ಭಾರತ – ಆಸ್ಟ್ರೇಲಿಯಾ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳ ಪಾರಮ್ಯ; ಒಂದೇ ದಿನ 17 ವಿಕೆಟ್ ಪತನ

Date:

Advertisements

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ನಡೆಯುತ್ತಿರುವ ಭಾರತ – ಆಸೀಸ್‌ ಮೊದಲ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳು ಪಾರಮ್ಯ ತೋರಿದ್ದಾರೆ. ಒಂದೇ ದಿನ ಎರಡೂ ತಂಡಗಳಿಂದ 17 ವಿಕೆಟ್ ಪತನವಾಗಿದೆ.

ಪರ್ತ್‌ನ ಆಪ್ಟಸ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್‌ ಗೆದ್ದು ಟೀಂ ಇಂಡಿಯಾದ ನಾಯಕ ಜಸ್‌ಪ್ರೀತ್‌ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು.

ಆದರೆ ನಾಯಕನ ನಿರೀಕ್ಷೆಗೆ ತಕ್ಕಂತೆ ಭಾರತದ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನಿಂತು ಉತ್ತಮ ಪ್ರದರ್ಶನ ನೀಡಲಿಲ್ಲ. ಆಸೀಸ್ ಬೌಲರ್‌ಗಳ ದಾಳಿಗೆ ನಡುಕಿದ ಭಾರತ ಮೊದಲ ಇನಿಂಗ್ಸ್‌ನಲ್ಲಿ 49.4 ಓವರ್‌ಗಳಲ್ಲಿ 150 ರನ್ ಗಳಿಸವಷ್ಟರಲ್ಲಿ ಆಲೌಟ್‌ ಆಯಿತು.

Advertisements

ಪಾದರ್ಪಣೆ ಪಂದ್ಯದಲ್ಲಿ ಭರವಸೆ ಹುಟ್ಟು ಹಾಕಿದ ನಿತೀಶ್‌ಕುಮಾರ್ ರೆಡ್ಡಿ 41 ರನ್ ಕಲೆ ಹಾಕುವ ಮೂಲಕ ಟೀಮ್ ಇಂಡಿಯಾ ಪರ ಗರಿಷ್ಠ ಸ್ಕೋರ್‌ ದಾಖಲಿಸಿದರು. ಉಳಿದಂತೆ ಕೆ ಎಲ್‌ ರಾಹುಲ್‌ (26) ಹಾಗೂ ರಿಷಬ್‌ ಪಂತ್‌(37) ಬಿಟ್ಟರೆ ಉಳಿದ ಆಟಗಾರರು ತಕ್ಕ ಪ್ರದರ್ಶನ ತೋರಲಿಲ್ಲ.

ಈ ಸುದ್ದಿ ಓದಿದ್ದೀರಾ? ಶ್ರೇಯಸ್‌ ಅಯ್ಯರ್‌ ಮುಂಬೈ ತಂಡದ ನಾಯಕನಾಗಿ ನೇಮಕ

ಆಸೀಸ್‌ ಪರ ಜೋಶ್ ಹೇಜಲ್ವುಡ್ 4 ವಿಕೆಟ್ ಕಬಳಿಸಿದರೆ, ಉಳಿದಂತೆ ಮಿಷಲ್ ಸ್ಟಾರ್ಕ್, ನಾಯಕ ಪ್ಯಾಟ್ ಕಮ್ಮಿನ್ಸ್ ಮತ್ತು ಮಿಚೆಲ್ ಮಾರ್ಷ್ ತಲಾ 2 ವಿಕೆಟ್ ಪಡೆದರು.

ನಂತರ ಮೊದಲ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡ ದಿನಾದಾಂತ್ಯಕ್ಕೆ 27 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು ಕೇವಲ 67 ರನ್‌ ಗಳಿಸಿ 83 ರನ್‌ ಹಿನ್ನಡೆಯಲ್ಲಿದೆ. ಆಸ್ಟ್ರೇಲಿಯಾದ ಯಾವ ಬ್ಯಾಟರ್​ಗಳು 20 ರನ್​ಗಳ ಗಡಿ ಮುಟ್ಟಲು ಸಾಧ್ಯವಾಗಲಿಲ್ಲ. ತಂಡದ ಪರ ಅಲೆಕ್ಸ್ ಕ್ಯಾರಿ ಅತ್ಯಧಿಕ ಅಜೇಯ 19 ರನ್​ಗಳು ಮಾತ್ರ ಗಳಿಸಿದರು.

ಅಮೋಘ ಪ್ರದರ್ಶನ ತೋರಿದ ನಾಯಕ ಜಸ್‌ಪ್ರೀತ್‌ ಬುಮ್ರಾ 17 ರನ್‌ಗೆ 4 ವಿಕೆಟ್‌ ಕಬಳಿಸಿದರೆ, ಮೊಹಮ್ಮದ್‌ ಸಿರಾಜ್‌ 17/ 2 ಹಾಗೂ ಹರ್ಷಿತ್‌ ರಾಣಾ 33/1 ವಿಕೆಟ್ ಕಿತ್ತು ಆಸೀಸ್‌ ಬ್ಯಾಟರ್‌ಗಳನ್ನು ಸರದಿ ಸಾಲಿನಲ್ಲಿ ಪೆವಿಲಿಯನ್‌ಗೆ ಅಟ್ಟಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X