ವಿಶ್ವಕಪ್ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ ಮೌನ ಮುರಿದ ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್

Date:

Advertisements

ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟ ಬಗ್ಗೆ ಮೊದಲ ಬಾರಿಗೆ  ಆಸೀಸ್ ಕ್ರಿಕೆಟಿಗ ಮಿಚೆಲ್ ಮಾರ್ಷ್ 12 ದಿನಗಳ ನಂತರ ಮೌನ ಮುರಿದಿದ್ದಾರೆ.

ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ 32 ವರ್ಷದ ಮಿಚೆಲ್ ಮಾರ್ಷ್ ಅವರು “ನಾನು ಕಾಲಿಟ್ಟಿರುವ ಟ್ರೋಫಿಯ ಭಾವಚಿತ್ರದಲ್ಲಿ ನಿಸ್ಸಂಶಯವಾಗಿ ಯಾವುದೇ ಅಗೌರವ ಇರಲಿಲ್ಲ. ನಾನು ಅದರ ಬಗ್ಗೆ ಹೆಚ್ಚು ಯೋಚಿಸಲೂ ಇಲ್ಲ. ಸಾಮಾಜಿಕ ಮಾಧ್ಯಮದಲ್ಲಿ ಈ ಫೋಟೋ ವೈರಲ್‌ ಆಗಿರುವ ಬಗ್ಗೆ ನನ್ನ ಸ್ನೇಹಿತರು ಹೇಳಿದ್ದರು. ನಾನು ಯಾವ ಸಂದೇಶವನ್ನು ಕೂಡ ನೋಡಿಲ್ಲ. ಭಾವಚಿತ್ರದಲ್ಲಿ ಯಾವುದೇ ಅಗೌರವ ಇಲ್ಲ” ಎಂದು ತಿಳಿಸಿದ್ದಾರೆ.

ಆಸೀಸ್‌ನ ಎರಡನೇ ಕ್ರಮಾಂಕದ ಆಟಗಾರ ಮಿಚೆಲ್ 2 ಶತಕ ಹಾಗೂ 1 ಅರ್ಧ ಶತಕದೊಂದಿಗೆ ಟೂರ್ನಿಯಲ್ಲಿ 441 ರನ್‌ ಕಲೆ ಹಾಕಿದ್ದರು.

Advertisements

ಇವರ ತಂದೆ ಜೆಫ್‌ ಮಾರ್ಷ್ ಕೂಡ 80ರ ದಶಕದಲ್ಲಿ ಆಸ್ಟ್ರೇಲಿಯಾದ ಕ್ರಿಕೆಟ್ ತಂಡದ ಆಟಗಾರರಾಗಿದ್ದು, 1987ರಲ್ಲಿ ಆಸೀಸ್‌ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಟ್ರೋಫಿ ಮುಡಿಗೇರಿಸಿಕೊಂಡಿದ್ದ ಬಳಗದ ಸದಸ್ಯರಾಗಿದ್ದರು. ಇವರ ಸೋದರ ಶೇನ್‌ ಮಾರ್ಷ್ ಕೂಡ ಕ್ರಿಕೆಟ್ ಆಟಗಾರರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಟ್ಯಾಕ್ಸಿ ಚಾಲಕನ ಸಲಹೆಗೆ ಕೃತಜ್ಞತೆ ಸಲ್ಲಿಸಿದ ಕ್ರಿಕೆಟಿಗ ಜಾಂಟಿ ರೋಡ್ಸ್

ವಿಶ್ವಕಪ್ ಗೆಲುವಿನ ನಂತರ ಸಂಭ್ರಮ ಆಚರಿಸಿಕೊಂಡಿದ್ದ ಆಸೀಸ್ ಪಡೆ, ತನ್ನ ತಂಡದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿತ್ತು. ಚಿತ್ರವೊಂದರಲ್ಲಿ ಮಿಚೆಲ್ ಮಾರ್ಷ್ ಟ್ರೋಫಿಯ ಮೇಲೆ ಕಾಲಿಟ್ಟು ಪೋಸ್ ನೀಡಿದ್ದರು. ಮಿಚೆಲ್ ಮಾರ್ಷ್ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್‌ ಆಗಿತ್ತು.

ನ.19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಭಾರತ ತಂಡವನ್ನು ಪ್ಯಾಟ್‌ ಕಮಿನ್ಸ್ ಸಾರಥ್ಯದ ಆಸ್ಟ್ರೇಲಿಯಾ ಬಳಗ 6 ವಿಕೆಟ್‌ನಿಂದ ಮಣಿಸಿ ಟ್ರೋಫಿಯನ್ನು ತನ್ನದಾಗಿಸಿಕೊಂಡಿತ್ತು.

ಟೂರ್ನಿಯುದ್ದಕ್ಕೂ ಒಂದೂ ಪಂದ್ಯವನ್ನು ಸೋಲದ ಭಾರತ ಫೈನಲ್‌ ಪಂದ್ಯದಲ್ಲಿ ಎಡವಿತ್ತು. ಕೇವಲ 240 ರನ್‌ಗಳಿಗೆ ಆಲೌಟ್‌ ಆಗಿತ್ತು. ಈ ರನ್‌ಗಳನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಕೇವಲ 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವು ಸಾಧಿಸಿತ್ತು.

ಸದ್ಯ ಟೀಂ ಇಂಡಿಯಾ – ಆಸ್ಟ್ರೇಲಿಯಾ ವಿರುದ್ಧ ಭಾರತದಲ್ಲಿ 5 ಪಂದ್ಯಗಳ ಟಿ20 ಸರಣಿ ಆಡುತ್ತಿದ್ದು, ಈಗಾಗಲೇ 2-1ರಲ್ಲಿ ಭಾರತ ಮುಂದಿದ್ದು, ಉಳಿದ ಎರಡು ಪಂದ್ಯಗಳು ರಾಯ್‌ಪುರ ಹಾಗೂ ಬೆಂಗಳೂರಿನಲ್ಲಿ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X