ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಈಗ ಐಪಿಎಲ್‌ ಹೀರೋ!

Date:

Advertisements

ಗುರಿಯಡೆಗಿನ ಸ್ಪಷ್ಟತೆ ಜೊತೆಗೆ ನಿರಂತರ ಪ್ರಯತ್ನ ಜಾರಿಯಲ್ಲಿದ್ದರೆ ಯಶಸ್ಸು ಹುಡುಕಿಕೊಂಡು ಬರುತ್ತದೆ ಎಂಬುದಕ್ಕೆ ಯುವ ಕ್ರಿಕೆಟಿಗ ಆಕಾಶ್‌ ಮಧ್ವಾಲ್‌ ಅತ್ಯುತ್ತಮ ಉದಾಹರಣೆ.

ಬುಧವಾರ ಚೆನ್ನೈನಲ್ಲಿ ನಡೆದ ಲಖನೌ ವಿರುದ್ಧದ ಪಂದ್ಯದ ಬಳಿಕ ಮುಂಬೈ ಇಂಡಿಯನ್ಸ್‌ ತಂಡದ ಯುವ ಬೌಲರ್‌ ಆಕಾಶ್‌ ಮಧ್ವಾಲ್‌ ಹೀರೋ ಆಗಿ ಹೊರಹೊಮಿದ್ದಾರೆ.

ಐಪಿಎಲ್‌ 16ನೇ ಆವೃತ್ತಿಯ ಎಲಿಮಿನೇಟರ್‌ ಪಂದ್ಯದಲ್ಲಿ ಲಖನೌ ವಿರುದ್ಧ ಮುಂಬೈ ಇಂಡಿಯನ್ಸ್‌ 81 ರನ್‌ಗಳ ಭರ್ಜರಿ ಗೆಲುವು ಸಾಧಿಸಿ, ಕ್ವಾಲಿಫೈಯರ್-2 ಹಂತ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಬಿಗು ಬೌಲಿಂಗ್‌ ದಾಳಿ ಸಂಘಟಿಸಿದ್ದ ಆಕಾಶ್‌ ಮಧ್ವಾಲ್‌, 3.3 ಓವರ್‌ನಲ್ಲಿ ಕೇವಲ 5 ರನ್‌ ನೀಡಿ 5 ಪ್ರಮುಖ ವಿಕೆಟ್‌ ಪಡೆದಿದ್ದರು. ಆ ಮೂಲಕ ಮುಂಬೈ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದ್ದರು.

Advertisements

ಈ ಮೂಲಕ ಐಪಿಎಲ್ ಇತಿಹಾಸದಲ್ಲಿಯೇ ಅತಿ ಕಡಿಮೆ ರನ್ ನೀಡಿ 5 ವಿಕೆಟ್ ಪಡೆದ ಬೌಲರ್ ಪಟ್ಟಿಯಲ್ಲಿ ಮಧ್ವಾಲ್‌ ಜಂಟಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೊದಲು 2009ರ ಐಪಿಎಲ್‌ನಲ್ಲಿಆರ್‌ಸಿಬಿ ಪರ ಅನಿಲ್‌ ಕುಂಬ್ಳೆ ರಾಜಸ್ಥಾನ ರಾಯಲ್ಸ್ ಎದುರು ಕೇವಲ 5 ರನ್ ನೀಡಿ 5 ವಿಕೆಟ್ (3.1 ಓವರ್‌) ಕಬಳಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ಜೊತೆಗೆ ಐಪಿಎಲ್ ಪ್ಲೇ ಆಫ್‌ನಲ್ಲಿ 5 ವಿಕೆಟ್ ಕಬಳಿಸಿದ ಮೊದಲ ಬೌಲರ್, ಐಪಿಎಲ್‌ ಟೂರ್ನಿಯಲ್ಲಿ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನ ತೋರಿದ ಅನ್‌ಕ್ಯಾಪ್ಡ್‌ ಪ್ಲೆಯರ್‌ ಎನ್ನುವ ಅಪರೂಪದ ದಾಖಲೆಗೂ ಮಧ್ವಾಲ್‌ ಭಾಜನರಾಗಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌!

2019ರವರೆಗೂ ಸ್ಥಳೀಯವಾಗಿ ಟೆನಿಸ್‌ ಬಾಲ್‌ನಲ್ಲಿ ಕ್ರಿಕೆಟ್‌ ಆಡುತ್ತಿದ್ದ ಆಕಾಶ್‌ ಮಧ್ವಾಲ್‌ ಅವರ ವೃತ್ತಿ ಬದುಕಿಗೆ ತಿರುವು ನೀಡಿದವರು ಟೀಮ್‌ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವಾಸೀಂ ಜಾಫರ್‌. ಉತ್ತರಾಖಂಡ ರಾಜ್ಯ ತಂಡದ ಕೋಚ್‌ ಆಗಿದ್ದ ಜಾಫರ್‌, ಮಧ್ವಾಲ್‌ ಅವರ ಬೌಲಿಂಗ್‌ ಶೈಲಿಯನ್ನು ಗಮನಿಸಿ, ಲೆದರ್ ಬಾಲ್‌ ಕ್ರಿಕೆಟ್‌ ಆಡುವಂತೆ ಸಲಹೆ ನೀಡಿ, ಪ್ರೋತ್ಸಾಹಿಸಿದರು.

ಇದಾದ ಬಳಿಕ ಕೋಚ್‌ ಅವತಾರ್‌ ಸಿಂಗ್‌ ಬಳಿ ವೇಗದ ಬೌಲಿಂಗ್‌ನ ಪಟ್ಟುಗಳನ್ನು ಕರಗತ ಮಾಡಿಕೊಂಡ ಮಧ್ವಾಲ್‌, 2023ರ ದೇಶೀಯ ಟೂರ್ನಿಗಳಲ್ಲಿ ಉತ್ತರಾಖಂಡ ತಂಡದ ನಾಯಕನಾಗಿ ಆಯ್ಕೆಯಾದರು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ 2023 | ದಾಖಲೆಯ 10ನೇ ಬಾರಿ ಫೈನಲ್ ಪ್ರವೇಶಿಸಿದ ಚೆನ್ನೈ ಸೂಪರ್‌ ಕಿಂಗ್ಸ್‌

ಉತ್ತರಾಖಾಂಡದ ರೂರ್ಕಿಯ ಧಂದೇರಾ ಮೂಲದ ಮಧ್ವಾಲ್‌,  2013ರಲ್ಲಿ ಅಪಘಾತವೊಂದರಲ್ಲಿ  ತಂದೆಯನ್ನು ಕಳೆದುಕೊಂಡಿದ್ದರು. ಅವರ ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಸಿವಿಲ್ ಎಂಜಿನಿಯರಿಂಗ್‌ ಪದವಿಧರರಾಗಿರುವ ಆಕಾಶ್‌, 2019ರಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಆರ್​ಸಿಬಿ ತಂಡದ ನೆಟ್ ಬೌಲರ್ ಆಗಿದ್ದರು. 2022ರ ಐಪಿಎಲ್​ ವೇಳೆ ಗಾಯಾಳು ಸೂರ್ಯಕುಮಾರ್ ಯಾದವ್ ಬದಲಿಗೆ ಆಕಾಶ್ ಮಧ್ವಾಲ್ ಅವರನ್ನು ಮುಂಬೈ ಇಂಡಿಯನ್ಸ್ ತಂಡಕ್ಕೆ ಸೇರಿಸಿಕೊಂಡಿತ್ತು. ಬಳಿಕ 2023ರ ಮೆಗಾ ಹರಾಜಿನಲ್ಲಿ ಕೇವಲ 20 ಲಕ್ಷ ರೂ. ಮೂಲಬೆಲೆಯೊಂದಿಗೆ ಮಧ್ವಾಲ್‌ರನ್ನು ತಂಡದಲ್ಲೇ ಉಳಿಸಿಕೊಂಡಿತ್ತು. ಈ ಬಾರಿ ವೇಗಿ ಜೋಫ್ರಾ ಆರ್ಚರ್‌ ಗಾಯದ ಕಾರಣ  ಕೆಲ ಪಂದ್ಯಗಳಿಂದ ಹೊರಗುಳಿದ ಕಾರಣ ಅವಕಾಶ ಪಡೆದ ಮಧ್ವಾಲ್, ನಿರ್ಣಾಯಕ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.‌

Who Is Akash Madhwal21

ಇದುವರೆಗೂ 10 ಪ್ರಥಮ ದರ್ಜೆ ಪಂದ್ಯಗಳಲ್ಲಿ 12 ವಿಕೆಟ್, 17 ಲಿಸ್ಟ್-ಎನಲ್ಲಿ 18 ವಿಕೆಟ್ ಹಾಗೂ 29 ಟಿ20 ಪಂದ್ಯಗಳಲ್ಲಿ ಒಟ್ಟು 29 ವಿಕೆಟ್ ಉರುಳಿಸಿದ್ದಾರೆ. ಪ್ರಸ್ತುತ ಐಪಿಎಲ್​ನಲ್ಲಿ 7 ಪಂದ್ಯಗಳನ್ನಾಡಿರುವ ಮಧ್ವಾಲ್ 13 ವಿಕೆಟ್​​ ಕಬಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X