IND vs AUS ಟೆಸ್ಟ್ | ಭಾರತವನ್ನು ಫಾಲೋ ಆನ್‌ನಿಂದ ತಪ್ಪಿಸಿದ ಜಡೇಜ, ಬೂಮ್ರಾ, ಆಕಾಶ್

Date:

Advertisements

ಬ್ರಿಸ್ಬೇನ್‌ನಲ್ಲಿರುವ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ, ಜಸ್‌ಪ್ರೀತ್ ಬೂಮ್ರಾ, ಆಕಾಶ್ ದೀಪ್, ಕೆಎಲ್‌ ರಾಹುಲ್ ಮತ್ತು ರವೀಂದ್ರ ಜಡೇಜ ಸಹಾಯದಿಂದ ಭಾರತವು ಫಾಲೋ ಆನ್ ಆಗುವುದನ್ನು ತಪ್ಪಿಸಿಕೊಂಡಿದೆ.

ಮಳೆಯ ಅಡೆತಡೆಗಳ ನಡುವೆ ನಡೆದ ನಾಲ್ಕನೇ ದಿನದಾಟದ ಅಂತ್ಯಕ್ಕೆ ಭಾರತವು 74.5 ಓವರ್‌ಗಳಲ್ಲಿ ಒಂಬತ್ತು ವಿಕೆಟ್ ಕಳೆದುಕೊಂಡು 252 ರನ್‌ಗಳನ್ನು ಪೇರಿಸಿದೆ.

ಇದನ್ನು ಓದಿದ್ದೀರಾ? IND vs AUS | ಆಸೀಸ್‌ 445ಕ್ಕೆ ಆಲ್ಔಟ್; ಭಾರತಕ್ಕೆ ಆರಂಭಿಕ ಆಘಾತ, ನಿರಾಶೆ ಮೂಡಿಸಿದ ಕೊಹ್ಲಿ

Advertisements

ಭಾರತಕ್ಕೆ ಫಾಲೋ ಆನ್ ತಪ್ಪಿಸಲು ಒಟ್ಟು 245 ರನ್‌ಗಳ ಅಗತ್ಯವಿತ್ತು. ಆದರೆ ಆಕಾಶ್ ದೀಪ್ ಮತ್ತು ಜಸ್‌ಪ್ರೀತ್ ಜೊತೆಯಾಟವು 39 ರನ್‌ಗಳನ್ನು ಪಡೆದುಕೊಂಡಿದೆ. ಜೊತೆಗೆ 10ನೇ ವಿಕೆಟ್ ಅನ್ನು ಕೂಡಾ ಉಳಿಸಿಕೊಂಡಿದೆ.

ಕೆ ಎಲ್ ರಾಹುಲ್ 84 ರನ್ ಪಡೆದರೆ, ರವೀಂದ್ರ ಜಡೇಜ 77 ರನ್ ಗಳಿಸಿದರು. ಕೊನೆಯಲ್ಲಿ ಆಕಾಶ್ ದೀಪ್ 27 ರನ್ ಗಳಿಸಿದರು. ಜಸ್‌ಪ್ರೀತ್ ಬೂಮ್ರಾ 10 ರನ್‌ ಪಡೆದು ಔಟ್ ಆಗದೆ ಉಳಿದರು.

ಇದನ್ನು ಓದಿದ್ದೀರಾ? ಮೊದಲ ಟೆಸ್ಟ್ ಪಂದ್ಯ | ಅಶ್ವಿನ್ ಬಲದಿಂದ ಬಾಂಗ್ಲಾದೇಶವನ್ನು ಮಣಿಸಿದ ಭಾರತ

ಪಂದ್ಯದಲ್ಲಿ ಇನ್ನು ಒಂದು ದಿನಗಳು ಮಾತ್ರ ಬಾಕಿಯಿದೆ. ಆದರೆ ಭಾರತ ಇನ್ನೂ 193 ರನ್‌ಗಳ ಹಿನ್ನಡೆ ಹೊಂದಿದೆ.

ಏನಿದು ಫಾಲೋ ಆನ್?

ಫಾಲೋ ಆನ್ ಎಂಬುದು ಟೆಸ್ಟ್ ಕ್ರಿಕೆಟ್‌ನಲ್ಲಿನ ಒಂದು ನಿಯಮವಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿನ ತಂಡವು ಕನಿಷ್ಠ 200 ರನ್‌ಗಳ ಮುನ್ನಡೆ ಸಾಧಿಸದಿದ್ದರೆ ಮೊದಲ ಇನ್ನಿಂಗ್ಸ್ ಮುಗಿದ ತಕ್ಷಣ ಮತ್ತೆ ಬ್ಯಾಟಿಂಗ್ ಮಾಡಬೇಕಾಗುತ್ತದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X