ಭಾರತಕ್ಕೆ ಆಗಮಿಸಿದ ಟಿ20 ವಿಶ್ವಕಪ್ ವಿಜೇತರು; ಚಾಂಪಿಯನ್ಸ್‌ಗೆ ಭವ್ಯ ಸ್ವಾಗತ

Date:

Advertisements

ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿದ್ದ ಟಿ20 ವಿಶ್ವಕಪ್ ವಿಜೇತ ಟೀಂ ಇಂಡಿಯಾ ಭಾರತಕ್ಕೆ ಆಗಮಿಸಿದೆ. ಟಿ20 ವಿಶ್ವ ಚಾಂಪಿಯನ್‌ಗಳು ದೆಹಲಿಯಲ್ಲಿ ಬಂದಿಳಿಯುತ್ತಿದ್ದಂತೆ ಭಾಂಗ್ರಾ, ಡೋಲಿನ ಮೂಲಕ ಭವ್ಯ ಸ್ವಾಗತ ಮಾಡಲಾಗಿದೆ.

ಗುರುವಾರ ಬೆಳಗ್ಗೆ ಐಟಿಸಿ ಮೌರ್ಯ ಹೋಟೆಲ್‌ಗೆ ಭಾರತ ಕ್ರಿಕೆಟ್ ತಂಡ ಆಗಮಿಸುತ್ತಿದ್ದಂತೆ ದೆಹಲಿ ಬೀದಿಗಳಲ್ಲಿ ಹರ್ಷೋದ್ಗಾರ ಕೇಳಿಬಂದಿದೆ. ನಾಯಕ ರೋಹಿತ್ ಶರ್ಮಾ ಮತ್ತು ಅವರ ತಂಡವನ್ನು ಡೋಲಿನ ನಾದದೊಂದಿಗೆ ಭಾಂಗ್ರಾ ನೃತ್ಯದ ಮೂಲಕ ಸ್ವಾಗತಿಸಲಾಗಿದೆ.


ಕಳೆದ ಶನಿವಾರ ನಡೆದ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್‌ಗಳಿಂದ ಸೋಲಿಸಿದ ಟೀ ಇಂಡಿಯಾ ವಿಶ್ವಕಪ್ ಗೆದ್ದಿದೆ. ಅದಾದ ಬಳಿಕ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ, ಅದರ ಸಹಾಯಕ ಸಿಬ್ಬಂದಿ, ಕೆಲವು ಬಿಸಿಸಿಐ ಅಧಿಕಾರಿಗಳು ಮತ್ತು ಆಟಗಾರರ ಕುಟುಂಬಸ್ಥರು ಕಳೆದ ಎರಡು ದಿನಗಳಿಂದ ಬೆರಿಲ್ ಚಂಡಮಾರುತದಿಂದಾಗಿ ಬಾರ್ಬಡೋಸ್‌ನಲ್ಲಿ ಸಿಲುಕಿಕೊಂಡಿದ್ದರು.

Advertisements

ಇದನ್ನು ಓದಿದ್ದೀರಾ?  ಭಾರತಕ್ಕೆ ಮರಳಲು ಸಜ್ಜಾದ ಟೀಂ ಇಂಡಿಯಾ; ಮತ್ತೆ ಭೀಕರ ಚಂಡಮಾರುತದ ಎಚ್ಚರಿಕೆ!

ಇದೀಗ ಗುರುವಾರ ತಂಡವು ದೆಹಲಿಗೆ ಆಗಮಿಸಿದೆ. ಏರ್‌ ಇಂಡಿಯಾ ವಿಶೇಷ ವಿಮಾನದಲ್ಲಿ ತಂಡವನ್ನು ಭಾರತಕ್ಕೆ ವಾಪಸ್ ಕರೆತರಲಾಗಿದೆ. ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದ ಅಭಿಮಾನಿಗಳು ತಂಡಕ್ಕೆ ಭವ್ಯ ಸ್ವಾಗತ ಕೋರಿದರು.

ಬುಧವಾರ ಮುಂಜಾನೆ ಸುಮಾರು 4.50ಕ್ಕೆ ಬಾರ್ಬಡೋಸ್‌ನ ಬ್ರಿಡ್ಜ್‌ ಟೌನ್‌ ಪಟ್ಟಣದಿಂದ ಏರ್‌ ಇಂಡಿಯಾ ಚಾಂಪಿಯನ್ಸ್ 2024 ವಿಶ್ವಕಪ್ ಹೆಸರಿಗೆ ವಿಶೇಷ ಎಐಸಿ24ಡಬ್ಲ್ಯೂಸಿ ವಿಮಾನವು ಹೊರಟ್ಟಿದ್ದು, ಸುಮಾರು 16 ಗಂಟೆಗಳ ತಡೆರಹಿತ ಪ್ರಯಾಣದ ಬಳಿಕ ಗುರುವಾರ ಬೆಳಿಗ್ಗೆ ಆರು ಗಂಟೆ ಸುಮಾರಿಗೆ ದೆಹಲಿಗೆ ಬಂದು ತಲುಪಿದೆ.

ಇನ್ನು ಭಾರತ ತಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದೆ. ಅದಾದ ಬಳಿಕ ಸಂಜೆ 4 ಗಂಟೆಗೆ ದೆಹಲಿಯಿಂದ ವಾಣಿಜ್ಯ ನಗರಿ ಮುಂಬೈಗೆ ತಂಡವು ತೆರಳಲಿದೆ. ಇಲ್ಲಿ ಸಂಜೆ 5ರಿಂದ 7ರ ಸುಮಾರಿಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಯಲಿದೆ. ಸಂಜೆ 7.30ಕ್ಕೆ ವಾಂಖೆಡೆ ಕ್ರೀಡಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

 

View this post on Instagram

 

A post shared by HT City (@htcity)

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X