ನೋ‌ಬಾಲ್ ತೀರ್ಪು ನೀಡಿದ ಅಂಪೈರ್‌; ಚಾಕುವಿನಿಂದ ಇರಿದು ಹತ್ಯೆ

Date:

ಕ್ರಿಕೆಟ್‌ ಪಂದ್ಯವೊಂದರ ವೇಳೆ ತಪ್ಪಾದ ನಿರ್ಣಯ ನೀಡಿದ್ದಾನೆ ಎಂದು ಆರೋಪಿಸಿ ಅಂಪೈರ್‌ನನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾದ ಘಟನೆ ಒಡಿಶಾದಲ್ಲಿ ನಡೆದಿದೆ. ಮೃತ ಯುವಕನನ್ನು ಲಕ್ಕಿ ರೌತ್ (22) ಎಂದು ಗುರುತಿಸಲಾಗಿದೆ.

- Advertisement -

ಒಡಿಶಾದ ಕಟಕ್ ಜಿಲ್ಲೆಯ ಮಹಿಸಲಂದಾ ಗ್ರಾಮದಲ್ಲಿ ಭಾನುವಾರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಶಂಕರಪುರ ಮತ್ತು ಬ್ರಹ್ಮಪುರ ಗ್ರಾಮಗಳ ನಡುವಿನ ಪಂದ್ಯದಲ್ಲಿ ಲಕ್ಕಿ ರೌತ್ ಅಂಪೈರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದ. ಪಂದ್ಯದ ನಡುವೆ ಲಕ್ಕಿ ನೀಡಿದ್ದ ನೋಬಾಲ್‌ ತೀರ್ಪು ವಿವಾದಕ್ಕೆ ಕಾರಣವಾಗಿತ್ತು. ಅಂಪೈರ್‌ ತೀರ್ಮಾನಕ್ಕೆ ಬ್ರಹ್ಮಪುರ ತಂಡದ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪರ – ವಿರೋಧವಾಗಿ ಉಭಯ ತಂಡಗಳ ನಡುವೆ ಮಾತಿನ ಚಕಮಕಿ ನಡೆದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ವೇಳೆ ಬ್ರಹ್ಮಪುರ ಗ್ರಾಮದ ತಂಡದ ಬೆಂಬಲಿಗರು ಮೈದಾನ ಪ್ರವೇಶಿಸಿ ಅಂಪೈರ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಮೊದಲು ಬ್ಯಾಟ್‌ನಿಂದ ತಲೆಗೆ ಬಡಿದು ಬಳಿಕ ನೆಲಕ್ಕೆ ಬಿದ್ದ ಲಕ್ಕಿ ರೌತ್ ಮೇಲೆ ಸ್ಮೃತಿ ರಂಜನ್ ರಾವತ್‌ ಅಲಿಯಾಸ್ ಮುನಾ ಎಂಬಾತ ಚಾಕುವಿನಿಂದ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಲಕ್ಕಿ ರೌತ್‌ನನ್ನು ಸ್ಥಳೀಯರು ತಕ್ಷಣವೇ ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರಾದರೂ, ಅದಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ತುಷಾರ್​ ದೇಶಪಾಂಡೆ ಐಪಿಎಲ್‌ನ ಮೊತ್ತಮೊದಲ ʻಇಂಪ್ಯಾಕ್ಟ್‌ ಪ್ಲೇಯರ್‌ʼ

ಲಕ್ಕಿ ರೌತ್ ಮೇಲೆ ಚಾಕುವಿನಿಂದ ಇರಿದ ಸ್ಮೃತಿ ರಂಜನ್ ರಾವತ್‌ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆದರೆ, ಗ್ರಾಮಸ್ಥರು ಆತನ ಸ್ನೇಹಿತರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ʻಮುಗುನಿ ರಾವತ್‌, ಜಗರಾವತ್‌ ಹಾಗೂ ಸ್ಮೃತಿ ರಂಜನ್ ರಾವತ್‌ ಎಂಬುವವರು ಲಕ್ಕಿ ರಾವತ್‌ ಮೇಲೆ ಗಂಭೀರ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆʼ ಎಂದು ಎಂದು ಪಂದ್ಯದ ಸಹ ಅಂಪೈರ್ ಪ್ರೀತಿರಂಜನ್ ಸಮಲ್ ಪೊಲೀಸರಿಗೆ ತಿಳಿಸಿದ್ದಾನೆ.

‘ಈ ಪ್ರಕರಣದಲ್ಲಿ ರಾಜಾ, ಸ್ಮೃತಿ ಅಕಾ ಮುನಾ, ಸಂಜಯ್ ಅಕಾ ಮುಗುನಿ ಮತ್ತು ಬಾದಲ್ ಸೇರಿದಂತೆ ನಾಲ್ವರು ಆರೋಪಿಗಳು ಭಾಗಿಯಾಗಿದ್ದಾರೆ. ಎಲ್ಲರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದ್ದೇವೆ ಎಂದು ಕಟಕ್‌ನ ವಲಯ-1 ಎಸಿಪಿ ಅರುಣ್ ಸ್ವೈನ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಜಾತಿ ಕಿರುಕುಳ | ಐಐಟಿ-ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೊಫೆಸರ್ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಐಐಟಿ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ...