ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

Date:

Advertisements

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದ ಮೊದಲ ಮೂರು ದಿನಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ಟೀಮ್‌ ಇಂಡಿಯಾ ವಿಫಲವಾಗಿದೆ. ಫೈನಲ್‌ ಪಂದ್ಯದ ಮೊದಲ ದಿನ ಕೇವಲ ಮೂರು ವಿಕೆಟ್‌ ಪಡೆಯಲಷ್ಟೇ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲೂ ಆಸಿಸ್‌ ಕೈ ಮೇಲಾಗಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಶಾಸ್ತ್ರಿ, ʻಆಟಗಾರರು ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆʼ ಎಂದು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಟೀಮ್‌ ಇಂಡಿಯಾದ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿರುವ ರವಿ ಶಾಸ್ತ್ರಿ ʻ ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ಆಟಗಾರರು ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆ. ಭಾರತೀಯ ಆಟಗಾರರ ಐಪಿಎಲ್ ಒಪ್ಪಂದದಲ್ಲಿ ಬಿಸಿಸಿಐ ಕೆಲವೊಂದು ಷರತ್ತುಗಳನ್ನು ಹಾಕುವ ಅಗತ್ಯವಿದೆʼ ಎಂದು ಟೀಮ್‌ ಇಂಡಿಯಾದ ಮಾಜಿ ಕೋಚ್‌ ಮತ್ತು ವೀಕ್ಷಕ ವಿವರಣೆಗಾರರಾಗಿರುವ ರವಿ ಶಾಸ್ತ್ರಿ ಹೇಳಿದ್ದಾರೆ.

Advertisements

ʻಫ್ರಾಂಚೈಸಿ ಕ್ರಿಕೆಟ್‌ಅನ್ನು ಆದ್ಯತೆಯಾಗಿ ಕಾಣುವ ಆಟಗಾರರು ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯʼ ಸೇರಿದಂತೆ ಅತಿ ಮಹತ್ವದ ಐಸಿಸಿ ಟೂರ್ನಿಗಳನ್ನು ಮರೆತುಬಿಡಬೇಕು. ಮತ್ತೊಂದೆಡೆ, ರಾಷ್ಟ್ರೀಯ ತಂಡದ ಹಿತದೃಷ್ಟಿಯಿಂದ ಐಪಿಎಲ್‌ನಿಂದ ಹೊರಗುಳಿಯಲು ಆಟಗಾರರು ನಿರ್ಧರಿಸಿದರೆ ಅದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಶಾಸ್ತ್ರಿ ಸಲಹೆ ನೀಡಿದ್ದಾರೆ.

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 223/6

4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಶನಿವಾರ, ಭೊಜನ ವಿರಾಮದ ವೇಳೆಗೆ 6 ವಿಕೆಟ್‌ ನಷ್ಟದಲ್ಲಿ 223 ರನ್‌ಗಳಿಸಿದೆ. ಆ ಮೂಲಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಒಟ್ಟು 396 ರನ್‌ಗಳ ಮುನ್ನಡೆ ಸಾಧಿಸಿದೆ.

50 ರನ್‌ಗಳಿಸಿರುವ ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಮತ್ತು 24 ರನ್‌ಗಳೊಂದಿಗೆ ಮಿಚೆಲ್‌ ಸ್ಟಾರ್ಕ್‌ ಕ್ರೀಸ್‌ನಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X