ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಟೀಮ್ ಇಂಡಿಯಾ

Date:

Advertisements

ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ದೊಡ್ಡ ಆಘಾತ ಎದುರಿಸಿದೆ. ಈಗಾಗಲೇ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಟೀಮ್ ಇಂಡಿಯಾ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದೆ.

ಮಿಚೆಲ್ ಸ್ಟಾರ್ಕ್​ ಎಸೆದ 5ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆನ್​ನಲ್ಲಿದ್ದ ಆ್ಯಡಂ ಝಂಪಾಗೆ ಕ್ಯಾಚ್ ನೀಡುವ ಮೂಲಕ 7 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿದ್ದ ಆರಂಭಿಕ ಆಟಗಾರ ಶುಭ​​ಮನ್ ಗಿಲ್ ಔಟಾದರು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಯಶಸ್ಸು ಪಡೆಯಿತು.

Advertisements

47 ರನ್ ಗಳಿಸಿ ಉತ್ತಮ ಪ್ರದರ್ಶನ ತೋರುತ್ತಿದ್ದ ನಾಯಕ ರೋಹಿತ್ ಶರ್ಮಾ ಮ್ಯಾಕ್ ವೆಲ್ ಬೌಲಿಂಗ್ ನಲ್ಲಿ ಔಟ್ ಆದರು. ಮ್ಯಾಕ್ಸ್​ವೆಲ್ ಎಸೆದ 10ನೇ ಓವರ್​ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ರೋಹಿತ್ ಶರ್ಮಾ, ಟ್ರಾವಿಸ್ ಹೆಡ್ ಅದ್ಭುತ ರನ್ನಿಂಗ್ ಕ್ಯಾಚ್‌ಗೆ ಬಲಿಯಾದರು. 31 ಎಸೆತಗಳನ್ನು ಎದುರಿಸಿದ್ದ ರೋಹಿತ್ ಶರ್ಮಾ, 4 ಬೌಂಡರಿ ಹಾಗೂ ಮೂರು ಸಿಕ್ಸರ್‌ನ ನೆರವಿನಿಂದ 47 ರನ್ ಗಳಿಸಿದರು.

ನಂತರ ಕ್ರೀಸ್‌ಗೆ ಬಂದ ಶ್ರೇಯಸ್ ಅಯ್ಯರ್ ಕೇವಲ 4 ರನ್ ಗಳಿಸಿ, ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ಪೆವಿಲಿಯನ್ ಸೇರಿದರು.

ಪ್ರಸ್ತುತ 19 ಓವರ್‌ಗಳು ಮುಗಿದಿದ್ದು, ಭಾರತ 113 ರನ್ ಮಾಡಿದೆ. ಸದ್ಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 39*, ರಾಹುಲ್ 18* ರನ್ ಗಳಿಸಿ, ಕ್ರೀಸ್‌ನಲ್ಲಿದ್ದಾರೆ.

ಈ ಬಾರಿಯ ವಿಶ್ವಕಪ್‌ನ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಆರಂಭಿಕ ಪಂದ್ಯದಲ್ಲಿ ಕೊಹ್ಲಿ-ರಾಹುಲ್ ಜೋಡಿ ಉತ್ತಮ ಜೊತೆಯಾಟ ನಡೆಸಿದ ಪರಿಣಾಮ ಸೋಲನುಭವಿಸುವುದನ್ನು ತಪ್ಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X