ಟಿ20 ವಿಶ್ವಕಪ್ | ಪಾಕ್‌ಗೆ ಶಾಕ್ ನೀಡಿದ ಅಮೆರಿಕ: ಸೂಪರ್ ಓವರ್‌ನಲ್ಲಿ ಐತಿಹಾಸಿಕ ಗೆಲುವು

Date:

Advertisements

ಟಿ20 ವಿಶ್ವಕಪ್‌ನ ಆತಿಥ್ಯ ವಹಿಸಿಕೊಂಡಿರುವ ಅಮೆರಿಕ ತಮ್ಮ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಬಲಿಷ್ಠ ಪಾಕಿಸ್ತಾನ ತಂಡವನ್ನು ಸೂಪರ್ ಓವರ್‌ನಲ್ಲಿ 5 ರನ್‌ಗಳಿಂದ ರೋಚಕವಾಗಿ ಸೋಲಿಸುವ ಮೂಲಕ ಇತಿಹಾಸ ಬರೆದಿದೆ.

ಟಾಸ್ ಗೆದ್ದು‌ ಮೊದಲು ಬ್ಯಾಟಿಂಗ್ ನಡೆಸಿದ್ದ ಕ್ರಿಕೆಟ್ ಶಿಶು ಅಮೆರಿಕ, ಸಂಘಟಿತ ಬೌಲಿಂಗ್‌ನ ನೆರವಿನಿಂದ ಪಾಕಿಸ್ತಾನವನ್ನು 159 ರನ್‌ಗಳಿಗೆ ನಿಯಂತ್ರಿಸಿತ್ತು. ಈ ಗುರಿಯನ್ನು ಬೆನ್ನತ್ತಿದ ಯುಎಸ್‌ಎ, ಕೇವಲ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸಿದ್ದರಿಂದ ಕೊನೆಯ ಓವರ್‌ನಲ್ಲಿ ಪಂದ್ಯವನ್ನು ಟೈ ಮಾಡಿಕೊಂಡಿತ್ತು.

ಆ ಬಳಿಕ ನಡೆದ ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಅಮೆರಿಕ, 18 ರನ್ ಗಳಿಸಿತ್ತಲ್ಲದೇ, 6 ಎಸೆತಗಳಲ್ಲಿ ಪಾಕ್ ಗೆಲುವಿಗೆ 19 ರನ್‌ಗಳ ಗುರಿ ನೀಡಿತ್ತು.

Advertisements

ಅಮೆರಿಕ ಪರ ಸೂಪರ್ ಓವರ್ ಎಸೆದ ಭಾರತೀಯ ಮೂಲದ ಆಟಗಾರ ಸೌರಭ್ ನೇತ್ರವಾಕರ್, ಪಾಕಿಸ್ತಾನದ ಒಂದು ವಿಕೆಟ್ ಕಬಳಿಸಿದ್ದಲ್ಲದೇ ಕೇವಲ 13 ರನ್‌ಗಳಿಗೆ ನಿಯಂತ್ರಿಸುವ ಮೂಲಕ ಐತಿಹಾಸಿಕ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು.


ಅಮೆರಿಕ ವಿರುದ್ಧದ ಈ ಅನಿರೀಕ್ಷಿತ ಸೋಲಿನೊಂದಿಗೆ ಬಾಬರ್ ಆಝಂ ನೇತೃತ್ವದ ಪಾಕಿಸ್ತಾನ ತಂಡವು 2024 ಟಿ20 ವಿಶ್ವಕಪ್ ಅಭಿಯಾನ ಆರಂಭಿಸಿದ್ದು, ಪಾಕ್‌ನ ಕ್ರೀಡಾಭಿಮಾನಿಗಳ ಆಕ್ರೋಶಕ್ಕೆ ಗುರಿಯಾಗಿದೆ.

ಕೆನಡಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಅಮೆರಿಕ ಭರ್ಜರಿ ಗೆಲುವು ಸಾಧಿಸಿತ್ತು. ಟೀಮ್ ಇಂಡಿಯಾ, ಪಾಕಿಸ್ತಾನ, ಅಮೆರಿಕ ಹಾಗೂ ಐರ್ಲ್ಯಾಂಡ್ ತಂಡಗಳು ಎ ಗುಂಪಿನಲ್ಲಿ ಆಡುತ್ತಿವೆ.

ಈಗಾಗಲೇ ಆಡಿರುವ ಎರಡೂ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಆತಿಥೇಯ ಅಮೆರಿಕ ತಂಡ, ಗುಂಪಿನಲ್ಲಿ ಮೊದಲ ಸ್ಥಾನವನ್ನು ಗಟ್ಟಿ ಮಾಡಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X