ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Date:

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ’ ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

- Advertisement -

ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬ್ರಿಜ್​ ಭೂಷಣ್, ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

 ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ. ಆದರೆ, ನನ್ನ ವಿರುದ್ಧ ಮಾಡಲಾಗಿರುವ ಒಂದೇ ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ ಎಂಬ ನನ್ನ ಹಿಂದಿನ ಮಾತನ್ನು ಮತ್ತೆ ಪುನರಾವರ್ತನೆ ಮಾಡುತ್ತಿದ್ದೇನೆʼ ಎಂದು ಸಿಂಗ್‌  ಹೇಳಿದ್ದಾರೆ.

ʻನನ್ನ ವಿರುದ್ಧದ ದೂರಿನ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಬಳಿ ಯಾವುದೇ ಪುರಾವೆಗಳಿದ್ದರೂ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ. ಆರೋಪದಲಿ ಸತ್ಯವಿದ್ದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ. ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ದನಿದ್ದೇನೆʼ ಎಂದು ಸಿಂಗ್‌ ಹೇಳಿದ್ದಾರೆ.

ಡಬ್ಲ್ಯೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಘೋಷಿಸಿದ್ದರು. ಆದರೆ ಮಂಗಳವಾರ ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯಿತ್, ನದಿಯಲ್ಲಿ ಬಿಡುವುದಕ್ಕಾಗಿ ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...