ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತೀಯ ಬೌಲರ್‌ಗಳ ಬೆವರಿಳಿಸಿದ ಟ್ರಾವಿಸ್‌ ಹೆಡ್-ಸ್ಮಿತ್‌

Date:

Advertisements

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯದ ಮೊದಲ ದಿನವೇ ಆಸ್ಟ್ರೇಲಿಯಾ ಕೈ ಮೇಲಾಗಿದೆ. ಟೀಮ್‌ ಇಂಡಿಯಾದ ಐವರು ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದ ಆಸೀಸ್‌ ಪಡೆ, ಮೊದಲ ದಿನದಂತ್ಯಕ್ಕೆ 3 ವಿಕೆಟ್ ನಷ್ಟದಲ್ಲಿ 327 ರನ್ ಗಳಿಸಿದೆ.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಬುಧವಾರ ಆರಂಭವಾದ ʻಫೈನಲ್‌ ಪೈಟ್‌ʼನಲ್ಲಿ ಟ್ರಾವಿಸ್ ಹೆಡ್ ಭರ್ಜರಿ ಶತಕ ಮತ್ತು ಸ್ಮೀವ್ ಸ್ಮಿತ್ ಗಳಿಸಿದ ಅಜೇಯ 95 ರನ್ ಗಳ ನೆರವಿನಿಂದ ಆಸ್ಟ್ರೇಲಿಯಾ ದಿನದಾಟದ ಅಂತ್ಯಕ್ಕೆ 85 ಓವರ್‌ಗಳಲ್ಲಿ ಕೇವಲ 3 ವಿಕೆಟ್ ನಷ್ಟಕ್ಕೆ 327 ರನ್ ಗಳಿಸಿದೆ.

ಸತತ ಎರಡನೇ ಬಾರಿ  ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪ್ರವೇಶಿಸಿರುವ ಭಾರತಕ್ಕೆ ಈ ಬಾರಿ ಚಾಂಪಿಯನ್‌ ಪಟ್ಟ ಒಲಿಯಬೇಕಾದರೆ ಭಾರಿ ಸಹಾಸವನ್ನೇ ಮಾಡಬೇಕಿದೆ. ಇನ್ನು ನಾಲ್ಕು ದಿನಗಳ ಪಂದ್ಯ ಬಾಕಿ ಉಳಿದಿದ್ದು, ಎರಡನೇ ದಿನವೂ ಆಸೀಸ್‌ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ನೆಲೆಯೂರಿ ನಿಂತರೆ ರೋಹಿತ್‌ ಪಡೆಯ ಗೆಲುವಿನ ಕನಸಿಗೆ ಅಡ್ಡಿಯಾಗಲಿದೆ.

Advertisements

ಟಾಸ್​ ಸೋತು ಮೊದಲು ಬ್ಯಾಟಿಂಗ್​ ಆಹ್ವಾನ ಪಡೆದಿದ್ದ ಆಸ್ಟ್ರೇಲಿಯಾ ತಂಡ, ಎರಡು ರನ್‌ ಗಳಿಸುವಷ್ಟರಲ್ಲಿಯೇ ಮೊದಲ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಮುಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಎಡಗೈ ಬ್ಯಾಟರ್‌ ಉಸ್ಮಾನ್ ಖ್ವಾಜಾ ಶೂನ್ಯಕ್ಕೆ ಕ್ಯಾಚಿತ್ತು ನಿರ್ಗಮಿಸಿದ್ದರು. ಡೇವಿಡ್​ ವಾರ್ನರ್​ 43 ರನ್ ಗಳಿಸಿ ಶಾರ್ದೂಲ್​ ಠಾಕೂರ್​ ಬೌಲಿಂಗ್​ನಲ್ಲಿ ವಿಕೆಟ್​ ಒಪ್ಪಿಸಿದರು. ಭೋಜನ ವಿರಾಮದ ಬಳಿ ಕ್ರೀಸ್​ಗೆ ಬಂದ ಮಾರ್ನಸ್ ಲ್ಯಾಬುಸ್ಚಾಗ್ನೆ 26 ರನ್​ ಗಳಿಸಿದ್ದ ವೇಳೆ ಮೊಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಕ್ಲೀನ್‌ ಬೌಲ್ಡ್‌ ಆದರು.

24.1 ಓವರ್‌ಗಳಲ್ಲಿ 76 ರನ್‌ಗಳಿಗೆ ಆಸ್ಟ್ರೇಲಿಯಾದ 3 ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾಗಿದ್ದ ಭಾರತ, ಪಂದ್ಯದಲ್ಲಿ ಮೇಲುಗೈ ಸಾಧಿಸುವ ಸೂಚನೆ ನೀಡಿತ್ತು. ಆದರೆ ಆ ಬಳಿಕ ಒಂದಾದ ಸ್ಟೀವ್​ ಸ್ಮಿತ್​ ಮತ್ತು ಟ್ರಾವಿಸ್​ ಹೆಡ್​ ತಂಡದ ನೆರವಿಗೆ ನಿಂತರು.

ನಾಲ್ಕನೇ ವಿಕೆಟ್‌ 251 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದ ಟ್ರಾವಿಸ್‌-ಸ್ಮಿತ್‌ ಜೋಡಿ, ಎರಡನೇ ದಿನಕ್ಕೆ ಬ್ಯಾಟಿಂಗ್‌ ಕಾಯ್ದುಕೊಂಡಿದೆ. 156 ಎಸೆತದಲ್ಲಿ 1 ಸಿಕ್ಸ್ ಮತ್ತು 22 ಬೌಂಡರಿಗಳ ಮೂಲಕ ಹೆಡ್‌ 146 ರನ್‌ ಮತ್ತು ಸ್ಟೀವ್​ ಸ್ಮಿತ್​ 227 ಎಸೆತದಲ್ಲಿ 14 ಬೌಂಡರಿಗಳ ಮೂಲಕ 95 ರನ್​ ಗಳಿಸಿ ಅಜೇಯರಾಗುಳಿದಿದ್ದಾರೆ.

ಬೌಲಿಂಗ್‌ನಲ್ಲಿ ಮುಹಮ್ಮದ್ ಶಮಿ, ಮುಹಮ್ಮದ್ ಸಿರಾಜ್​, ಶಾರ್ದೂಲ್​ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X