ವಿಶ್ವಕಪ್ ಸೆಮಿಫೈನಲ್ | ಮಿಲ್ಲರ್ ಏಕಾಂಗಿ ಹೋರಾಟ; ಆಸೀಸ್‌ಗೆ ಅಲ್ಪಮೊತ್ತದ ಗುರಿ ನೀಡಿದ ಹರಿಣಗಳು

Date:

Advertisements

ಕೊಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್‌ನ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಕೇವಲ 212 ರನ್‌ಗಳಿಗೆ ಆಲೌಟ್ ಆಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಸೌತ್ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ಉತ್ತಮ ಆರಂಭ ಒದಗಿಸುವಲ್ಲಿ ವೈಫಲ್ಯ ಕಂಡ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಡೇವಿಡ್ ಮಿಲ್ಲರ್ ಅವರ ಸಮಯೋಚಿತ ಶತಕದ ನೆರವಿನಿಂದ 49.4 ಓವರ್‌ಗಳಲ್ಲಿ 212 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗಿದೆ.

ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಪ್ಯಾಟ್ ಕಮಿನ್ಸ್​ ಎಸೆದ 48ನೇ ಓವರ್​ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್​ನತ್ತ ಸಿಕ್ಸ್​ ಸಿಡಿಸುವ ಮೂಲಕ ಶತಕ ಪೂರೈಸಿದರು. 115 ಎಸೆತಗಳಲ್ಲಿ ಶತಕ ಪೂರೈಸಿದ ಡೇವಿಡ್ ಮಿಲ್ಲರ್, 2ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ 101 ರನ್ ಗಳಿಸಿ ಔಟಾದರು.

Advertisements

HEAD

ಉಳಿದಂತೆ ಹರಿಣಗಳ ಪರ ಹೆನ್ರಿಚ್ ಕ್ಲಾಸೆನ್ 47, ಜೆರಾಲ್ಡ್ ಕೊಯೆಟ್ಝೆ 19 ರನ್ ಗಳಿಸಿದರು. ಆಸ್ಟ್ರೇಲಿಯಾದ ಕರಾರುವಾಕ್ಕಾದ ಬೌಲಿಂಗ್‌ಗೆ ಸೌತ್ ಆಫ್ರಿಕಾ ತಂಡದ ಬ್ಯಾಟ್ಸ್‌ಮನ್‌ಗಳು ತರಗೆಲೆಗಳಂತೆ ಉದುರಿದರು.

ಈ ನಡುವೆಯೂ ಡೇವಿಡ್ ಮಿಲ್ಲರ್ ಹಾಗೂ ಹೆನ್ರಿಚ್ ಕ್ಲಾಸೆನ್ ನಡುವೆ 5ನೇ ವಿಕೆಟ್‌ಗೆ 95 ರನ್‌ಗಳ ಜೊತೆಯಾಟ ನಡೆಸಿದರು. ಹೆನ್ರಿಚ್ ಕ್ಲಾಸೆನ್ ಅವರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಆಸೀಸ್‌ನ ಪಾರ್ಟ್‌ ಟೈಮ್ ಬೌಲರ್ ಟ್ರಾವಿಸ್ ಹೆಡ್ ಈ ಜೋಡಿಯನ್ನು ಬೇರ್ಪಡಿಸಿದರು.

BOWLED

ಆಸೀಸ್‌ ಪರವಾಗಿ ಬೌಲಿಂಗ್‌ನಲ್ಲಿ ಮಿಚೆಲ್ ಸ್ಟಾರ್ಕ್‌ ಹಾಗೂ ಪ್ಯಾಟ್ ಕಮ್ಮಿನ್ಸ್‌ ತಲಾ 3 ವಿಕೆಟ್ ಪಡೆದುಕೊಂಡರೆ, ಟ್ರಾವಿಸ್ ಹೆಡ್ ಹಾಗೂ ಜೋಶ್ ಹ್ಯಾಝಲ್‌ವುಡ್ ತಲಾ ಎರಡು ವಿಕೆಟ್ ಗಳಿಸುವಲ್ಲಿ ಸಫಲರಾದರು.

2ನೇ ಸೆಮಿಫೈನಲ್ ಪಂದ್ಯದಲ್ಲಿ ಗೆಲ್ಲುವ ತಂಡವು ಭಾನುವಾರ, ನವೆಂಬರ್ 19ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಟೀಮ್ ಇಂಡಿಯಾವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ತಂಡ ಏಕದಿನ ವಿಶ್ವಕಪ್‌ನಲ್ಲಿ ಈಗಾಗಲೇ ಐದು ಬಾರಿ ಚಾಂಪಿಯನ್ ಆಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X