ಮೂರನೇ ಟೆಸ್ಟ್ | ಬೆನ್ ಡಕೆಟ್ ಭರ್ಜರಿ ಶತಕ: ಸುಭದ್ರ ಸ್ಥಿತಿಯಲ್ಲಿ ಇಂಗ್ಲೆಂಡ್

Date:

Advertisements

ಗುಜರಾತ್‌ನ ರಾಜ್‌ಕೋಟ್‌ನಲ್ಲಿರುವ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದೆ. ಆರಂಭಿಕ ಆಟಗಾರ ಬೆನ್ ಡಕೆಟ್ ಅಮೋಘ ಆಟವಾಡಿ, ಭರ್ಜರಿ ಶತಕ ಸಿಡಿಸಿದ್ದಾರೆ.

ಸದ್ಯ 133 ರನ್ ಗಳಿಸಿರುವ ಬೆನ್ ಡಕೆಟ್ ಅವರು, ಆಕರ್ಷಕ 21 ಬೌಂಡರಿ ಹಾಗೂ ಎರಡು ಸಿಕ್ಸರ್‌ಗಳು ಕೂಡ ಸೇರಿದ್ದವು. 9 ರನ್ ಗಳಿಸಿರುವ ಜೋ ರೋಟ್ ಜೊತೆಗೆ ಮೂರನೇ ದಿನಕ್ಕೆ ಕ್ರೀಸ್‌ ಕಾಯ್ದುಕೊಂಡಿದ್ದಾರೆ.

ಝಾಕ್ ಕ್ರಾಲಿ 15, ಓಲಿ ಪೋಪ್ 39 ರನ್ ಗಳಿಸಿ ಔಟಾದರು. ಟೀಮ್ ಇಂಡಿಯಾ ಪರ ಸಿರಾಜ್‌ ಮತ್ತು ಅಶ್ವಿನ್ ತಲಾ ಒಂದು ವಿಕೆಟ್ ಪಡೆದರು.

Advertisements

ಭಾರತ ಮೊದಲ ಇನ್ನಿಂಗ್ಸ್ ನಲ್ಲಿ 445 ರನ್ ಗಳಿಗೆ ಆಲೌಟಾಗಿತ್ತು. ಜಡೇಜ 112ಕ್ಕೆ ಔಟಾದರೆ, ಕುಲದೀಪ್ ಯಾದವ್ 4 ರನ್ ಗಳಿಸುವಷ್ಟರಲ್ಲಿ ಔಟಾಗಿ ಪೆವಿಲಿಯನ್‌ಗೆ ಮರಳಿದರು. ಆ ಬಳಿಕ ಧ್ರುವ್ ಜುರೆಲ್ 46, ಅಶ್ವಿನ್ 37, ಬುಮ್ರಾ 26 ರನ್ ಗಳಿಸಿ ಔಟಾದರು. ಸಿರಾಜ್ 3 ರನ್ ಗಳಿಸಿ ಔಟಾಗದೆ ಉಳಿದರು.

ಇಂಗ್ಲೆಂಡ್ ಪರ ಮಾರ್ಕ್ ವುಡ್ 4 ವಿಕೆಟ್ ಪಡೆದರು. ರೆಹಾನ್ ಅಹ್ಮದ್ 2 ವಿಕೆಟ್, ಜೇಮ್ಸ್ ಆಂಡರ್ಸನ್, ಟಾಮ್ ಹಾರ್ಟ್ಲಿ, ರೂಟ್ ತಲಾ ಒಂದು ವಿಕೆಟ್ ಪಡೆದರು.

500 ವಿಕೆಟ್‌ಗಳ ಸರದಾರನಾದ ರವಿಚಂದ್ರನ್ ಅಶ್ವಿನ್

ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಟೀಮ್ ಇಂಡಿಯಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಮೊದಲ ವಿಕೆಟ್ ಪಡೆಯುವ ಮೂಲಕ ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ಗಳ ಸರದಾರರ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಟೆಸ್ಟ್‌ ಕ್ರಿಕೆಟ್‌ನಲ್ಲಿ ‘500 ವಿಕೆಟ್‌ಗಳ ಸರದಾರ’ನಾದ ಆಫ್ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್

ಎರಡನೇ ದಿನದಾಟದ ಪಂದ್ಯದಲ್ಲಿ ಇಂಗ್ಲೆಂಡ್‌ನ ಆರಂಭಿಕ ಆಟಗಾರ ಝಾಕ್ ಕ್ರಾಲಿ ಅವರನ್ನು ತನ್ನ ಸ್ಪಿನ್ ಮಾಂತ್ರಿಕತೆಗೆ ಬೀಳಿಸಿದ ತಮಿಳುನಾಡಿನ ರವಿಚಂದ್ರನ್ ಅಶ್ವಿನ್, ಈ ಸಾಧನೆಯನ್ನು ಮಾಡಿದ್ದಾರೆ.

ಅಶ್ವಿನ್ ಎಸೆದ ಎಸೆತವನ್ನು ಎದುರಿಸಿದ ಕ್ರಾಲಿ, ಸ್ವೀಪ್ ಮಾಡುವ ಮೂಲಕ ಬೌಂಡರಿಗೆ ಯತ್ನಿಸಿದರು. ಆದರೆ ವಿಫಲವಾಗಿ ಅದು ಟಾಪ್ ಎಡ್ಜ್ ಆದ್ದರಿಂದ ರಜತ್ ಪಾಟೀದಾರ್‌ಗೆ ಕ್ಯಾಚಿತ್ತು ನಿರ್ಗಮಿಸಿದರು. ಆ ಮೂಲಕ ರವಿಚಂದ್ರನ್ ಅಶ್ವಿನ್ 500ನೇ ವಿಕೆಟ್‌ ಪಡೆದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X