ರಣಜಿಯಲ್ಲೂ ವೈಫಲ್ಯ ಕಂಡ ಟೀಂ ಇಂಡಿಯಾ ಸ್ಟಾರ್‌ ಆಟಗಾರರು: ಸಾಲಾಗಿ ಪೆವಿಲಿಯನ್‌ ಕಡೆ ಹೆಜ್ಜೆ

Date:

Advertisements

ರಣಜಿ ಮೂಲಕ ಅನುಭವ ಪಡೆದುಕೊಳ್ಳಲಿ ಎಂದು ಟೀಂ ಇಂಡಿಯಾ ಸ್ಟಾರ್‌ ಆಟಗಾರರನ್ನು ದೇಶೀಯ ಕ್ರಿಕೆಟ್‌ನಲ್ಲಿ ಆಡಿಸಲಾಗುತ್ತಿದೆ. ಆದರೆ ಇಂದಿನಿಂದ ಶುರುವಾದ ರಣಜಿ ಪಂದ್ಯದಲ್ಲಿ ಆಡಿದ ಬಹುತೇಕರು ವೈಫಲ್ಯ ಕಂಡಿದ್ದಾರೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರು ಬರೋಬ್ಬರಿ 9 ವರ್ಷಗಳ ಬಳಿಕ ರಣಜಿ ಕ್ರಿಕೆಟ್‌ಗೆ ಮರಳಿದ್ದಾರೆ. ಜಮ್ಮು ಕಾಶ್ಮೀರ ವಿರುದ್ದದ ರಣಜಿ ಪಂದ್ಯದಲ್ಲಿ ರೋಹಿತ್ ಶರ್ಮಾ ಆಡುತ್ತಿದ್ದಾರೆ. ಅಲ್ಲದೆ ಟೀಂ ಇಂಡಿಯಾ ಓಪನರ್ ಯಶಸ್ವಿ ಜೈಸ್ವಾಲ್ ಕೂಡಾ ಇದೇ ಪಂದ್ಯದಲ್ಲಿ ರಣಜಿಗೆ ಮರಳಿದ್ದಾರೆ. ಆದರೆ ಇಬ್ಬರೂ ಕೂಡಾ ವೈಫಲ್ಯ ಅನುಭವಿಸಿದರು.

ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿಯಲ್ಲಿ ಪಂದ್ಯದಲ್ಲಿ ರೋಹಿತ್ ಕೇವಲ ಮೂರು ರನ್‌ಗೆ ಔಟಾದರು. ಜಮ್ಮು ಕಾಶ್ಮೀರ ಬೌಲರ್ ಉಮರ್ ನಜೀರ್ ಮಿರ್ ಎಸೆತದಲ್ಲಿ ಪರಾಸ್ ಡೋಗ್ರಾಗೆ ಕ್ಯಾಚ್ ನೀಡುವ ಮೂಲಕ ಔಟಾದರು.

Advertisements

ಒಂಬತ್ತು ವರ್ಷಗಳ ಭಾರತದ ಪ್ರಮುಖ ದೇಶೀಯ ಪ್ರಥಮ ದರ್ಜೆ ಸ್ಪರ್ಧೆಗೆ ಮರಳಿದ ಅವರು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು.ನಾಲ್ಕು ರನ್ ಗಳಿಸಿದ್ದ ಜೈಸ್ವಾಲ್ ಎಲ್‌ಬಿಗೆ ಪೆವಿಲಿಯನ್‌ಗೆ ತೆರಳಿದರು.

ಈ ಸುದ್ದಿ ಓದಿದ್ದೀರಾ? ಕ್ರಿಕೆಟ್ | ಬಿಸಿಸಿಐನ ಕೆಟ್ಟ ರಾಜಕಾರಣದಿಂದ ಮರೆಯಾದ ಮಿಂಚಿನ ಆಟಗಾರರು

ಸ್ಟಾರ್ ಆಟಗಾರರಾದ ಶ್ರೇ ಯಸ್ ಅಯ್ಯರ್, ಅಜಿಂಕ್ಯ ರಹಾನೆ ಮತ್ತು ಶುಭಂ ದುಬೆ ಕೂಡಾ ವೈಫಲ್ಯ ಅನುಭವಿಸಿದರು. ಮತ್ತೊಂದೆಡೆ ಪಂಜಾಬ್ ತಂಡದ ನಾಯಕತ್ವ ವಹಿಸಿರುವ ಶುಭಮನ್ ಗಿಲ್ ಕೂಡಾ ನಿರಾಸೆ ಅನುಭವಿಸಿದರು.

ಕರ್ನಾಟಕ ವಿರುದ್ದದ ಪಂದ್ಯದಲ್ಲಿ ಗಿಲ್ ನಾಲ್ಕು ರನ್ ಗೆ ಔಟಾದರು. 26 ಓವರ್ ಅಂತ್ಯಕ್ಕೆ ಪಂಜಾಬ್ 47 ರನ್ ಗೆ ಏಳು ವಿಕೆಟ್ ಕಳೆದುಕೊಂಡಿದೆ.

ಡೆಲ್ಲಿ ತಂಡದ ಪರ ಕಣಕ್ಕಿಳಿದ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಕೂಡ ತಮ್ಮ ಪುನರಾಗಮನವನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ. ಸೌರಾಷ್ಟ್ರ ವಿರುದ್ದದ ಪಂದ್ಯದಲ್ಲಿ ಪಂತ್ ಹತ್ತು ಎಸೆದ ಎದುರಿಸಿ ಕೇವಲ ಒಂದು ರನ್‌ಗೆ ಔಟಾದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X