ವಿರಾಟ್ ಕೊಹ್ಲಿ-ಅನುಷ್ಕಾ ದಂಪತಿಗೆ ಗಂಡು ಮಗು: ಟ್ವೀಟ್ ಮೂಲಕ ಖುಷಿ ಹಂಚಿಕೊಂಡ ಸ್ಟಾರ್ ಆಟಗಾರ

Date:

Advertisements

ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ನಾನು ಎರಡನೇ ಮಗುವಿನ ತಂದೆಯಾಗಿದ್ದೇನೆ ಎಂದು ಟ್ವೀಟ್ ಮಾಡುವ ಮೂಲಕ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಟ್ವೀಟ್‌ನಲ್ಲಿ ಮಾಹಿತಿ ನೀಡಿರುವ ಟೀಮ್ ಇಂಡಿಯಾದ ಮಾಜಿ ನಾಯಕ, “ಫೆ.15ರಂದು ನಮಗೆ ಗಂಡು ಮಗು ಆಗಿದೆ. ‘ಅಕಾಯ್’ ಎಂದು ಹೆಸರಿಟ್ಟಿದ್ದೇವೆ. ತುಂಬಾ ಖುಷಿಯಿಂದ ಈ ಸುದ್ದಿಯನ್ನು ಹಂಚಿಕೊಳ್ಳಲು ಬಯಸುತ್ತೇವೆ. ಮಗಳು ವಾಮಿಕಾಗಳಿಗೆ ಪುಟ್ಟ ಸಹೋದರ ಬಂದಿದ್ದಾನೆ. ನಿಮ್ಮೆಲ್ಲರ ಪ್ರಾರ್ಥನೆ ಇರಲಿ. ನಮ್ಮ ಖಾಸಗಿತನವನ್ನು ಗೌರವಿಸಿ. ಪ್ರೀತಿಯಿಂದ ವಿರಾಟ್ ಮತ್ತು ಅನುಷ್ಕಾ” ಎಂದು ಬರೆದು ಪೋಸ್ಟ್‌ ಮಾಡುವ ಮೂಲಕ ತಿಳಿಸಿದ್ದಾರೆ.

ಸದ್ಯ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದ್ದು, ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಟೀಮ ಹೊರಗುಳಿದಿದ್ದರು. ಆ ಬಳಿಕ ಟೀಮ್ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ, ಇನ್ನುಳಿದ ಮೂರು ಟೆಸ್ಟ್​ಗಳಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದು ಬಿಸಿಸಿಐ ಇತ್ತೀಚೆಗೆ ಅಧಿಕೃತ ಹೇಳಿಕೆ ನೀಡಿತ್ತು.

Advertisements

ಇದನ್ನು ಓದಿದ್ದೀರಾ? ಇಂಗ್ಲೆಂಡ್ ವಿರುದ್ಧದ ಎಲ್ಲ ಟೆಸ್ಟ್‌ ಪಂದ್ಯಗಳಿಂದಲೂ ಹಿಂದೆ ಸರಿದ ವಿರಾಟ್ ಕೊಹ್ಲಿ: ತಂಡ ಪ್ರಕಟಿಸಿದ ಬಿಸಿಸಿಐ

ಟೀಮ್ ಇಂಡಿಯಾದ ಮಾಜಿ ನಾಯಕ ಕೊಹ್ಲಿ, “ಉಳಿದ ಮೂರು ಟೆಸ್ಟ್‌ಗಳಿಂದ ಹಿಂದೆ ಸರಿಯುವ ನಿರ್ಧಾರದ ಬಗ್ಗೆ ಆಯ್ಕೆದಾರರಿಗೆ ತಿಳಿಸಿದ್ದಾರೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ” ಎಂದು ಬಿಸಿಸಿಐ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿತ್ತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X