ಪಾಕ್ ಕಳಪೆ ಪ್ರದರ್ಶನಕ್ಕೆ ಹೊಣೆ ಹೊತ್ತ ಇಂಜಮಾಮ್-ಉಲ್-ಹಕ್; ಆಯ್ಕೆ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ

Date:

Advertisements

ಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ತೋರಿರುವುದಕ್ಕೆ ಪ್ರಮುಖ ಬೆಲೆ ತೆತ್ತಿದೆ. ಕಳಪೆ ಪ್ರದರ್ಶನದ ಹೊಣೆ ಹೊತ್ತು ಪಾಕಿಸ್ತಾನ ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನಕ್ಕೆ ಇಂಜಮಾಮ್-ಉಲ್-ಹಕ್ ಟೂರ್ನಿಯ ಮಧ್ಯದಲ್ಲೇ ರಾಜೀನಾಮೆ ನೀಡಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಸತತ ನಾಲ್ಕು ಪಂದ್ಯಗಳ ಸೋಲಿನ ನಂತರ ಇಂಜಮಾಮ್-ಉಲ್-ಹಕ್ ಅವರು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಝಕಾ ಅಶ್ರಫ್ ಅವರಿಗೆ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಇಂಡಿಯಾ’ ಸಂಕ್ಷಿಪ್ತ ರೂಪ; ರಾಜಕೀಯ ಮೈತ್ರಿ ನಿಯಂತ್ರಣ ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ

Advertisements

ಪ್ರಮುಖವಾಗಿ, ವಿಶ್ವಕಪ್‌ ಟೂರ್ನಿಗೆ ಪಾಕಿಸ್ತಾನದ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷದ ಆರೋಪಗಳಿಂದ ಇಂಜಮಾಮ್ ಸಂತೋಷವಾಗಿರಲಿಲ್ಲ. ಹಿತಾಸಕ್ತಿ ಸಂಘರ್ಷದ ಕಾರಣದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಆರೋಪಗಳ ತನಿಖೆಗಾಗಿ ಐದು ಸದಸ್ಯರ ಸಮಿತಿಯನ್ನು ರಚಿಸಿತು.

“ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಹಿತಾಸಕ್ತಿ ಸಂಘರ್ಷದ ಆರೋಪಗಳ ಬಗ್ಗೆ ಪಾರದರ್ಶಕ ವಿಚಾರಣೆ ನಡೆಸಲು ಪಿಸಿಬಿಗೆ ಅವಕಾಶ ನೀಡಲು ನಾನು ಹುದ್ದೆಯಿಂದ ಕೆಳಗಿಳಿಯುತ್ತಿದ್ದೇನೆ. ಸಮಿತಿಯು ನನ್ನನ್ನು ತಪ್ಪಿತಸ್ಥನಲ್ಲ ಎಂದು ಆರೋಪ ಮುಕ್ತಗೊಳಿಸಿದರೆ, ನಾನು ನನ್ನ ಹುದ್ದೆಯನ್ನು ಪುನರಾರಂಭಿಸುತ್ತೇನೆ” ಎಂದು ಇಂಜಮಾಮ್ ಎಂದು ಪಿಸಿಬಿ ಸೋಮವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X