ತಮ್ಮ 10 ವಿಕೆಟ್ ಸಾಧನೆಯನ್ನು ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ ಆಕಾಶ್‌ ದೀಪ್

Date:

Advertisements

“ನಾವೆಲ್ಲರೂ ನಿನ್ನಿಂದಿಗಿದ್ದೇವೆ, ಕೈಯಲ್ಲಿ ಚೆಂಡು ಹಿಡಿದಾಗಲೆಲ್ಲಾ, ಆಕೆಯ ಕುರಿತ ಆಲೋಚನೆಗಳು ನನ್ನ ಮನಸ್ಸನ್ನು ಮುಟ್ಟುತ್ತಿದ್ದವು”. ಇದು ಕ್ಯಾನ್ಸರ್‌ಪೀಡಿತ ಸಹೋದರಿಯನ್ನು ನೆನೆದು, ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ 10 ವಿಕೆಟ್‌ ಕಬಳಿಸಿ ಮೆರೆದ ಭಾರತದ ವೇಗಿ ಆಕಾಶ್‌ ದೀಪ್‌ ಅವರ ಭಾವುಕ ನುಡಿಗಳು.

ಆಕಾಶ್‌ ದೀಪ್‌ ಅವರು ತಮ್ಮ 10 ವಿಕೆಟ್‌ನ ಅಮೋಘ ಸಾಧನೆಯನ್ನು, ತಮ್ಮ ಕ್ಯಾನ್ಸರ್‌ಪೀಡಿತ ಸಹೋದರಿಗೆ ಅರ್ಪಿಸಿದ್ದಾರೆ. ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ, ಆಕಾಶ್‌ ದೀಪ್‌ ಅವರು ಎರಡು ಇನ್ನಿಂಗ್ಸ್‌ನಿಂದ ಒಟ್ಟು 10 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಪಂದ್ಯದ ಬಳಿಕ ಮಾತನಾಡಿದ ಆಕಾಶ್‌ ದೀಪ್‌, ತಮ್ಮ ಅದ್ಭುತ ಪ್ರದರ್ಶನವನ್ನು ಕಳೆದ ಎರಡು ತಿಂಗಳಿನಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ತಮ್ಮ ಸಹೋದರಿಗೆ ಅರ್ಪಿಸುವುದಾಗಿ ಹೇಳಿದರು.

ಎಡ್ಜ್‌ಬಾಸ್ಟನ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತದ 336 ರನ್‌ಗಳ ಸರಣಿ ಸಮಬಲದ ಗೆಲುವಿನಲ್ಲಿ, ಪಶ್ಚಿಮ ಬಂಗಾಳದ ವೇಗಿ 10 ವಿಕೆಟ್‌ಗಳನ್ನು ಕಬಳಿಸಿ ಗಮನ ಸೆಳೆದರು. ಇದು ಆಕಾಶ್‌ ದೀಪ್‌ ಅವರ ಇದುವರೆಗಿನ ಅತ್ಯುತ್ತಮ ಟೆಸ್ಟ್‌ ಪ್ರದರ್ಶನವಾಗಿದೆ.

Advertisements

ಇದನ್ನು ಓದಿದ್ದೀರಾ? IND vs ENG 2ND Test: ಜಯದ ಮೂಲಕ ಇತಿಹಾಸ ನಿರ್ಮಿಸಲು ಟೀಂ ಇಂಡಿಯಾಗೆ ಬೇಕು 7 ವಿಕೆಟ್‌

“ನಾನು ಇದರ ಬಗ್ಗೆ ಯಾರೊಂದಿಗೂ ಮಾತನಾಡಿಲ್ಲ ಆದರೆ ಎರಡು ತಿಂಗಳ ಹಿಂದೆ, ನನ್ನ ತಂಗಿಗೆ ಕ್ಯಾನ್ಸರ್ ಇರುವುದು ಪತ್ತೆಯಾಯಿತು. ಅವಳು ನನ್ನ ಪ್ರದರ್ಶನದಿಂದ ತುಂಬಾ ಸಂತೋಷಪಡುತ್ತಾಳೆ ಮತ್ತು ಭಾರತ ತಂಡದ ಗೆಲುವು ಆಕೆಯ ನಗುವನ್ನು ಮರಳಿ ತರುತ್ತದೆ. ನಾನು ಚೆಂಡನ್ನು ಕೈಗೆತ್ತಿಕೊಂಡಾಗಲೆಲ್ಲ ಅವಳ ಆಲೋಚನೆಗಳು ಮತ್ತು ಆಕೆಯ ಮುಖ ನನ್ನ ಮನಸ್ಸಿನಲ್ಲಿ ಹಾದು ಹೋಗುತ್ತಿತ್ತು. ನನ್ನ ಈ ಪ್ರದರ್ಶನ ಅವಳಿಗೆ ಸಮರ್ಪಿತವಾಗಿದೆ. ನಾವೆಲ್ಲರೂ ನಿನ್ನೊಂದಿಗಿದ್ದೇವೆ ಎಂದು ನಾನು ಅವಳಿಗೆ ಹೇಳಲು ಬಯಸುತ್ತೇನೆ” ಎಂದು ಆಕಾಶ್ ದೀಪ್‌ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಪಂದ್ಯದ ಬಗ್ಗೆ ಮಾತನಾಡಿದ ಅವರು “ನಾವು ಒಂದು ತಂಡವಾಗಿ ಜಾರಿಗೆ ತಂದ ಯೋಜನೆಗಳು ಮತ್ತು ಪ್ರಕ್ರಿಯೆಗಳು ಅದ್ಭುತವಾಗಿ ಕೆಲಸ ಮಾಡಿವೆ. ಹಾರ್ಡ್ ಲೆಂತ್‌ಗಳಲ್ಲಿ ಸೀಮ್‌ನ್ನು ಚುರುಕುಗೊಳಿಸುವುದು ನನ್ನ ಮುಖ್ಯ ಗುರಿಯಾಗಿ. ತಂತ್ರಗಾರಿಕೆಯ ಕ್ರಮಬದ್ಧ ಯೋಜನೆಯಿಂದ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ವಿಕೆಟ್‌ ಕಬಳಿಸಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X