ವಿರಾಟ್ ಕೊಹ್ಲಿ ಭಾರತ ತಂಡ ಮತ್ತು ಆರ್‌ಸಿಬಿ ನಾಯಕತ್ವ ತೊರೆದದ್ದೇಕೆ? ಇಲ್ಲಿದೆ ನೋಡಿ…

Date:

Advertisements

‘7-8 ವರ್ಷಗಳ ಕಾಲ ಭಾರತ ತಂಡವನ್ನು ಮುನ್ನಡೆಸಿದ್ದೆ. ಒಂಬತ್ತು ವರ್ಷಗಳ ಕಾಲ ಆರ್‌ಸಿಬಿ ತಂಡದ ನಾಯಕನಾಗಿದ್ದೆ. ಆದರೆ ಎಲ್ಲವನ್ನು ನಿಭಾಯಿಸುವುದು ಕಷ್ಟಕರವಾಯಿತು’ ಎಂದು ವಿರಾಟ್ ಕೊಹ್ಲಿ ಮನಬಿಚ್ಚಿ ಮಾತನಾಡಿದ್ದಾರೆ.

2021ರ ವಿಶ್ವಕಪ್ ಬಳಿಕ ಟಿ20 ನಾಯಕತ್ವವನ್ನು ವಿರಾಟ್ ಕೊಹ್ಲಿ ತ್ಯಜಿಸಿದ್ದರು. ಬಳಿಕ ಆರ್‌ಸಿಬಿ ಕ್ಯಾಪ್ಟನ್ ಗಿರಿಯನ್ನು ತೊರೆದಿದ್ದರು. ಅದಾದ ಒಂದು ವರ್ಷದ ಬಳಿಕ ಟೆಸ್ಟ್ ನಾಯಕತ್ವಕ್ಕೂ ರಾಜೀನಾಮೆ ನೀಡಿದ್ದರು. ವೃತ್ತಿಜೀವನದ ಒಂದು ಹಂತದಲ್ಲಿ ತುಂಬಾ ಹೊರೆ ಅನಿಸಿದ್ದರಿಂದ ಒತ್ತಡವನ್ನು ನಿಭಾಯಿಸುವುದು ತಮ್ಮ ಪಾಲಿಗೆ ತುಂಬಾ ಕಷ್ಟಕರವೆನಿಸಿತ್ತು ಎಂದು ಆರ್‌ಸಿಬಿಯ ‘ಬೋಲ್ಡ್ ಡೈರೀಸ್’ ಪಾಡ್‌ಕಾಸ್ಟ್‌ನಲ್ಲಿ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

‘ನಾನು ಆಡಿದ ಪ್ರತಿ ಪಂದ್ಯದಲ್ಲೂ ನಾಯಕ ಹಾಗೂ ಬ್ಯಾಟರ್ ದೃಷ್ಟಿಕೋನದಿಂದಲೂ ನನ್ನ ಮೇಲೆ ಅತೀವ ನಿರೀಕ್ಷೆಗಳಿದ್ದವು. ನನ್ನ ಕಡೆ ಹೆಚ್ಚಿನ ಗಮನ ಕೇಂದ್ರಿತವಾಗಿತ್ತು. ನಾಯಕತ್ವ ಇಲ್ಲದಿದ್ದರೆ ಅದು ಬ್ಯಾಟಿಂಗ್ ಮೇಲೆ ಆಗಿರುತ್ತಿತ್ತು. 24 ಗಂಟೆಯೂ ನನ್ನತ್ತ ಗಮನ ಸೆಳೆದಿತ್ತು. ಇದರಿಂದಾಗಿ ತುಂಬಾ ಕಠಿಣವೆನಿಸಿತ್ತು’ ಎಂದು ಅವರು ವಿವರಿಸಿದ್ದಾರೆ.

Advertisements

‘2022ರಲ್ಲಿ ನಾನು ಕ್ರಿಕೆಟ್‌ನಿಂದ ಒಂದು ತಿಂಗಳ ಬಿಡುವು ತೆಗೆದುಕೊಂಡೆ. ಈ ಹಂತದಲ್ಲಿ ಬ್ಯಾಟ್ ಅನ್ನು ಮುಟ್ಟಿಯೂ ನೋಡಿಲ್ಲ. ಆ ಸಂದರ್ಭದಲ್ಲಿ ಖುಷಿಯಾಗಿರಲು ಸಾಧ್ಯವಾಗುತ್ತಿರಲಿಲ್ಲ. ಅದಕ್ಕಾಗಿಯೇ ನಾಯಕತ್ವ ತೊರೆಯಲು ನಿರ್ಧರಿಸಿದೆ. ಸಂತೋಷವಾಗಿರಲು ಬಯಸಿದ್ದೆ’ ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?: ಐಪಿಎಲ್ 2025 | ಓಡಿದ್ದ 2 ರನ್‌ ಹಾಗೂ ಆ ಒಂದು ನಿರ್ಧಾರ ಚೆನ್ನೈ ಸೋಲಿಗೆ ಕಾರಣವಾಯಿತೆ?

‘ನನ್ನ ಆಟವನ್ನು ಯಾರೂ ನಿರ್ಣಯಿಸಬಾರದು. ಮೈದಾನಕ್ಕೆ ಬಂದು ನನ್ನ ಸಹಜ ಆಟವನ್ನು ಆಡಿ ಹೋಗಲು ಬಯಸಿದ್ದೆ’ ಎಂದು ಹೇಳಿದ್ದಾರೆ.

ತಮ್ಮ ವೃತ್ತಿ ಜೀವನದ ಆರಂಭಿಕ ಕಾಲದಲ್ಲಿ ಅಂದಿನ ಕೋಚ್ ಗ್ಯಾರಿ ಕರ್ಸ್ಟನ್ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ ನೀಡಿರುವ ಬೆಂಬಲ ಹಾಗೂ ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ವಿರಾಟ್ ಕೊಹ್ಲಿ ಸ್ಮರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X