ಟಿ20 ವಿಶ್ವಕಪ್ | ಅಲ್ಪಮೊತ್ತದ ಕಾಳಗದಲ್ಲಿ ರೋಚಕ ಜಯ ಗಳಿಸಿದ ಟೀಮ್ ಇಂಡಿಯಾ; ಪಾಕ್‌ಗೆ ಭಾರೀ ಮುಖಭಂಗ

Date:

Advertisements

ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ಭಾನುವಾರ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ 19ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನದ ವಿರುದ್ಧ 6 ರನ್‌ಗಳ ರೋಚಕ ಜಯ ಗಳಿಸಿದೆ.

ಇಂದು ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ, ಪಾಕಿಸ್ತಾನದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ 119 ರನ್‌ಗಳಿಸುವಷ್ಟರಲ್ಲಿ ಆಲೌಟ್ ಆಗಿತ್ತು. ಆದರೆ ಟೀಮ್ ಇಂಡಿಯಾ ನೀಡಿದ್ದ 120 ರನ್‌ಗಳ ಅಲ್ಪಮೊತ್ತದ ಗುರಿಯನ್ನು ಬೆನ್ನಟ್ಟುವಲ್ಲಿ ಎಡವಿದ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡ, 6 ರನ್‌ಗಳಿಂದ ಸೋತಿದೆ.

ಉತ್ತಮ ಆರಂಭ ಪಡೆದಿದ್ದ ಪಾಕಿಸ್ತಾನವು ಕೊನೆಯ ಐದು ಓವರ್‌ಗಳಲ್ಲಿ ಎಡವಿದ ಪರಿಣಾಮ, 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 113 ರನ್‌ಗಳನ್ನಷ್ಟೇ ಗಳಿಸಿ, ಈ ಸೋಲು ಅನುಭವಿಸಿದೆ.

Advertisements

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ನಡೆಸಿದ ಜಸ್‌ಪ್ರೀತ್ ಬುಮ್ರಾ ಕೇವಲ 14 ರನ್ ನೀಡಿ ಮೂರು ವಿಕೆಟ್ ಗಳಿಸಿದರು. ಹಾರ್ದಿಕ್ ಪಾಂಡ್ಯಾ 2 ವಿಕೆಟ್ ಗಳಿಸಿದರೆ, ಅಕ್ಷರ್ ಪಟೇಲ್ ಹಾಗೂ ಅರ್ಷ್‌ದೀಪ್ ಸಿಂಗ್ ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಪಾಕಿಸ್ತಾನವು ಒಂದು ಹಂತದಲ್ಲಿ 80 ರನ್ ಗಳಿಸಿದ್ದ ವೇಳೆ ಕೇವಲ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆದರೆ ಕೈಯ್ಯಲ್ಲಿ ವಿಕೆಟ್ ಇದ್ದರೂ ಕೂಡ ಕೊನೆಯ ಘಳಿಗೆಯಲ್ಲಿ ಅದೃಷ್ಟ ಪಾಕಿಸ್ತಾನದ ಕೈ ಹಿಡಿಯದೆ, ಟೀಮ್ ಇಂಡಿಯಾ ಪಾಲಾಯಿತು.

ಬ್ಯಾಟಿಂಗ್‌ನಲ್ಲಿ ಪಾಕಿಸ್ತಾನದ ಪರ ಮೊಹಮ್ಮದ್ ರಿಝ್ವಾನ್ 31 ರನ್, ಇಮಾದ್ ವಾಸೀಮ್ 15, ಬಾಬರ್ ಆಝಂ 13, ಉಸ್ಮಾನ್ 13, ಫಖರ್ ಝಮಾನ್ 13 ರನ್ ಗಳಿಸಿದರು.

ಪಾಕಿಸ್ತಾನವು ಈ ಸೋಲಿನೊಂದಿಗೆ ಸೂಪರ್ 8ರ ಘಟ್ಟ ಪ್ರವೇಶಿಸುವುದು ಕಷ್ಟವೆನಿಸಿದೆ. ಅಮೆರಿಕ ವಿರುದ್ಧ ಮೊದಲ ಪಂದ್ಯವನ್ನಾಡಿದ್ದ ಪಾಕಿಸ್ತಾನವು ತಂಡವು, ಸೂಪರ್ ಓವರ್‌ನಲ್ಲಿ ಸೋತಿತ್ತು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X