ವಿಶ್ವಕಪ್‌ನಲ್ಲಿ ಮೊದಲ ವಿಕೆಟ್ ಪಡೆದ ‘ಪಾರ್ಟ್ ಟೈಂ ಬೌಲರ್’ ವಿರಾಟ್ ಕೊಹ್ಲಿ

Date:

Advertisements

ನೆದರ್‌ಲ್ಯಾಂಡ್ಸ್‌ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ನೆದರ್‌ಲ್ಯಾಂಡ್ಸ್‌ ತಂಡದ ಸ್ಕಾಟ್ ಎಡ್ವರ್ಡ್ಸ್​ ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾದ ‘ಪಾರ್ಟ್ ಟೈಂ ಬೌಲರ್’ ವಿರಾಟ್ ಕೊಹ್ಲಿ ವಿಶ್ವಕಪ್‌ನಲ್ಲಿ ಮೊದಲ ವಿಕೆಟ್ ಪಡೆದ ಕೀರ್ತಿಗೆ ಪಾತ್ರರಾಗಿದ್ದಾರೆ.

ವಿರಾಟ್ ಕೊಹ್ಲಿ ಎಸೆದ 25ನೇ ಓವರ್​ನ 3ನೇ ಎಸೆತದಲ್ಲಿ ವಿಕೆಟ್​ ಕೀಪರ್​ ಕೆಎಲ್ ರಾಹುಲ್ ಹಿಡಿದ ಅತ್ಯುತ್ತಮ ಕ್ಯಾಚ್​ಗೆ ನೆದರ್‌ಲ್ಯಾಂಡ್ಸ್‌ ತಂಡದ ನಾಯಕ ಸ್ಕಾಟ್ ಎಡ್ವರ್ಡ್ಸ್​ ಬಲಿಯಾಗುವ ಮೂಲಕ ನೆದರ್‌ಲ್ಯಾಂಡ್ಸ್‌ ನಾಲ್ಕನೇ ವಿಕೆಟ್ ಕಳೆದುಕೊಂಡಿತು.

30 ಎಸೆತಗಳಲ್ಲಿ 17 ರನ್ ಬಾರಿಸಿದ್ದ ಸ್ಕಾಟ್ ಎಡ್ವರ್ಡ್ಸ್​ ವಿರಾಟ್ ಕೊಹ್ಲಿಯವರಿಗೆ ಬಲಿಯಾದರು. ಇದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಕೊಹ್ಲಿಗೆ ಐದನೇ ವಿಕೆಟ್ ಆಗಿತ್ತು. ಈ ಹಿಂದೆ ಅಲೈಸ್ಟರ್ ಕುಕ್, ಕ್ರೇಗ್ ಕೀಸ್ವೆಟರ್, ಬ್ರೆಂಡನ್ ಮೆಕಲಮ್ ಮತ್ತು ಕ್ವಿಂಟನ್ ಡಿ ಕಾಕ್ ಅವರ ವಿಕೆಟ್ ಪಡೆದಿದ್ದರು. ಇಂದು ಸ್ಕಾಟ್ ಎಡ್ವರ್ಡ್ಸ್ ವಿಕೆಟ್ ಪಡೆಯುವ ಮೂಲಕ 9 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಕೆಟ್ ಪಡೆದಿದ್ದಾರೆ.

Advertisements

ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್‌ ಟೂರ್ನಿಯ ಪಂದ್ಯದಲ್ಲಿ ಬೌಲ್‌ ಮಾಡುವ ವೇಳೆ ಟೀಮ್‌ ಇಂಡಿಯಾ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಪಾದದ ಗಾಯಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಪಂದ್ಯದಲ್ಲಿ ಅವರು ಒಂದೇ ಒಂದು ಓವರ್‌ ಅನ್ನು ಪೂರ್ಣಗೊಳಿಸದೆ ಮೈದಾನ ತೊರೆದಿದ್ದರು. ಮತ್ತೆ ಅವರು ಮೈದಾನಕ್ಕೆ ಮರಳಿರಲಿಲ್ಲ. ಹಾರ್ದಿಕ್‌ ಪಾಂಡ್ಯ ಅವರ ಓವರ್‌ ಅನ್ನು ವಿರಾಟ್‌ ಕೊಹ್ಲಿ ಮುಗಿಸಿದ್ದರು.

ನಗು ತಡೆದುಕೊಳ್ಳದ ಪತ್ನಿ ಅನುಷ್ಕಾ ಶರ್ಮಾ!

ವಿರಾಟ್ ಕೊಹ್ಲಿ ವಿಕೆಟ್ ಪಡೆಯುತ್ತಿದ್ದಂತೆಯೇ ಪೆವಿಲಿಯನ್‌ನಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪತ್ನಿ, ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರಿಗೆ ನಗು ತಡೆಯಲಾಗಲಿಲ್ಲ. ಬಳಿಕ ಚಪ್ಪಾಳೆ ತಟ್ಟಿ ತನ್ನದೇ ಶೈಲಿಯಲ್ಲಿ ಅಭಿನಂದನೆ ಸಲ್ಲಿಸಿದರು. ಈ ವೇಳೆ ವಿರಾಟ್ ಕೂಡ ಅವರಿಗೆ ಮೈದಾನದಿಂದಲೇ ಸಾಥ್ ನೀಡುವ ಮೂಲಕ ಸಂಭ್ರಮ ಹಂಚಿಕೊಂಡರು. ಅವರ ವಿಡಿಯೋ ವೈರಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X