ಮತ್ತೊಂದು ಇತಿಹಾಸ ನಿರ್ಮಿಸಿದ 13 ವರ್ಷದ ವೈಭವ್ ಸೂರ್ಯವಂಶಿ

Date:

Advertisements

ಐಪಿಎಲ್‌ನಲ್ಲಿ ಅತಿ ಕಿರಿಯ ಆಟಗಾರನಾಗಿ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ, ಈಗ ಲಿಸ್ಟ್-ಎ ಕ್ರಿಕೆಟ್‌ನಲ್ಲೂ ನೂತನ ಇತಿಹಾಸ ಸೃಷ್ಟಿಸಿದ್ದಾನೆ.

ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಹಾರ ಪರ ಆಡುವ ಮೂಲಕ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಲಿಸ್ಟ್-ಎ ಆಟಗಾರನೆನಿಸಿಕೊಂಡಿದ್ದಾರೆ. ಕಳೆದ ತಿಂಗಳು ನಡೆದಿದ್ದ ಐಪಿಎಲ್ ಮೆಗಾ ಹರಾಜಿನಲ್ಲಿ 1.10 ಕೋಟಿ ರೂ.ಗೆ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾಗಿ ಅತಿ ಕಿರಿಯ ವಯಸ್ಸಿಗೆ ಐಪಿಎಲ್​ ಲೋಕಕ್ಕೆ ಕಾಲಿಟ್ಟ ಟೀಂ ಇಂಡಿಯಾ ಕ್ರಿಕೆಟಿಗ ಎಂಬ ದಾಖಲೆ ಬರೆದಿದ್ದ 13 ವರ್ಷದ ವೈಭವ್ ಸೂರ್ಯವಂಶಿ ಇದೀಗ ಲಿಸ್ಟ್ ಎ ಕ್ರಿಕೆಟ್​ನಲ್ಲೂ ಹೊಸ ದಾಖಲೆಯನ್ನು ನಿರ್ಮಿಸಿದ್ದಾನೆ.

ಹೈದರಾಬಾದ್‌ನ ನೆಕ್ಸ್‌ಟ್ ಜೆನ್‌ ಕ್ರಿಕೆಟ್ ಮೈದಾನದಲ್ಲಿ ಆರಂಭವಾಗಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಬಿಹಾರ ತಂಡದ ಪರ ಕಣಕ್ಕಿಳಿಯುವ ಮೂಲಕ ವೈಭವ್ ಲಿಸ್ಟ್-ಎ ಪಂದ್ಯ ಆಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾನೆ.

Advertisements

ವೈಭವ್ ಸೂರ್ಯವಂಶಿ ತನ್ನ 13 ವರ್ಷ 269 ದಿನದ ವಯಸ್ಸಿನಲ್ಲಿ ಬಿಹಾರದ ಪರ ತಮ್ಮ ಮೊದಲ ಪಂದ್ಯವನ್ನು ಆಡಿದ್ದ. ಈ ಮೂಲಕ 1999/2000 ದೇಶೀಯ ಆವೃತ್ತಿಯಲ್ಲಿ 14 ವರ್ಷ ಮತ್ತು 51 ದಿನದಲ್ಲಿ ತಮ್ಮ ಲಿಸ್ಟ್-3 ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೂಲಕ ಇತಿಹಾಸ ಸೃಷ್ಟಿಸಿದ್ದ ಅಲಿ ಅಕ್ಬರ್‌ನನ್ನು ಹಿಂದಿಕ್ಕಿದ್ದಾನೆ.

ಈ ಸುದ್ದಿ ಓದಿದ್ದೀರಾ? ಆರ್‌ ಅಶ್ವಿನ್ | ಸಾಧಾರಣ ಕುಟುಂಬದ ಹುಡುಗ ಸ್ಟಾರ್‌ ಕ್ರಿಕೆಟಿಗನಾದ ಕತೆ

ವಿಜಯ್ ಹಜಾರೆ ಟ್ರೋಫಿಯಲ್ಲಿ ವೈಭವ್ ಸೂರ್ಯವಂಶಿ ಅವರ ಚೊಚ್ಚಲ ಪಂದ್ಯದ ಬಗ್ಗೆ ಹೇಳುವುದಾದರೆ, ವೈಭವ್‌ ಆಡಿದ 2 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿ ಔಟಾದ. ಇದರ ಜೊತೆಗೆ ಬಿಹಾರ ತಂಡ ತನ್ನ ಮೊದಲ ಪಂದ್ಯದಲ್ಲೇ ಮಧ್ಯಪ್ರದೇಶ ವಿರುದ್ಧ 6 ವಿಕೆಟ್‌ಗಳ ಹೀನಾಯ ಸೋಲನ್ನು ಕಾಣಬೇಕಾಯಿತು.

ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಿಹಾರ ತಂಡ ಕೇವಲ 196 ರನ್ ಗಳಿಸಲಷ್ಟೇ ಶಕ್ತವಾಯಿತು. ಗೆಲ್ಲಲು 197 ರನ್‌ಗಳ ಗುರಿ ಪಡೆದ ಮಧ್ಯಪ್ರದೇಶ 24.5 ಓವರ್‌ಗಳು ಬಾಕಿ ಇರುವಂತೆಯೇ ಸುಲಭವಾಗಿ ಗೆಲುವು ಗಳಿಸಿತು. ಮಧ್ಯಪ್ರದೇಶ ಪರ ನಾಯಕ ರಜತ್ ಪಾಟಿದಾರ್ 33 ಎಸೆತಗಳಲ್ಲಿ 55 ರನ್ ಗಳಿಸಿದರೆ, ವಿಕೆಟ್ ಕೀಪರ್ ಹರ್ಷ್ ಗಾವ್ಲಿ 83 ರನ್‌ಗಳನ್ನು ಬಾರಿಸಿ ಗೆಲುವಿನ ಇನಿಂಗ್ಸ್ ಆಡಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X