ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Date:

`ಮಹಿಳಾ ಕುಸ್ತಿಪಟುಗಳು ಮಾಡಿರುವ ಲೈಂಗಿಕ ದೌರ್ಜ್ಯನದ ಆರೋಪಗಳಲ್ಲಿ ಯಾವುದಾದರೂ ಒಂದು ಆರೋಪ ಸಾಬೀತಾದರೂ ನಾನು ನೇಣಿಗೆ ಶರಣಾಗುತ್ತೇನೆ’ ಎಂದು  ಭಾರತೀಯ ಕುಸ್ತಿ ಫೆಡರೇಶನ್ ​(ಡಬ್ಲ್ಯೂಎಫ್ಐ) ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

ಉತ್ತರ ಪ್ರದೇಶದ ಬಾರಬಂಕಿಯಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬ್ರಿಜ್​ ಭೂಷಣ್, ʻಕುಸ್ತಿಪಟುಗಳು ಸರ್ಕಾರದ ಬಳಿ ನನ್ನನ್ನು ನೇಣುಗಂಬಕ್ಕೆ ಏರಿಸಬೇಕೆಂದು ಪಟ್ಟು ಹಿಡಿಯಲು ಪ್ರಾರಂಭಿಸಿ ಸುಮಾರು ನಾಲ್ಕು ತಿಂಗಳಾಗಿದೆ. ಆದರೆ ಸರ್ಕಾರ ನನ್ನನ್ನು ನೇಣಿಗೇರಿಸುತ್ತಿಲ್ಲ. ಅದಕ್ಕಾಗಿ ಅವರು ತಮ್ಮ ಪದಕಗಳನ್ನು ಪವಿತ್ರ ಗಂಗೆಗೆ ಎಸೆಯಲು ತೀರ್ಮಾನಿಸಿದ್ದರು. ಪದಕಗಳನ್ನು ಗಂಗೆಗೆ ಎಸೆಯುವುದರಿಂದ ಬ್ರಿಜ್‌ ಭೂಷಣ್‌ನನ್ನು ಗಲ್ಲಿಗೇರಿಸಲು ಸಾಧ್ಯವಾಗುವುದಿಲ್ಲ. ಬದಲಾಗಿ ನನ್ನ ಮೇಲಿನ ಆರೋಪಗಳಲ್ಲಿ ಒಂದನ್ನಾದರೂ ಸಾಬೀತುಪಡಿಸಿʼ ಎಂದು ಉತ್ತರ ಪ್ರದೇಶದ ಕೈಸರ್‌ಗಂಜ್‌ನ ಸಂಸದನೂ ಆಗಿರುವ ಬ್ರಿಜ್‌ ಭೂಷಣ್‌ ಸಿಂಗ್‌ ಹೇಳಿದ್ದಾರೆ.

 ʻಕುಸ್ತಿಪಟುಗಳು ನನಗೆ ಮಕ್ಕಳಿದ್ದಂತೆ. ನಾನು ಯಾವತ್ತೂ ಅವರನ್ನು ತೆಗಳುವ ಮಾತುಗಳನ್ನಾಡುವುದಿಲ್ಲ. ಏಕೆಂದರೆ ಅವರ ಸಾಧನೆಗಳಲ್ಲಿ ನನ್ನ ರಕ್ತದ, ಬೆವರಿನ ಫಲವೂ ಇದೆ. ಆದರೆ, ನನ್ನ ವಿರುದ್ಧ ಮಾಡಲಾಗಿರುವ ಒಂದೇ ಒಂದು ಆರೋಪ ಸಾಬೀತಾದರೂ ನೇಣಿಗೆ ಶರಣಾಗುತ್ತೇನೆ ಎಂಬ ನನ್ನ ಹಿಂದಿನ ಮಾತನ್ನು ಮತ್ತೆ ಪುನರಾವರ್ತನೆ ಮಾಡುತ್ತಿದ್ದೇನೆʼ ಎಂದು ಸಿಂಗ್‌  ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ʻನನ್ನ ವಿರುದ್ಧದ ದೂರಿನ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಿಮ್ಮ ಬಳಿ ಯಾವುದೇ ಪುರಾವೆಗಳಿದ್ದರೂ ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿ. ಆರೋಪದಲಿ ಸತ್ಯವಿದ್ದರೆ ಪೊಲೀಸರು ನನ್ನನ್ನು ಬಂಧಿಸುತ್ತಾರೆ. ಯಾವುದೇ ಶಿಕ್ಷೆಯನ್ನು ಎದುರಿಸಲು ನಾನು ಸಿದ್ದನಿದ್ದೇನೆʼ ಎಂದು ಸಿಂಗ್‌ ಹೇಳಿದ್ದಾರೆ.

ಡಬ್ಲ್ಯೂಎಫ್ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ದೆಹಲಿಯಲ್ಲಿ ಭಾರತೀಯ ಕುಸ್ತಿಪಟುಗಳು ನಡೆಸುತ್ತಿರುವ ಧರಣಿ ದೇಶಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೇ ಇರುವುದನ್ನು ಪ್ರತಿಭಟಿಸಿ ದೇಶದ ಪ್ರಮುಖ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಘೋಷಿಸಿದ್ದರು. ಆದರೆ ಮಂಗಳವಾರ ಹರಿದ್ವಾರದಲ್ಲಿ ಕುಸ್ತಿಪಟುಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ‘ರೈತ ನಾಯಕ’ ನರೇಶ್ ಟಿಕಾಯಿತ್, ನದಿಯಲ್ಲಿ ಬಿಡುವುದಕ್ಕಾಗಿ ತಂದಿದ್ದ ಪದಕಗಳನ್ನು ತಮ್ಮ ವಶಕ್ಕೆ ಪಡೆದಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...

‘ಬರ ಪರಿಹಾರ ಸಾಕು’ ಎಂದಿರುವ ಕುಮಾರಸ್ವಾಮಿ ನಾಡದ್ರೋಹಿ: ಡಿಸಿಎಂ ಡಿಕೆಶಿ ವಾಗ್ದಾಳಿ

"ಕೇಂದ್ರ ಸರ್ಕಾರ ಕರ್ನಾಟಕದ ಬರಕ್ಕೆ ಅಲ್ಪ ಪರಿಹಾರ ಮೊತ್ತ ಘೋಷಿಸಿದ್ದು, ನಾವು...

ಹಿಂದುಳಿದ ಸಮುದಾಯಗಳೇ ಎಚ್ಚರ, ಮೋದಿ ನಿಮ್ಮ ಹಾದಿ ತಪ್ಪಿಸುತ್ತಿದ್ದಾರೆ: ಘರ್ಜಿಸಿದ ಸಿದ್ದರಾಮಯ್ಯ

ರಾಜ್ಯದ ಹಿಂದುಳಿದ ಸಮುದಾಯಗಳೇ ಎಚ್ಚರ. ಮೋದಿ ನಿಮ್ಮ ಹಾದಿ ತಪ್ಪಿಸಿ ಮುಸ್ಲಿಮರ...