳಿದಿದ್ದ ಗುಜರಾತ್ ಟೈಟನ್ಸ್ ತಂಡ ಲೀಗ್ ಹಂತದಲ್ಲಿ 12 ಅಂಕಗಳೊಂದಿಗೆ ಅಭಿಯಾನ ಮುಗಿಸಿತು. ಈ ಬಾರಿಯ ಐಪಿಎಲ್ ಸೀಸನ್‌ನಲ್ಲಿ ಮಳೆಯಿಂದಾಗಿ ರದ್ದಾದ ಎರಡನೇ ಪಂದ್ಯ ಇದಾಗಿದೆ. ಅದರಲ್ಲೂ ಗುಜರಾತ್ ತಂಡದ ವಿರುದ್ಧದ ಪಂದ್ಯವೇ ರದ್ದಾಗಿರುವುದು ವಿಪರ್ಯಾಸ.‌ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೆಕೆಆರ್ ವಿರುದ್ಧ ಮೇ 13ರಂದು ನಡೆಯಬೇಕಿದ್ದ ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು.

Advertisements

ಹೈದರಾಬಾದ್‌ನಲ್ಲಿ ಗುರುವಾರದಂದು ಸತತವಾಗಿ ಮಳೆಯಾಗುತ್ತಿದ್ದು, ನಿರ್ಣಾಯಕ ಪಂದ್ಯಕ್ಕೆ ಮಳೆ ಭೀತಿ ಎದುರಾಗಿತ್ತು. ಅಂತಿಮವಾಗಿ, ಪಂದ್ಯದ ಅಂಪೈರ್‌ಗಳು ಉಭಯ ತಂಡಗಳ ನಾಯಕರನ್ನು ಕರೆದು, ಕೈ ಕುಲುಕಿಸಿ ಅವರ ಒಪ್ಪಿಗೆಯೊಂದಿಗೆ ಒಂದೂ ಎಸೆತ ಕಾಣದೆ ರದ್ದುಗೊಳಿಸಬೇಕಾಯಿತು.

ಪಂದ್ಯ ಮಳೆಯಿಂದಾಗಿ ರದ್ದುಗೊಂಡ ನಂತರ, 13 ಪಂದ್ಯಗಳಿಂದ 15 ಪಾಯಿಂಟ್‌ಗಳನ್ನು ತಲುಪಿ ಐಪಿಎಲ್ 2024 ಅಂಕಪಟ್ಟಿಯಲ್ಲಿ ಅಗ್ರ-4 ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವೆ ಬೆಂಗಳೂರಿನಲ್ಲಿ ಶನಿವಾರ ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಎರಡು ತಂಡಗಳಲ್ಲಿ ಒಂದು ತಂಡ ಪ್ಲೇ ಆಫ್‌ಗೆ ಪ್ರವೇಶ ಪಡೆಯಲಿದೆ. ಆರ್‌ಸಿಬಿ ಕೇವಲ ಗೆದ್ದರೆ ಸಾಕಾಗುವುದಿಲ್ಲ. ‌ಚೆನ್ನೈಗಿಂತ ಹೆಚ್ಚು ನೆಟ್ ರನ್ ರೇಟ್ ಗಳಿಸಬೇಕಿದೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X