ಟಿ20 ವಿಶ್ವಕಪ್ | ಆತಿಥೇಯ ಅಮೆರಿಕ ಸೋಲಿಸಿ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದ ಟೀಮ್ ಇಂಡಿಯಾ

Date:

Advertisements

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ನಡೆದ ಐಸಿಸಿ ಟಿ20 ವಿಶ್ವಕಪ್‌ನ ಎ ಗ್ರೂಪ್‌ನ ಪಂದ್ಯದಲ್ಲಿ ಟೀಮ್ ಇಂಡಿಯಾವು ಆತಿಥೇಯ ಅಮೆರಿಕ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಸೂಪರ್ 8ರ ಘಟ್ಟಕ್ಕೆ ಪ್ರವೇಶಿಸಿದೆ.

ಅಮೆರಿಕ ನೀಡಿದ್ದ 111 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನತ್ತಿದ ರೋಹಿತ್ ಶರ್ಮಾ ಬಳಗ, 18.2 ಓವರ್‌ಗಳಲ್ಲಿ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಗುರಿ ತಲುಪಿತು.

ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟ ನಡೆಸಿದರು. ಸೂರ್ಯಕುಮಾರ್ ಯಾದವ್ ಅವರು 49 ಎಸತಗಳಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್‌ನ ನೆರವಿನಿಂದ 50 ರನ್ ಗಳಿಸುವ ಮೂಲಕ ಅರ್ಧಶತಕ ಬಾರಿಸಿ ಮಿಂಚಿದರು.

Advertisements

ಅಮೆರಿಕ ಪರ ಮೊದಲ ಓವರ್ ಎಸೆದ ಕಳೆದ ಪಂದ್ಯದ ಹೀರೋ ಸೌರಭ್ ನೇತ್ರವಾಕರ್, ಮೊದಲ ಓವರ್‌ನ ಎರಡನೇ ಎಸೆತದಲ್ಲಿ ಟೀಮ್ ಇಂಡಿಯಾ ಪರ ಇನ್ನಿಂಗ್ಸ್‌ ಆರಂಭಿಸಿದ್ದ ವಿರಾಟ್ ಕೊಹ್ಲಿಯವರ ವಿಕೆಟ್ ಪಡೆಯುವ ಮೂಲಕ ಆಘಾತ ನೀಡಿದರು. ಕಳೆದ ಮೂರೂ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿಯವರ ಬ್ಯಾಟ್‌ನಿಂದ ಸರಿಯಾದ ರನ್‌ಗಳೇ ಬಂದಿಲ್ಲ.

ಆ ಬಳಿಕ ಮೂರನೇ ಓವರ್‌ನ ಎರಡನೇ ಎಸೆತದಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ವಿಕೆಟ್ ಪಡೆಯುವ ಮೂಲಕ ಕೂಡ ಸೌರಭ್ ನೇತ್ರವಾಕರ್ ಮತ್ತೊಮ್ಮೆ ಆಘಾತ ನೀಡಿದರು. ಔಟಾಗುವುದಕ್ಕೂ ಮುನ್ನ ರೋಹಿತ್ ಶರ್ಮಾ 6 ಎಸೆತಗಳಲ್ಲಿ 3 ರನ್ ಗಳಿಸಲಷ್ಟೇ ಶಕ್ತರಾದರು.

ನಂತರ ಕ್ರೀಸ್‌ನಲ್ಲಿದ್ದ ರಿಷಭ್‌ ಪಂತ್‌ಗೆ ಸೂರ್ಯಕುಮಾರ್ ಯಾದವ್ ಜೊತೆಯಾದರು. ರಿಷಭ್‌ ಪಂತ್‌ 18 ರನ್ ಗಳಿಸಿದ್ದಾಗ ಅಲಿ ಖಾನ್ ಅವರ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ಇನ್ನಿಂಗ್ಸ್ ಕಟ್ಟಿದ ಸೂರ್ಯಕುಮಾರ್ ಯಾದವ್ ಹಾಗೂ ಶಿವಂ ದುಬೆ ಜೋಡಿಯು ಮುರಿಯದ ನಾಲ್ಕನೇ ವಿಕೆಟ್‌ಗೆ 67 ರನ್‌ಗಳ ಜೊತೆಯಾಟ ನಡೆಸಿ, ಗುರಿ ಮುಟ್ಟಿಸುವಲ್ಲಿ ಸಫಲರಾದರು. ಶಿವಂ ದುಬೆ 35 ಎಸೆತಗಳಲ್ಲಿ 31 ರನ್(1 ಬೌಂಡರಿ, 1 ಸಿಕ್ಸ್) ಗಳಿಸಿ, ಅಜೇಯರಾಗುಳಿದರು.

ಒಂದು ಹಂತದಲ್ಲಿ ಟೀಮ್ ಇಂಡಿಯಾವನ್ನು ಕಾಡಿದ ಅಮೆರಿಕ ಬೌಲರ್‌ಗಳು, ಪಂದ್ಯವನ್ನು ತಮ್ಮತ್ತ ಸೆಳೆಯಲು ಸಂಘಟಿತ ಪ್ರಯತ್ನ ನಡೆಸಿದರಾದರೂ, ಸೂರ್ಯಕುಮಾರ್ ಯಾದವ್ 23 ರನ್ ಗಳಿಸಿದ್ದಾಗ ಸೌರಭ್ ನೇತ್ರವಾಕರ್ ಬಿಟ್ಟ ಕ್ಯಾಚ್ ಟೀಮ್ ಇಂಡಿಯಾ ಪಾಲಿಗೆ ವರದಾನವಾಗಿ ಪರಿಣಮಿಸಿತು. ಕ್ಯಾಚ್ ಬಿಟ್ಟಿದ್ದ ಅವಕಾಶ ಬಳಸಿಕೊಂಡ ಸೂರ್ಯಕುಮಾರ್ ಯಾದವ್, ಅರ್ಧಶತಕ ಗಳಿಸಿದ್ದಲ್ಲದೇ, ತಂಡವನ್ನು ಗುರಿ ಮುಟ್ಟಿಸುವಲ್ಲಿ ಸಫಲರಾದರು.

ಯುಎಸ್‌ಎ ಪರ ಉತ್ತಮ ಬೌಲಿಂಗ್ ನಡೆಸಿದ ಭಾರತೀಯ ಮೂಲದ ಸೌರಭ್ ನೇತ್ರವಾಕರ್ 18ಕ್ಕೆ 2 ವಿಕೆಟ್ ಗಳಿಸಿದರೆ, ಅಲಿ ಖಾನ್ 1 ವಿಕೆಟ್ ಪಡೆಯುವಲ್ಲಿ ಸಫಲರಾದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಎಡಗೈ ಬೌಲರ್ ಅರ್ಷ್‌ದೀಪ್ ಸಿಂಗ್ 4 ಓವರ್‌ಗಳನ್ನು ಎಸೆದು ಕೇವಲ 9 ರನ್ ನೀಡಿ 4 ವಿಕೆಟ್ ಕಿತ್ತು ಮಿಂಚಿದ್ದರಿಂದ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X