ವಿಶ್ವಕಪ್ ಫೈನಲ್ | ಆರಂಭದಲ್ಲೇ 3 ವಿಕೆಟ್ ಕಿತ್ತು ಆಸೀಸ್‌ಗೆ ಒತ್ತಡ ಹೇರಿದ ಟೀಮ್ ಇಂಡಿಯಾ

Date:

Advertisements

ಅಹಮದಾಬಾದ್‌ನ ಮೊಟೆರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ನೀಡಿರುವ 241 ರನ್‌ಗಳ ಸವಾಲನ್ನು ಬೆನ್ನತ್ತಿರುವ ಆಸೀಸ್‌ಗೆ ಬೌಲರ್‌ಗಳು ಆರಂಭದಲ್ಲೇ ಪ್ರಮುಖ ಮೂರು ವಿಕೆಟ್‌ಗಳನ್ನು ಕೀಳುವ ಮೂಲಕ ಒತ್ತಡ ಹೇರುವಲ್ಲಿ ಯಶಸ್ವಿಯಾಗಿದ್ದಾರೆ.

ಬುಮ್ರಾ ಎಸೆದ ಮೊದಲ ಓವರ್‌ನಲ್ಲೇ ಆಸೀಸ್‌ನ ಆರಂಭಿಕ ಬ್ಯಾಟರ್‌ಗಳು 15 ರನ್‌ಗಳನ್ನು ಬಾಚುವ ಮೂಲಕ ಸ್ಫೋಟಕ ಆರಂಭದ ಮುನ್ಸೂಚನೆ ನೀಡಿದರು. ಆದರೆ ಇದಕ್ಕೆ 2ನೇ ಓವರ್ ಎಸೆದ ಸೆಮಿಫೈನಲ್‌ ಪಂದ್ಯದ ಮೊಹಮ್ಮದ್ ಶಮಿ ಅವಕಾಶ ನೀಡಲಿಲ್ಲ.

ಮೊಹಮ್ಮದ್ ಶಮಿ ಎಸೆದ 2ನೇ ಓವರ್​ನ 2ನೇ ಎಸೆತದಲ್ಲಿ ಸ್ಲಿಪ್​ನಲ್ಲಿದ್ದ ವಿರಾಟ್ ಕೊಹ್ಲಿಗೆ ಕ್ಯಾಚ್ ನೀಡುವ ಮೂಲಕ ಡೇವಿಡ್ ವಾರ್ನರ್ 7 ರನ್ ಬಾರಿಸಿ ಔಟಾದರೆ, ಜಸ್​ಪ್ರೀತ್ ಬುಮ್ರಾ ಎಸೆದ 5ನೇ ಓವರ್​ನ 3ನೇ ಎಸೆತದಲ್ಲಿ ವಿಕೆಟ್ ಕೀಪರ್​ ಕೆಎಲ್ ರಾಹುಲ್​ಗೆ ಕ್ಯಾಚ್ ನೀಡಿ 15 ಎಸೆತಗಳಲ್ಲಿ 15 ರನ್ ಬಾರಿಸಿದ್ದ ಮಿಚೆಲ್ ಮಾರ್ಷ್​ ಔಟಾದರು.

Advertisements

ಆ ಬಳಿಕ ಜಸ್​ಪ್ರೀತ್ ಬುಮ್ರಾ ಎಸೆದ 7ನೇ ಓವರ್​ನ 4ನೇ ಎಸೆತದಲ್ಲಿ ಆಕರ್ಷಕ ಸ್ಟ್ರೈಡ್ ಡ್ರೈವ್ ಫೋರ್ ಬಾರಿಸಿದ ಸ್ಟೀವ್ ಸ್ಮಿತ್, ಕೊನೆಯ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಬಲೆಗೆ ಬಿದ್ದು, 4 ರನ್ ಗಳಿಸಿದ್ದ ಸ್ಟೀವ್ ಸ್ಮಿತ್ ನಿರ್ಗಮಿಸಿದರು. ಆ ಮೂಲಕ ಟೀಮ್ ಇಂಡಿಯಾಗೆ ಜಸ್​ಪ್ರೀತ್ ಬುಮ್ರಾ ಮೂರನೇ ಯಶಸ್ಸು ತಂದುಕೊಟ್ಟರು.

ಸ್ಟೀವ್ ಸ್ಮಿತ್ ಎಲ್‌ಬಿಡಬ್ಲ್ಯೂ ನಿಜವಾಗಿಯೂ ಔಟ್ ಅಲ್ಲ ಎನ್ನಲಾಗಿದೆ. ರೀವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ಅದನ್ನು ಬಳಸಿಕೊಳ್ಳದೇ, ನೇರವಾಗಿ ಪೆವಿಲಿಯನ್ ಕಡೆಗೆ ತೆರಳಿದರು.

ಸದ್ಯ 16 ಓವರ್‌ಗಳು ಮುಕ್ತಾಯವಾಗಿದ್ದು, ಆಸ್ಟ್ರೇಲಿಯಾ 3 ವಿಕೆಟ್ ಕಳೆದುಕೊಂಡು 87 ರನ್ ದಾಖಲಿಸಿದೆ. ಟ್ರಾವಿಸ್ ಹೆಡ್ ಹಾಗೂ ಲಾಬೂಶೈನ್ ಕ್ರೀಸ್‌ನಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X