ಐಪಿಎಲ್‌ಗೆ ಆದ್ಯತೆ; ಟೀಮ್‌ ಇಂಡಿಯಾ ಆಟಗಾರರ ವಿರುದ್ಧ ರವಿಶಾಸ್ತ್ರಿ ಆಕ್ರೋಶ

Date:

ಅಂತಾರಾಷ್ಟ್ರೀಯ ಕ್ರಿಕೆಟ್‌ ಬದಲು ಐಪಿಎಲ್‌ ಟೂರ್ನಿಯನ್ನು ಆಟಗಾರರು ಆದ್ಯತೆಯಾಗಿ ಪರಿಗಣಿಸುವುದರ ವಿರುದ್ಧ ಟೀಮ್‌ ಇಂಡಿಯಾದ ಮಾಜಿ ಕೋಚ್‌ ರವಿಶಾಸ್ತ್ರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದ ಮೊದಲ ಮೂರು ದಿನಗಳಲ್ಲೂ ನಿರೀಕ್ಷಿತ ಪ್ರದರ್ಶನ ನೀಡಲು ಟೀಮ್‌ ಇಂಡಿಯಾ ವಿಫಲವಾಗಿದೆ. ಫೈನಲ್‌ ಪಂದ್ಯದ ಮೊದಲ ದಿನ ಕೇವಲ ಮೂರು ವಿಕೆಟ್‌ ಪಡೆಯಲಷ್ಟೇ ಭಾರತದ ಬೌಲರ್‌ಗಳು ಯಶಸ್ವಿಯಾಗಿದ್ದರು. ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲೂ ಆಸಿಸ್‌ ಕೈ ಮೇಲಾಗಿದೆ. ಈ ಹಿನ್ನಲೆಯಲ್ಲಿ ಮಾತನಾಡಿರುವ ಶಾಸ್ತ್ರಿ, ʻಆಟಗಾರರು ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಹಿನ್ನಲೆಯಲ್ಲಿ ಟೀಮ್‌ ಇಂಡಿಯಾದ ಆಟಗಾರರನ್ನು ತರಾಟೆಗೆ ತೆಗೆದುಕೊಂಡಿರುವ ರವಿ ಶಾಸ್ತ್ರಿ ʻ ರಾಷ್ಟ್ರೀಯ ತಂಡ  ಅಥವಾ ಐಪಿಎಲ್‌ ನಡುವೆ ಆಟಗಾರರು ತಮ್ಮ ʻಆದ್ಯತೆʼಯನ್ನು ನಿರ್ಧರಿಸಬೇಕಿದೆ. ಭಾರತೀಯ ಆಟಗಾರರ ಐಪಿಎಲ್ ಒಪ್ಪಂದದಲ್ಲಿ ಬಿಸಿಸಿಐ ಕೆಲವೊಂದು ಷರತ್ತುಗಳನ್ನು ಹಾಕುವ ಅಗತ್ಯವಿದೆʼ ಎಂದು ಟೀಮ್‌ ಇಂಡಿಯಾದ ಮಾಜಿ ಕೋಚ್‌ ಮತ್ತು ವೀಕ್ಷಕ ವಿವರಣೆಗಾರರಾಗಿರುವ ರವಿ ಶಾಸ್ತ್ರಿ ಹೇಳಿದ್ದಾರೆ.

ʻಫ್ರಾಂಚೈಸಿ ಕ್ರಿಕೆಟ್‌ಅನ್ನು ಆದ್ಯತೆಯಾಗಿ ಕಾಣುವ ಆಟಗಾರರು ʻವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯʼ ಸೇರಿದಂತೆ ಅತಿ ಮಹತ್ವದ ಐಸಿಸಿ ಟೂರ್ನಿಗಳನ್ನು ಮರೆತುಬಿಡಬೇಕು. ಮತ್ತೊಂದೆಡೆ, ರಾಷ್ಟ್ರೀಯ ತಂಡದ ಹಿತದೃಷ್ಟಿಯಿಂದ ಐಪಿಎಲ್‌ನಿಂದ ಹೊರಗುಳಿಯಲು ಆಟಗಾರರು ನಿರ್ಧರಿಸಿದರೆ ಅದಕ್ಕೆ ಬಿಸಿಸಿಐ ಅವಕಾಶ ನೀಡಬೇಕು ಎಂದು ಶಾಸ್ತ್ರಿ ಸಲಹೆ ನೀಡಿದ್ದಾರೆ.

ಭೋಜನ ವಿರಾಮದ ವೇಳೆಗೆ ಆಸ್ಟ್ರೇಲಿಯಾ 223/6

4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಶನಿವಾರ, ಭೊಜನ ವಿರಾಮದ ವೇಳೆಗೆ 6 ವಿಕೆಟ್‌ ನಷ್ಟದಲ್ಲಿ 223 ರನ್‌ಗಳಿಸಿದೆ. ಆ ಮೂಲಕ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಒಟ್ಟು 396 ರನ್‌ಗಳ ಮುನ್ನಡೆ ಸಾಧಿಸಿದೆ.

50 ರನ್‌ಗಳಿಸಿರುವ ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಮತ್ತು 24 ರನ್‌ಗಳೊಂದಿಗೆ ಮಿಚೆಲ್‌ ಸ್ಟಾರ್ಕ್‌ ಕ್ರೀಸ್‌ನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ ಕ್ರಿಕೆಟ್‌ಗೆ ಮತ್ತೆ ‘ಮ್ಯಾಚ್ ಫಿಕ್ಸಿಂಗ್’ ಕಳಂಕ: 7 ಮಂದಿ ತಂಡದಿಂದ ಔಟ್

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ನಡುವೆಯೇ ಪಾಕಿಸ್ತಾನ...

3 ಗಂಟೆಗಳ ರೋಚಕ ಹೋರಾಟ: ಯುಎಸ್ ಓಪನ್ ಮೊದಲ ಸುತ್ತಿನಲ್ಲೇ ವಿಲಿಯಮ್ಸ್ ಸಹೋದರಿಯರಿಗೆ ಸೋಲು

ಅಮೆರಿಕನ್ ಓಪನ್ ಟೆನಿಸ್ ಟೂರ್ನಿಯಲ್ಲಿ ವಿಸ್ಮಯಕಾರಿ ಪುನರಾಗಮನದ ನಿರೀಕ್ಷೆಯಲ್ಲಿದ್ದ ಲೆಜೆಂಡರಿ ಜೋಡಿ...

75ನೇ ವರ್ಷದ ಬಾಂಧವ್ಯ: ಭಾರತ-ಜಪಾನ್ ನಡುವೆ ಚೊಚ್ಚಲ ಟಿ20 ಕ್ರಿಕೆಟ್

ಭಾರತ ಹಾಗೂ ಜಪಾನ್ ನಡುವಿನ 75ನೇ ವರ್ಷದ ರಾಜತಾಂತ್ರಿಕ ಬಾಂಧವ್ಯದ ಸಂಭ್ರಮಾಚರಣೆಯ...

ಏಷ್ಯನ್ ಗೇಮ್ಸ್ | ಟೀಂ ಇಂಡಿಯಾಗೆ ‘ವೆರಿ ವೆರಿ ಸ್ಪೆಷಲ್’; ವಿವಿಎಸ್‌ ಲಕ್ಷ್ಮಣ್ ಹೆಡ್‌ ಕೋಚ್!

ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಜಸ್‌ಪ್ರೀತ್ ಬೂಮ್ರಾ, ಶ್ರೇಯಸ್ ಅಯ್ಯರ್ ಹಾಗೂ...